Homeಮುಖಪುಟಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಝೀ ನ್ಯೂಸ್‌ಗೆ ಅವರ ಚಾನೆಲ್‌ನಲ್ಲೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ

- Advertisement -
- Advertisement -

ಲೈವ್‌‌‌ ಇದೆ ಎಂದು ಖಚಿತಪಡಿಸಿ ಭಾರತೀಯ ಕ್ರಿಕೆಟ್ ಅಭಿಮಾನಿಯೊಬ್ಬರು ಝೀ ನ್ಯೂಸ್‌ ಅನ್ನು “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್” ಎಂದು ತರಾಟೆಗೆ ಪಡೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ಭಾರತ-ಇಂಗ್ಲೇಂಡ್‌ ಟಿ20 ವಿಶ್ವಕಪ್‌ ಸಮಿಫೈನಲ್‌‌‌ ಪಂದ್ಯದ ನಡೆದಿದೆ. ಕನಿಷ್ಠ ಪಕ್ಷ ಇಲ್ಲಾದರೂ ಕೋಮುವಾದ ಮಾಡಬೇಡಿ ಎಂದು ಅವರು ಕ್ಯಾಮರಾ ಮುಂದೆ ಹೇಳಿದ್ದು, ಅದು ಝೀ ನ್ಯೂಸ್‌ನಲ್ಲೆ ಲೈ‌ವ್‌ ಪ್ರಸಾರವಾಗಿದೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಝೀ ನ್ಯೂಸ್‌ಗೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ. ಝೀ ನ್ಯೂಸ್‌ ದೇಶದ ಪ್ರಮುಖ ಸುದ್ದಿ ವಾಹಿನಿಯಾಗಿದ್ದು, ಅದು ತನ್ನ ಕೋಮುವಾದಿ ಕಾರ್ಯಕ್ರಮಗಳಿಗೆ ಪ್ರಸಿದ್ದವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್‌ ವಿರುದ್ಧ ಸೋತ ನಂತರ ಅಡಿಲೇಡ್‌ನಿಂದ ಈ ಲೈವ್‌ ಅನ್ನು ಝೀ ನ್ಯೂಸ್ ‌ಪ್ರಸಾರ ಮಾಡಿತ್ತು. ಪಂದ್ಯದ ಬಗ್ಗೆ ಝೀ ಟಿವಿಯು ಅಲ್ಲಿ ಅಭಿಮಾನಿಗಳ ಜೊತೆಗೆ ಅಭಿಪ್ರಾಯವನ್ನು ಕೇಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

“ನೋಡಿ, ಮೊದಲನೆಯದಾಗಿ ಇದು ಒಂದು ಆಟವಾಗಿದೆ. ನಮ್ಮ ಕೈಯಲ್ಲೋ, ಇನ್ನೊಬ್ಬ ಕೈಯ್ಯಲ್ಲೊ…ಎಲ್ಲವೂ ಸರಿ, ಬಿಡಿ” ಭಾರತೀಯ ಅಭಿಮಾನಿ ಝೀ ನ್ಯೂಸ್‌ ಕ್ಯಾಮೆರಾದ ಮುಂದೆ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, “ಇದು ಲೈವ್ ಆಗುತ್ತಿದೆಯೇ?” ಎಂದು ಅವರು ಕೇಳಿದ್ದು, ವರದಿಗಾರ ಹೌದು ಲೈವ್‌ ಆಗುತ್ತಿದೆ ಎಂದು ಹೇಳಿದ್ದಾರೆ. “ಸರಿ, ಇದು ಝೀ ಟಿವಿ, ಮೊದಲನೆಯದಾಗಿ ನಿಮಗೆ ಹೇಳಲು ಇಚ್ಛಿಸುವುದೇನೆಂದರೆ, ನಿಮಗೆ ಅಭ್ಯಂತರವಿಲ್ಲದಿದ್ದರೆ, ಕನಿಷ್ಠ ಇಲ್ಲಾದರೂ ಹಿಂದೂ-ಮುಸ್ಲಿಂ ಮಾಡಬೇಡಿ” ಎನ್ನುತ್ತಿದ್ದಂತೆ ವರದಿಗಾರ ಕ್ಯಾಮರಾವನ್ನು ತಿರುಗಿಸುತ್ತಾರೆ.

ಈ ವೇಳೆ ಯುವಕ, “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್‌‌” ಎಂದು ಕಿರುಚಿ ಹೇಳಿದ್ದಾರೆ. ಅವರು ಮಾತು ಝೀ ಟಿವಿಯಲ್ಲಿ ಲೈವ್‌ ಪ್ರಸಾರವಾಗಿದೆ.

ಝೀ ನ್ಯೂಸ್ ಆಗಾಗ್ಗೆ ದ್ವೇಷದ ಭಾಷಣವನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈ ವರ್ಷದ ಆರಂಭದಲ್ಲಿ, ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ವು ಝೀ ಟಿವಿಗೆ ಮುಸ್ಲಿಂ ಜನಸಂಖ್ಯೆಯ ಮೇಲಿನ ಕಾರ್ಯಕ್ರಮವನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು. ಜೊತಗೆ ಚಾನೆಲ್‌ ಅಜೆಂಡಾಕ್ಕಾಗಿ ಇದನ್ನು ಮಾಡುತ್ತಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ಘಟನೆ ನಂತರ ನ್ಯೂಸ್ ಲಾಂಡ್ರಿ ಯುವಕನನ್ನು ಮಾತನಾಡಿಸಿದೆ. ವೂಲ್‌ವರ್ತ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಮತ್ತು ಕಳೆದ ಏಳು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿರುವ ಸಾಹಿಲ್ ಸರೋಯಾ, “ನನ್ನ ದೇಶದ ಮಾಧ್ಯಮಗಳ ಸ್ಥಿತಿ ನನ್ನನ್ನು ಅಸಮಾಧಾನಗೊಳಿಸಿದೆ” ಎಂದು ಹೇಳಿದ್ದಾರೆ.

“ನಾನು ಪ್ರತಿ ತಿಂಗಳು ಭಾರತಕ್ಕೆ ಹೋಗಲು ಸಾಧ್ಯವಿಲ್ಲ… ನಾನು ಮಾಡಬಹುದಾದ ಎಲ್ಲವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚು ತಲುಪುವುದಿಲ್ಲ. ಹಾಗಾಗಿ ನಿನ್ನೆ ನಾನು ಅಲ್ಲಿ ಝೀ ನ್ಯೂಸ್ ಮೈಕ್ ಅನ್ನು ನೋಡಿದೆ, ಆ ವೇಳೆ ಅವರು ಲೈವ್ ಆಗಿದ್ದರು. ಝೀಟಿವಿ ಏನು ಮಾಡುತ್ತಿದೆ ಮತ್ತು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ವೀಕ್ಷಕರಿಗೆ ಬಹಿರಂಗಪಡಿಸುವುದು ಅಥವಾ ಹೇಳುವುದು ನನ್ನ ಏಕೈಕ ಉದ್ದೇಶವಾಗಿತ್ತು.” ಎಂದು ಸಾಹಿಲ್ ಹೇಳಿದ್ದಾರೆ.

“ನಾನು ಅನೇಕ ವಿಷಯಗಳನ್ನು ಸಭ್ಯ ರೀತಿಯಲ್ಲಿ ಹೇಳಲು ಬಯಸಿದ್ದೆ. ಆದರೆ ವರದಿಗಾರ ನನ್ನನ್ನು ತಳ್ಳಿದ್ದರಿಂದ ನನಗೆ ಕೆಟ್ಟದು ಅನಿಸಿತು, ಹಾಗಾಗಿ ನಾನು ಅಲ್ಲಿಂದ ಹೊರಟೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಮತಗಣನೆಯಲ್ಲಿ ಚಿಲಿಯ ಹೊಸ ಸಂವಿಧಾನ ಸೋತದ್ದೇಕೆ? ಮಾಧ್ಯಮಗಳ ಪಾತ್ರವೇನು?

ಭಾರತದ ಮಾಧ್ಯಮದ ಸ್ಥಿತಿಯ ಬಗ್ಗೆ ಮಾತನಾಡಿದ ಅವರು, ಆಸ್ಟ್ರೇಲಿಯಾದ ಮಾಧ್ಯಮಕ್ಕೆ ಭಾರತದ ಮಾಧ್ಯಮಗಳನ್ನು ಹೋಲಿಸುವುದಿಲ್ಲ. ಆದರೆ ನಮ್ಮ ಮಾಧ್ಯಮಗಳು ಅತ್ಯಂತ ಕೆಳಮಟ್ಟಕ್ಕೆ ಹೋಗಿವೆ ಮತ್ತು ಇಲ್ಲಿನ ಜನರು ಟಿವಿಯಲ್ಲಿ ಸರ್ಕಸ್ ಆಡುವ ಆಂಕರ್‌ಗಳನ್ನು ಗೇಲಿ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಭಾರತದ ಮಾಧ್ಯಮಗಳು ಧರ್ಮ, ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ. ನನ್ನ ಬಾಲ್ಯದಲ್ಲಿ ಜನರು ಈ ವಿಷಯಗಳ ಬಗ್ಗೆ ಎಂದಿಗೂ ಜಗಳವಾಡಿಲ್ಲ. ಆದರೆ ಈಗ ಎಲ್ಲೆಡೆ, ಹಿಂದೂ-ಮುಸ್ಲಿಂ, ಹಿಂದೂ-ಮುಸ್ಲಿಂ ಎಂದು ಜಗಳಗಳಾಗುತ್ತಿವೆ. ಇದಕ್ಕೆಲ್ಲಾ ಕಾರಣ ಈ ಪ್ರೊಪಗಾಂಡ ವಾಹಿನಿಗಳು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯರು ಈಗಲೂ ಧರ್ಮದ ಆಧಾರದಲ್ಲಿ ಸ್ನೇಹಿತರನ್ನು ಹೊಂದುವುದಿಲ್ಲ ಮತ್ತು ವ್ಯವಹಾರ ಗಳನ್ನೂ ಮಾಡುವುದಿಲ್ಲ
    ಜಾತಿ ಧರ್ಮಗಳ ಆಧಾರದಲ್ಲಿ ವಿಭಜನೆ ಆಗುತ್ತಿರುವುದು ರಾಜಕಾರಣಿ ಮತ್ತು ಮಾಧ್ಯಮಗಳಿಂದ ಮಾತ್ರ.
    ನಿರ್ಲಕ್ಷವೇ ಪರಿಹಾರ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...