Homeಮುಖಪುಟಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಝೀ ನ್ಯೂಸ್‌ಗೆ ಅವರ ಚಾನೆಲ್‌ನಲ್ಲೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ

- Advertisement -
- Advertisement -

ಲೈವ್‌‌‌ ಇದೆ ಎಂದು ಖಚಿತಪಡಿಸಿ ಭಾರತೀಯ ಕ್ರಿಕೆಟ್ ಅಭಿಮಾನಿಯೊಬ್ಬರು ಝೀ ನ್ಯೂಸ್‌ ಅನ್ನು “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್” ಎಂದು ತರಾಟೆಗೆ ಪಡೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ಭಾರತ-ಇಂಗ್ಲೇಂಡ್‌ ಟಿ20 ವಿಶ್ವಕಪ್‌ ಸಮಿಫೈನಲ್‌‌‌ ಪಂದ್ಯದ ನಡೆದಿದೆ. ಕನಿಷ್ಠ ಪಕ್ಷ ಇಲ್ಲಾದರೂ ಕೋಮುವಾದ ಮಾಡಬೇಡಿ ಎಂದು ಅವರು ಕ್ಯಾಮರಾ ಮುಂದೆ ಹೇಳಿದ್ದು, ಅದು ಝೀ ನ್ಯೂಸ್‌ನಲ್ಲೆ ಲೈ‌ವ್‌ ಪ್ರಸಾರವಾಗಿದೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಝೀ ನ್ಯೂಸ್‌ಗೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ. ಝೀ ನ್ಯೂಸ್‌ ದೇಶದ ಪ್ರಮುಖ ಸುದ್ದಿ ವಾಹಿನಿಯಾಗಿದ್ದು, ಅದು ತನ್ನ ಕೋಮುವಾದಿ ಕಾರ್ಯಕ್ರಮಗಳಿಗೆ ಪ್ರಸಿದ್ದವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್‌ ವಿರುದ್ಧ ಸೋತ ನಂತರ ಅಡಿಲೇಡ್‌ನಿಂದ ಈ ಲೈವ್‌ ಅನ್ನು ಝೀ ನ್ಯೂಸ್ ‌ಪ್ರಸಾರ ಮಾಡಿತ್ತು. ಪಂದ್ಯದ ಬಗ್ಗೆ ಝೀ ಟಿವಿಯು ಅಲ್ಲಿ ಅಭಿಮಾನಿಗಳ ಜೊತೆಗೆ ಅಭಿಪ್ರಾಯವನ್ನು ಕೇಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

“ನೋಡಿ, ಮೊದಲನೆಯದಾಗಿ ಇದು ಒಂದು ಆಟವಾಗಿದೆ. ನಮ್ಮ ಕೈಯಲ್ಲೋ, ಇನ್ನೊಬ್ಬ ಕೈಯ್ಯಲ್ಲೊ…ಎಲ್ಲವೂ ಸರಿ, ಬಿಡಿ” ಭಾರತೀಯ ಅಭಿಮಾನಿ ಝೀ ನ್ಯೂಸ್‌ ಕ್ಯಾಮೆರಾದ ಮುಂದೆ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, “ಇದು ಲೈವ್ ಆಗುತ್ತಿದೆಯೇ?” ಎಂದು ಅವರು ಕೇಳಿದ್ದು, ವರದಿಗಾರ ಹೌದು ಲೈವ್‌ ಆಗುತ್ತಿದೆ ಎಂದು ಹೇಳಿದ್ದಾರೆ. “ಸರಿ, ಇದು ಝೀ ಟಿವಿ, ಮೊದಲನೆಯದಾಗಿ ನಿಮಗೆ ಹೇಳಲು ಇಚ್ಛಿಸುವುದೇನೆಂದರೆ, ನಿಮಗೆ ಅಭ್ಯಂತರವಿಲ್ಲದಿದ್ದರೆ, ಕನಿಷ್ಠ ಇಲ್ಲಾದರೂ ಹಿಂದೂ-ಮುಸ್ಲಿಂ ಮಾಡಬೇಡಿ” ಎನ್ನುತ್ತಿದ್ದಂತೆ ವರದಿಗಾರ ಕ್ಯಾಮರಾವನ್ನು ತಿರುಗಿಸುತ್ತಾರೆ.

ಈ ವೇಳೆ ಯುವಕ, “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್‌‌” ಎಂದು ಕಿರುಚಿ ಹೇಳಿದ್ದಾರೆ. ಅವರು ಮಾತು ಝೀ ಟಿವಿಯಲ್ಲಿ ಲೈವ್‌ ಪ್ರಸಾರವಾಗಿದೆ.

ಝೀ ನ್ಯೂಸ್ ಆಗಾಗ್ಗೆ ದ್ವೇಷದ ಭಾಷಣವನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈ ವರ್ಷದ ಆರಂಭದಲ್ಲಿ, ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ವು ಝೀ ಟಿವಿಗೆ ಮುಸ್ಲಿಂ ಜನಸಂಖ್ಯೆಯ ಮೇಲಿನ ಕಾರ್ಯಕ್ರಮವನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು. ಜೊತಗೆ ಚಾನೆಲ್‌ ಅಜೆಂಡಾಕ್ಕಾಗಿ ಇದನ್ನು ಮಾಡುತ್ತಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ಘಟನೆ ನಂತರ ನ್ಯೂಸ್ ಲಾಂಡ್ರಿ ಯುವಕನನ್ನು ಮಾತನಾಡಿಸಿದೆ. ವೂಲ್‌ವರ್ತ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಮತ್ತು ಕಳೆದ ಏಳು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿರುವ ಸಾಹಿಲ್ ಸರೋಯಾ, “ನನ್ನ ದೇಶದ ಮಾಧ್ಯಮಗಳ ಸ್ಥಿತಿ ನನ್ನನ್ನು ಅಸಮಾಧಾನಗೊಳಿಸಿದೆ” ಎಂದು ಹೇಳಿದ್ದಾರೆ.

“ನಾನು ಪ್ರತಿ ತಿಂಗಳು ಭಾರತಕ್ಕೆ ಹೋಗಲು ಸಾಧ್ಯವಿಲ್ಲ… ನಾನು ಮಾಡಬಹುದಾದ ಎಲ್ಲವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚು ತಲುಪುವುದಿಲ್ಲ. ಹಾಗಾಗಿ ನಿನ್ನೆ ನಾನು ಅಲ್ಲಿ ಝೀ ನ್ಯೂಸ್ ಮೈಕ್ ಅನ್ನು ನೋಡಿದೆ, ಆ ವೇಳೆ ಅವರು ಲೈವ್ ಆಗಿದ್ದರು. ಝೀಟಿವಿ ಏನು ಮಾಡುತ್ತಿದೆ ಮತ್ತು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ವೀಕ್ಷಕರಿಗೆ ಬಹಿರಂಗಪಡಿಸುವುದು ಅಥವಾ ಹೇಳುವುದು ನನ್ನ ಏಕೈಕ ಉದ್ದೇಶವಾಗಿತ್ತು.” ಎಂದು ಸಾಹಿಲ್ ಹೇಳಿದ್ದಾರೆ.

“ನಾನು ಅನೇಕ ವಿಷಯಗಳನ್ನು ಸಭ್ಯ ರೀತಿಯಲ್ಲಿ ಹೇಳಲು ಬಯಸಿದ್ದೆ. ಆದರೆ ವರದಿಗಾರ ನನ್ನನ್ನು ತಳ್ಳಿದ್ದರಿಂದ ನನಗೆ ಕೆಟ್ಟದು ಅನಿಸಿತು, ಹಾಗಾಗಿ ನಾನು ಅಲ್ಲಿಂದ ಹೊರಟೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಮತಗಣನೆಯಲ್ಲಿ ಚಿಲಿಯ ಹೊಸ ಸಂವಿಧಾನ ಸೋತದ್ದೇಕೆ? ಮಾಧ್ಯಮಗಳ ಪಾತ್ರವೇನು?

ಭಾರತದ ಮಾಧ್ಯಮದ ಸ್ಥಿತಿಯ ಬಗ್ಗೆ ಮಾತನಾಡಿದ ಅವರು, ಆಸ್ಟ್ರೇಲಿಯಾದ ಮಾಧ್ಯಮಕ್ಕೆ ಭಾರತದ ಮಾಧ್ಯಮಗಳನ್ನು ಹೋಲಿಸುವುದಿಲ್ಲ. ಆದರೆ ನಮ್ಮ ಮಾಧ್ಯಮಗಳು ಅತ್ಯಂತ ಕೆಳಮಟ್ಟಕ್ಕೆ ಹೋಗಿವೆ ಮತ್ತು ಇಲ್ಲಿನ ಜನರು ಟಿವಿಯಲ್ಲಿ ಸರ್ಕಸ್ ಆಡುವ ಆಂಕರ್‌ಗಳನ್ನು ಗೇಲಿ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಭಾರತದ ಮಾಧ್ಯಮಗಳು ಧರ್ಮ, ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ. ನನ್ನ ಬಾಲ್ಯದಲ್ಲಿ ಜನರು ಈ ವಿಷಯಗಳ ಬಗ್ಗೆ ಎಂದಿಗೂ ಜಗಳವಾಡಿಲ್ಲ. ಆದರೆ ಈಗ ಎಲ್ಲೆಡೆ, ಹಿಂದೂ-ಮುಸ್ಲಿಂ, ಹಿಂದೂ-ಮುಸ್ಲಿಂ ಎಂದು ಜಗಳಗಳಾಗುತ್ತಿವೆ. ಇದಕ್ಕೆಲ್ಲಾ ಕಾರಣ ಈ ಪ್ರೊಪಗಾಂಡ ವಾಹಿನಿಗಳು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯರು ಈಗಲೂ ಧರ್ಮದ ಆಧಾರದಲ್ಲಿ ಸ್ನೇಹಿತರನ್ನು ಹೊಂದುವುದಿಲ್ಲ ಮತ್ತು ವ್ಯವಹಾರ ಗಳನ್ನೂ ಮಾಡುವುದಿಲ್ಲ
    ಜಾತಿ ಧರ್ಮಗಳ ಆಧಾರದಲ್ಲಿ ವಿಭಜನೆ ಆಗುತ್ತಿರುವುದು ರಾಜಕಾರಣಿ ಮತ್ತು ಮಾಧ್ಯಮಗಳಿಂದ ಮಾತ್ರ.
    ನಿರ್ಲಕ್ಷವೇ ಪರಿಹಾರ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...