Homeಮುಖಪುಟಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಝೀ ನ್ಯೂಸ್‌ಗೆ ಅವರ ಚಾನೆಲ್‌ನಲ್ಲೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ

- Advertisement -
- Advertisement -

ಲೈವ್‌‌‌ ಇದೆ ಎಂದು ಖಚಿತಪಡಿಸಿ ಭಾರತೀಯ ಕ್ರಿಕೆಟ್ ಅಭಿಮಾನಿಯೊಬ್ಬರು ಝೀ ನ್ಯೂಸ್‌ ಅನ್ನು “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್” ಎಂದು ತರಾಟೆಗೆ ಪಡೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ಭಾರತ-ಇಂಗ್ಲೇಂಡ್‌ ಟಿ20 ವಿಶ್ವಕಪ್‌ ಸಮಿಫೈನಲ್‌‌‌ ಪಂದ್ಯದ ನಡೆದಿದೆ. ಕನಿಷ್ಠ ಪಕ್ಷ ಇಲ್ಲಾದರೂ ಕೋಮುವಾದ ಮಾಡಬೇಡಿ ಎಂದು ಅವರು ಕ್ಯಾಮರಾ ಮುಂದೆ ಹೇಳಿದ್ದು, ಅದು ಝೀ ನ್ಯೂಸ್‌ನಲ್ಲೆ ಲೈ‌ವ್‌ ಪ್ರಸಾರವಾಗಿದೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಝೀ ನ್ಯೂಸ್‌ಗೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ. ಝೀ ನ್ಯೂಸ್‌ ದೇಶದ ಪ್ರಮುಖ ಸುದ್ದಿ ವಾಹಿನಿಯಾಗಿದ್ದು, ಅದು ತನ್ನ ಕೋಮುವಾದಿ ಕಾರ್ಯಕ್ರಮಗಳಿಗೆ ಪ್ರಸಿದ್ದವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್‌ ವಿರುದ್ಧ ಸೋತ ನಂತರ ಅಡಿಲೇಡ್‌ನಿಂದ ಈ ಲೈವ್‌ ಅನ್ನು ಝೀ ನ್ಯೂಸ್ ‌ಪ್ರಸಾರ ಮಾಡಿತ್ತು. ಪಂದ್ಯದ ಬಗ್ಗೆ ಝೀ ಟಿವಿಯು ಅಲ್ಲಿ ಅಭಿಮಾನಿಗಳ ಜೊತೆಗೆ ಅಭಿಪ್ರಾಯವನ್ನು ಕೇಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

“ನೋಡಿ, ಮೊದಲನೆಯದಾಗಿ ಇದು ಒಂದು ಆಟವಾಗಿದೆ. ನಮ್ಮ ಕೈಯಲ್ಲೋ, ಇನ್ನೊಬ್ಬ ಕೈಯ್ಯಲ್ಲೊ…ಎಲ್ಲವೂ ಸರಿ, ಬಿಡಿ” ಭಾರತೀಯ ಅಭಿಮಾನಿ ಝೀ ನ್ಯೂಸ್‌ ಕ್ಯಾಮೆರಾದ ಮುಂದೆ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, “ಇದು ಲೈವ್ ಆಗುತ್ತಿದೆಯೇ?” ಎಂದು ಅವರು ಕೇಳಿದ್ದು, ವರದಿಗಾರ ಹೌದು ಲೈವ್‌ ಆಗುತ್ತಿದೆ ಎಂದು ಹೇಳಿದ್ದಾರೆ. “ಸರಿ, ಇದು ಝೀ ಟಿವಿ, ಮೊದಲನೆಯದಾಗಿ ನಿಮಗೆ ಹೇಳಲು ಇಚ್ಛಿಸುವುದೇನೆಂದರೆ, ನಿಮಗೆ ಅಭ್ಯಂತರವಿಲ್ಲದಿದ್ದರೆ, ಕನಿಷ್ಠ ಇಲ್ಲಾದರೂ ಹಿಂದೂ-ಮುಸ್ಲಿಂ ಮಾಡಬೇಡಿ” ಎನ್ನುತ್ತಿದ್ದಂತೆ ವರದಿಗಾರ ಕ್ಯಾಮರಾವನ್ನು ತಿರುಗಿಸುತ್ತಾರೆ.

ಈ ವೇಳೆ ಯುವಕ, “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್‌‌” ಎಂದು ಕಿರುಚಿ ಹೇಳಿದ್ದಾರೆ. ಅವರು ಮಾತು ಝೀ ಟಿವಿಯಲ್ಲಿ ಲೈವ್‌ ಪ್ರಸಾರವಾಗಿದೆ.

ಝೀ ನ್ಯೂಸ್ ಆಗಾಗ್ಗೆ ದ್ವೇಷದ ಭಾಷಣವನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈ ವರ್ಷದ ಆರಂಭದಲ್ಲಿ, ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ವು ಝೀ ಟಿವಿಗೆ ಮುಸ್ಲಿಂ ಜನಸಂಖ್ಯೆಯ ಮೇಲಿನ ಕಾರ್ಯಕ್ರಮವನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು. ಜೊತಗೆ ಚಾನೆಲ್‌ ಅಜೆಂಡಾಕ್ಕಾಗಿ ಇದನ್ನು ಮಾಡುತ್ತಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ಘಟನೆ ನಂತರ ನ್ಯೂಸ್ ಲಾಂಡ್ರಿ ಯುವಕನನ್ನು ಮಾತನಾಡಿಸಿದೆ. ವೂಲ್‌ವರ್ತ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಮತ್ತು ಕಳೆದ ಏಳು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿರುವ ಸಾಹಿಲ್ ಸರೋಯಾ, “ನನ್ನ ದೇಶದ ಮಾಧ್ಯಮಗಳ ಸ್ಥಿತಿ ನನ್ನನ್ನು ಅಸಮಾಧಾನಗೊಳಿಸಿದೆ” ಎಂದು ಹೇಳಿದ್ದಾರೆ.

“ನಾನು ಪ್ರತಿ ತಿಂಗಳು ಭಾರತಕ್ಕೆ ಹೋಗಲು ಸಾಧ್ಯವಿಲ್ಲ… ನಾನು ಮಾಡಬಹುದಾದ ಎಲ್ಲವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚು ತಲುಪುವುದಿಲ್ಲ. ಹಾಗಾಗಿ ನಿನ್ನೆ ನಾನು ಅಲ್ಲಿ ಝೀ ನ್ಯೂಸ್ ಮೈಕ್ ಅನ್ನು ನೋಡಿದೆ, ಆ ವೇಳೆ ಅವರು ಲೈವ್ ಆಗಿದ್ದರು. ಝೀಟಿವಿ ಏನು ಮಾಡುತ್ತಿದೆ ಮತ್ತು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ವೀಕ್ಷಕರಿಗೆ ಬಹಿರಂಗಪಡಿಸುವುದು ಅಥವಾ ಹೇಳುವುದು ನನ್ನ ಏಕೈಕ ಉದ್ದೇಶವಾಗಿತ್ತು.” ಎಂದು ಸಾಹಿಲ್ ಹೇಳಿದ್ದಾರೆ.

“ನಾನು ಅನೇಕ ವಿಷಯಗಳನ್ನು ಸಭ್ಯ ರೀತಿಯಲ್ಲಿ ಹೇಳಲು ಬಯಸಿದ್ದೆ. ಆದರೆ ವರದಿಗಾರ ನನ್ನನ್ನು ತಳ್ಳಿದ್ದರಿಂದ ನನಗೆ ಕೆಟ್ಟದು ಅನಿಸಿತು, ಹಾಗಾಗಿ ನಾನು ಅಲ್ಲಿಂದ ಹೊರಟೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಮತಗಣನೆಯಲ್ಲಿ ಚಿಲಿಯ ಹೊಸ ಸಂವಿಧಾನ ಸೋತದ್ದೇಕೆ? ಮಾಧ್ಯಮಗಳ ಪಾತ್ರವೇನು?

ಭಾರತದ ಮಾಧ್ಯಮದ ಸ್ಥಿತಿಯ ಬಗ್ಗೆ ಮಾತನಾಡಿದ ಅವರು, ಆಸ್ಟ್ರೇಲಿಯಾದ ಮಾಧ್ಯಮಕ್ಕೆ ಭಾರತದ ಮಾಧ್ಯಮಗಳನ್ನು ಹೋಲಿಸುವುದಿಲ್ಲ. ಆದರೆ ನಮ್ಮ ಮಾಧ್ಯಮಗಳು ಅತ್ಯಂತ ಕೆಳಮಟ್ಟಕ್ಕೆ ಹೋಗಿವೆ ಮತ್ತು ಇಲ್ಲಿನ ಜನರು ಟಿವಿಯಲ್ಲಿ ಸರ್ಕಸ್ ಆಡುವ ಆಂಕರ್‌ಗಳನ್ನು ಗೇಲಿ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಭಾರತದ ಮಾಧ್ಯಮಗಳು ಧರ್ಮ, ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ. ನನ್ನ ಬಾಲ್ಯದಲ್ಲಿ ಜನರು ಈ ವಿಷಯಗಳ ಬಗ್ಗೆ ಎಂದಿಗೂ ಜಗಳವಾಡಿಲ್ಲ. ಆದರೆ ಈಗ ಎಲ್ಲೆಡೆ, ಹಿಂದೂ-ಮುಸ್ಲಿಂ, ಹಿಂದೂ-ಮುಸ್ಲಿಂ ಎಂದು ಜಗಳಗಳಾಗುತ್ತಿವೆ. ಇದಕ್ಕೆಲ್ಲಾ ಕಾರಣ ಈ ಪ್ರೊಪಗಾಂಡ ವಾಹಿನಿಗಳು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯರು ಈಗಲೂ ಧರ್ಮದ ಆಧಾರದಲ್ಲಿ ಸ್ನೇಹಿತರನ್ನು ಹೊಂದುವುದಿಲ್ಲ ಮತ್ತು ವ್ಯವಹಾರ ಗಳನ್ನೂ ಮಾಡುವುದಿಲ್ಲ
    ಜಾತಿ ಧರ್ಮಗಳ ಆಧಾರದಲ್ಲಿ ವಿಭಜನೆ ಆಗುತ್ತಿರುವುದು ರಾಜಕಾರಣಿ ಮತ್ತು ಮಾಧ್ಯಮಗಳಿಂದ ಮಾತ್ರ.
    ನಿರ್ಲಕ್ಷವೇ ಪರಿಹಾರ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...