Homeಮುಖಪುಟಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಝೀ ನ್ಯೂಸ್‌ಗೆ ಅವರ ಚಾನೆಲ್‌ನಲ್ಲೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ

- Advertisement -
- Advertisement -

ಲೈವ್‌‌‌ ಇದೆ ಎಂದು ಖಚಿತಪಡಿಸಿ ಭಾರತೀಯ ಕ್ರಿಕೆಟ್ ಅಭಿಮಾನಿಯೊಬ್ಬರು ಝೀ ನ್ಯೂಸ್‌ ಅನ್ನು “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್” ಎಂದು ತರಾಟೆಗೆ ಪಡೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ಭಾರತ-ಇಂಗ್ಲೇಂಡ್‌ ಟಿ20 ವಿಶ್ವಕಪ್‌ ಸಮಿಫೈನಲ್‌‌‌ ಪಂದ್ಯದ ನಡೆದಿದೆ. ಕನಿಷ್ಠ ಪಕ್ಷ ಇಲ್ಲಾದರೂ ಕೋಮುವಾದ ಮಾಡಬೇಡಿ ಎಂದು ಅವರು ಕ್ಯಾಮರಾ ಮುಂದೆ ಹೇಳಿದ್ದು, ಅದು ಝೀ ನ್ಯೂಸ್‌ನಲ್ಲೆ ಲೈ‌ವ್‌ ಪ್ರಸಾರವಾಗಿದೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಝೀ ನ್ಯೂಸ್‌ಗೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ. ಝೀ ನ್ಯೂಸ್‌ ದೇಶದ ಪ್ರಮುಖ ಸುದ್ದಿ ವಾಹಿನಿಯಾಗಿದ್ದು, ಅದು ತನ್ನ ಕೋಮುವಾದಿ ಕಾರ್ಯಕ್ರಮಗಳಿಗೆ ಪ್ರಸಿದ್ದವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್‌ ವಿರುದ್ಧ ಸೋತ ನಂತರ ಅಡಿಲೇಡ್‌ನಿಂದ ಈ ಲೈವ್‌ ಅನ್ನು ಝೀ ನ್ಯೂಸ್ ‌ಪ್ರಸಾರ ಮಾಡಿತ್ತು. ಪಂದ್ಯದ ಬಗ್ಗೆ ಝೀ ಟಿವಿಯು ಅಲ್ಲಿ ಅಭಿಮಾನಿಗಳ ಜೊತೆಗೆ ಅಭಿಪ್ರಾಯವನ್ನು ಕೇಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

“ನೋಡಿ, ಮೊದಲನೆಯದಾಗಿ ಇದು ಒಂದು ಆಟವಾಗಿದೆ. ನಮ್ಮ ಕೈಯಲ್ಲೋ, ಇನ್ನೊಬ್ಬ ಕೈಯ್ಯಲ್ಲೊ…ಎಲ್ಲವೂ ಸರಿ, ಬಿಡಿ” ಭಾರತೀಯ ಅಭಿಮಾನಿ ಝೀ ನ್ಯೂಸ್‌ ಕ್ಯಾಮೆರಾದ ಮುಂದೆ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, “ಇದು ಲೈವ್ ಆಗುತ್ತಿದೆಯೇ?” ಎಂದು ಅವರು ಕೇಳಿದ್ದು, ವರದಿಗಾರ ಹೌದು ಲೈವ್‌ ಆಗುತ್ತಿದೆ ಎಂದು ಹೇಳಿದ್ದಾರೆ. “ಸರಿ, ಇದು ಝೀ ಟಿವಿ, ಮೊದಲನೆಯದಾಗಿ ನಿಮಗೆ ಹೇಳಲು ಇಚ್ಛಿಸುವುದೇನೆಂದರೆ, ನಿಮಗೆ ಅಭ್ಯಂತರವಿಲ್ಲದಿದ್ದರೆ, ಕನಿಷ್ಠ ಇಲ್ಲಾದರೂ ಹಿಂದೂ-ಮುಸ್ಲಿಂ ಮಾಡಬೇಡಿ” ಎನ್ನುತ್ತಿದ್ದಂತೆ ವರದಿಗಾರ ಕ್ಯಾಮರಾವನ್ನು ತಿರುಗಿಸುತ್ತಾರೆ.

ಈ ವೇಳೆ ಯುವಕ, “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್‌‌” ಎಂದು ಕಿರುಚಿ ಹೇಳಿದ್ದಾರೆ. ಅವರು ಮಾತು ಝೀ ಟಿವಿಯಲ್ಲಿ ಲೈವ್‌ ಪ್ರಸಾರವಾಗಿದೆ.

ಝೀ ನ್ಯೂಸ್ ಆಗಾಗ್ಗೆ ದ್ವೇಷದ ಭಾಷಣವನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈ ವರ್ಷದ ಆರಂಭದಲ್ಲಿ, ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ವು ಝೀ ಟಿವಿಗೆ ಮುಸ್ಲಿಂ ಜನಸಂಖ್ಯೆಯ ಮೇಲಿನ ಕಾರ್ಯಕ್ರಮವನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು. ಜೊತಗೆ ಚಾನೆಲ್‌ ಅಜೆಂಡಾಕ್ಕಾಗಿ ಇದನ್ನು ಮಾಡುತ್ತಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ಘಟನೆ ನಂತರ ನ್ಯೂಸ್ ಲಾಂಡ್ರಿ ಯುವಕನನ್ನು ಮಾತನಾಡಿಸಿದೆ. ವೂಲ್‌ವರ್ತ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಮತ್ತು ಕಳೆದ ಏಳು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿರುವ ಸಾಹಿಲ್ ಸರೋಯಾ, “ನನ್ನ ದೇಶದ ಮಾಧ್ಯಮಗಳ ಸ್ಥಿತಿ ನನ್ನನ್ನು ಅಸಮಾಧಾನಗೊಳಿಸಿದೆ” ಎಂದು ಹೇಳಿದ್ದಾರೆ.

“ನಾನು ಪ್ರತಿ ತಿಂಗಳು ಭಾರತಕ್ಕೆ ಹೋಗಲು ಸಾಧ್ಯವಿಲ್ಲ… ನಾನು ಮಾಡಬಹುದಾದ ಎಲ್ಲವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚು ತಲುಪುವುದಿಲ್ಲ. ಹಾಗಾಗಿ ನಿನ್ನೆ ನಾನು ಅಲ್ಲಿ ಝೀ ನ್ಯೂಸ್ ಮೈಕ್ ಅನ್ನು ನೋಡಿದೆ, ಆ ವೇಳೆ ಅವರು ಲೈವ್ ಆಗಿದ್ದರು. ಝೀಟಿವಿ ಏನು ಮಾಡುತ್ತಿದೆ ಮತ್ತು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ವೀಕ್ಷಕರಿಗೆ ಬಹಿರಂಗಪಡಿಸುವುದು ಅಥವಾ ಹೇಳುವುದು ನನ್ನ ಏಕೈಕ ಉದ್ದೇಶವಾಗಿತ್ತು.” ಎಂದು ಸಾಹಿಲ್ ಹೇಳಿದ್ದಾರೆ.

“ನಾನು ಅನೇಕ ವಿಷಯಗಳನ್ನು ಸಭ್ಯ ರೀತಿಯಲ್ಲಿ ಹೇಳಲು ಬಯಸಿದ್ದೆ. ಆದರೆ ವರದಿಗಾರ ನನ್ನನ್ನು ತಳ್ಳಿದ್ದರಿಂದ ನನಗೆ ಕೆಟ್ಟದು ಅನಿಸಿತು, ಹಾಗಾಗಿ ನಾನು ಅಲ್ಲಿಂದ ಹೊರಟೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಮತಗಣನೆಯಲ್ಲಿ ಚಿಲಿಯ ಹೊಸ ಸಂವಿಧಾನ ಸೋತದ್ದೇಕೆ? ಮಾಧ್ಯಮಗಳ ಪಾತ್ರವೇನು?

ಭಾರತದ ಮಾಧ್ಯಮದ ಸ್ಥಿತಿಯ ಬಗ್ಗೆ ಮಾತನಾಡಿದ ಅವರು, ಆಸ್ಟ್ರೇಲಿಯಾದ ಮಾಧ್ಯಮಕ್ಕೆ ಭಾರತದ ಮಾಧ್ಯಮಗಳನ್ನು ಹೋಲಿಸುವುದಿಲ್ಲ. ಆದರೆ ನಮ್ಮ ಮಾಧ್ಯಮಗಳು ಅತ್ಯಂತ ಕೆಳಮಟ್ಟಕ್ಕೆ ಹೋಗಿವೆ ಮತ್ತು ಇಲ್ಲಿನ ಜನರು ಟಿವಿಯಲ್ಲಿ ಸರ್ಕಸ್ ಆಡುವ ಆಂಕರ್‌ಗಳನ್ನು ಗೇಲಿ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಭಾರತದ ಮಾಧ್ಯಮಗಳು ಧರ್ಮ, ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ. ನನ್ನ ಬಾಲ್ಯದಲ್ಲಿ ಜನರು ಈ ವಿಷಯಗಳ ಬಗ್ಗೆ ಎಂದಿಗೂ ಜಗಳವಾಡಿಲ್ಲ. ಆದರೆ ಈಗ ಎಲ್ಲೆಡೆ, ಹಿಂದೂ-ಮುಸ್ಲಿಂ, ಹಿಂದೂ-ಮುಸ್ಲಿಂ ಎಂದು ಜಗಳಗಳಾಗುತ್ತಿವೆ. ಇದಕ್ಕೆಲ್ಲಾ ಕಾರಣ ಈ ಪ್ರೊಪಗಾಂಡ ವಾಹಿನಿಗಳು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯರು ಈಗಲೂ ಧರ್ಮದ ಆಧಾರದಲ್ಲಿ ಸ್ನೇಹಿತರನ್ನು ಹೊಂದುವುದಿಲ್ಲ ಮತ್ತು ವ್ಯವಹಾರ ಗಳನ್ನೂ ಮಾಡುವುದಿಲ್ಲ
    ಜಾತಿ ಧರ್ಮಗಳ ಆಧಾರದಲ್ಲಿ ವಿಭಜನೆ ಆಗುತ್ತಿರುವುದು ರಾಜಕಾರಣಿ ಮತ್ತು ಮಾಧ್ಯಮಗಳಿಂದ ಮಾತ್ರ.
    ನಿರ್ಲಕ್ಷವೇ ಪರಿಹಾರ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...