Homeಸಿನಿಮಾಕ್ರೀಡೆಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

ಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

- Advertisement -
- Advertisement -

2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆಲ್ಲುವ ಫೇವರೆಟ್ ತಂಡಗಳ ಪೈಕಿ ಒಂದಾಗಿದ್ದ ಭಾರತ ಸೆಮಿ ಫೈನಲ್ ತಲುಪಿ ಪಂದ್ಯದಿಂದ ಹೊರಬಂದಿತ್ತು. ವಿಶ್ವಕಪ್ ನಂತರದಲ್ಲಿ ನಡೆದ ಎಲ್ಲಾ ಟೂರ್ನಮೆಂಟ್‌ಗಳಲ್ಲಿ ಭಾರತದ ಸಾಧನೆ ಐತಿಹಾಸಿಕವಾದದ್ದು.

ವಿಶ್ವಕಪ್ ಪಂದ್ಯಾವಳಿಯ ನಂತರ ಸೆಪ್ಟೆಂಬರ್‌ನಲ್ಲಿ ವಿಂಡೀಸ್ ಜೊತೆಗೆ ಆರಂಭವಾದ ಟೂರ್ನಿಯಿಂದ ಈಗ ನ್ಯೂಜಿಲ್ಯಾಂಡ್‌ಗೆ ಭಾರತ ನಡೆಸಿರುವ ಟೂರ್‌ವರೆಗೂ ಭಾರತದ ಸಾಧನೆಯನ್ನು ಗಮನಿಸೋಣ.

ಸೆಪ್ಟೆಂಬರ್ ನಲ್ಲಿ ವಿಂಡೀಸ್ ವಿರುದ್ಧ ಭಾರತವು ಟೆಸ್ಟ್, ಏಕದಿನ ಪಂದ್ಯ ಹಾಗೂ ಟಿ-20 ಮೂರು ಪ್ರಕಾರಗಳಲ್ಲಿ ಆಡಿತ್ತು ಮೂರರಲ್ಲಿಯೂ ಭಾರತ ಕ್ರಮವಾಗಿ 2-0, 2-0, 2-0 ಅಂತರದಲ್ಲಿ ವಿಂಡೀಸ್‌ಗೆ ಯಾವುದೇ ಗೆಲ್ಲುವ ಅವಕಾಶ ಕೊಡದೆ ಜಯಭೇರಿ ಸಾಧಿಸಿತು.

ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಹಾಗೂ ಟೆಸ್ಟ್ ಮ್ಯಾಚ್‌ಗಳನ್ನು ಭಾರತ ಆಡಿತ್ತು. ಟಿ-20 ಯಲ್ಲಿ ಸಮಬಲ ಸಾಧಿಸಿದರೆ (1-1) ಟೆಸ್ಟ್ ಪಂದ್ಯದಲ್ಲಿ 3-0 ಅಂತರದಲ್ಲಿ ವಿಜಯ ಸಾಧಿಸಿತು.

ನವೆಂಬರ್‌ನಲ್ಲಿ ಭಾರತಕ್ಕೆ ಪ್ರವಾಸ ಬಳಸಿದ ಬಾಂಗ್ಲಾದೇಶದ ವಿರುದ್ಧ ಭಾರತ ಟಿ-20 (2-1) ಹಾಗೂ ಟೆಸ್ಟ್ (2-0) ಪಂದ್ಯಗಳಲ್ಲಿ ಸೀರಿಸ್ ಗೆದ್ದುಕೊಂಡಿತ್ತು.

ಡಿಸೆಂಬರ್‌ನಲ್ಲಿ ಕೆರೇಬಿಯನ್‌ರ ವಿರುದ್ಧ ಟಿ-20 ಯಲ್ಲಿ 2-1 ಹಾಗೂ ಏಕದಿನ ಪಂದ್ಯದಲ್ಲಿ 2-1 ಅಂತರದಿಂದ ಮತ್ತೊಮ್ಮೆ ಭಾರತ ವಿಜಯ ಸಾಧಿಸಿತು. ಜನವರಿ 2020ರ ಆರಂಭದಲ್ಲಿ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಟಿ-20 ಪಂದ್ಯವನ್ನು ಭಾರತ ಗೆದ್ದಿತು.

ಅದೇ ತಿಂಗಳಿನಲ್ಲಿ ಭಾರತಕ್ಕೆ ಪ್ರವಾಸ ಬಂದಿದ್ದ ಆಸ್ಟ್ರೇಲಿಯಾ ತಂಡದ ವಿರುದ್ಧ ಮೂರು ಏಕದಿನ ಪಂದ್ಯವನ್ನು ಆಡಿತ್ತು. ಮೊದಲ ಪಂದ್ಯವನ್ನು ಸೋತಿದ್ದ ಭಾರತ ಮುಂದಿನ ಎರಡೂ ಪಂದ್ಯಗಳನ್ನು ಗೆದ್ದು ಬಲಿಷ್ಠ ಆಸಿಸ್‌ಗೆ ಶಾಕ್ ನೀಡಿತ್ತು. ಆಸಿಸ್ ವಿರುದ್ಧದ ಪಂದ್ಯಾವಳಿಯ ನಂತರ ಭಾರತ ತಂಡ ಇದೀಗ ನ್ಯೂಜೀಲ್ಯಾಂಡ್‌ಗೆ ಪ್ರವಾಸ ನಡೆಸಿದೆ. ಈ ಪ್ರವಾಸದಲ್ಲಿ ಆತಿಥೇಯ ನ್ಯೂಜೀಲ್ಯಾಂಡ್ ವಿರುದ್ಧ ಟಿ-20, ಏಕದಿನ ಹಾಗೂ ಟೆಸ್ಟ್ ಮೂರು ಪ್ರಕಾರಗಳ ಪಂದ್ಯವನ್ನು ಆಡಲಿದೆ.

ನ್ಯೂಜೀಲ್ಯಾಂಡ್ ವಿರುದ್ಧ ಭಾರತದ ಐತಿಹಾಸಿಕ ಗೆಲುವು: ಜನವರಿ 24 ರಿಂದ ಶುರುವಾಗಿರುವ ಪಂದ್ಯಾವಳಿಯಲ್ಲಿ ಒಟ್ಟು 5 ಟಿ-20, 3 ಏಕದಿನ ಪಂದ್ಯ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈಗಾಗಲೇ 5 ಟಿ-20 ಪಂದ್ಯಗಳನ್ನು ಆಡಿದ್ದು 5-0 ಅಂತರದಲ್ಲಿ ಭರ್ಜರಿಯಾಗಿ ಐತಿಹಾಸಿಕ ವಿಜಯ ಸಾಧಿಸಿದೆ. ಐಸಿಸಿ ಸದಸ್ಯ ತಂಡಗಳ ಪೈಕಿ ಟಿ-20 ಪ್ರಕಾರದಲ್ಲಿ ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದಿರುವ (ವೈಟ್‌ವಾಷ್) ಮೊದಲ ತಂಡವೆಂಬ ಗರಿಯು ಈಗ ಭಾರತದ ಪಾಲಾಗಿದೆ.

ಅಲ್ಲದೆ 2008 ರಿಂದ ನ್ಯೂಜೀ಼ಲ್ಯಾಂಡ್ ನೆಲದಲ್ಲಿ ಟಿ-20 ಸಿರೀಸ್ ಅನ್ನು ಭಾರತ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ಅದನ್ನೂ ಸಾಧಿಸಿದೆ. ಇನ್ನೂ ಮುಂದಿನ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿಯೂ ಭಾರತ ಗೆಲ್ಲುವ ಫೇವರಿಟ್ ತಂಡವಾಗಿದೆ. ಒಟ್ಟಾರೆಯಲ್ಲಿ ಭಾರತ ವಿಶ್ವಕಪ್ ನಂತರದಲ್ಲಿ ಎಲ್ಲಾ ಪ್ರಕಾರಗಳ ಪಂದ್ಯದಲ್ಲಿ ವಿಜಯ ಸಾಧಿಸಿದೆ. ವಿಶೇಷವಾಗಿ ಟೆಸ್ಟ್ ಪಂದ್ಯಗಳಲ್ಲಿ ವೈಟ್‌ವಾಷ್ ಅನ್ನು ಸಾಧಿಸಿದೆ. ಭಾರತ ಐಸಿಸಿಯ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮುಂದುವರೆಸಿದೆ.

ದಾಖಲೆ ಬರೆದ ಕರ್ನಾಟಕದ ಕೆ.ಎಲ್. ರಾಹುಲ್

ಹಿಟ್‌ಮ್ಯಾನ್ ರೋಹಿತ್ ಶರ್ಮಾರ ಜೊತೆ ಆರಂಭಿಕ ಬ್ಯಾಟ್ಸ್ಮೆನ್ ಆಗಿ ಕಣಕ್ಕೆ ಇಳಿಯುತ್ತಿರುವ ರಾಹುಲ್ ವಿಶ್ವಕಪ್ ನಲ್ಲಿ ಹೇಳಿಕೊಳ್ಳುವಂತ ಸಾಧನೆಯನ್ನು ಮಾಡಿರಲಿಲ್ಲ. ಇದೀಗ ಶಿಖರ್ ಧವನ್‌ರ ಅನುಪಸ್ಥಿತಿಯಲ್ಲಿ ರಾಹುಲ್ ಆರಂಭಿಕ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಓಪನಿಂಗ್ ಅಲ್ಲಿ ಅತ್ಯುತ್ತಮ ಲಯ ಕಂಡುಕೊAಡಿರುವ ರಾಹುಲ್ ಎಲ್ಲರ ಮೆಚ್ಚುಗೆಯನ್ನು ಗಳಿಸಿದ್ದಾರೆ, ಭಾರತ ತಂಡದ ನಂಬಿಕಾರ್ಹ ಭರವಸೆಯ ಬ್ಯಾಟ್ಸ್ಮೆನ್ ಆಗಿದ್ದಾರೆ.

ನ್ಯೂಜೀ಼ಲ್ಯಾಂಡ್ ವಿರುದ್ಧದ ಟಿ-20 ಸಿರೀಸ್ ಅಲ್ಲಿ ಎರಡು ಅರ್ಧ ಶತಕಗಳೊಂದಿಗೆ ಒಟ್ಟು 224 ರನ್ನ ಗಳಿಸಿ ಮ್ಯಾನ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದು ಅಲ್ಲದೆ ಟಿ-20 ಸಿರೀಸ್ ಒಂದರಲ್ಲಿ ಅತ್ಯಧಿಕ ರನ್ ಗಳಿಸಿದ ಮೊದಲ ಭಾರತದ ಬ್ಯಾಟ್ಸ್ಮೆನ್ ಎಂಬ ಇತಿಹಾಸ ಬರೆದಿದ್ದಾರೆ. ಅಲ್ಲದೆ ವಿಶ್ವದ ಎರಡನೇ ಬ್ಯಾಟ್ಸ್ಮೆನ್ ಆಗಿದ್ದಾರೆ.

ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಸಾಧನೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಒಟ್ಟು 5,046 ಅಂಕಗಳೊಂದಿಗೆ ಟಾಪ್ 1 ಸ್ಥಾನದಲ್ಲಿದೆ.

ಏಕದಿನ ಕ್ರಿಕೆಟ್‌ನಲ್ಲಿ 7,748 ಅಂಕಗಳೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ.

ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಎರಡರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ವಿರಾಟ್ ಕೋಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಏಕದಿನ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬುಮ್ರಾ ಟಾಪ್ 1 ಸ್ಥಾನದಲ್ಲಿದ್ದಾರೆ.

ಏಕದಿನ ಕ್ರಿಕೆಟ್ ಬ್ಯಾಟಿಂಗ್‌ನಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ.

ಟಿ-20 ಬ್ಯಾಟಿಂಗ್ ರ‍್ಯಾಕಿಂಗ್ ಅಲ್ಲಿ ಕರ್ನಾಟಕದ ಕೆ.ಎಲ್. ರಾಹುಲ್ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಭಾರತಕ್ಕೆ ಬುಮ್ರಾ ಬಲ

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಟ್ರಂಪ್ ಕಾರ್ಡ್ ಆಗಿದ್ದ ಭರವಸೆಯ ಬೌಲರ್ ಜಸ್ಪ್ರಿತ್ ಬುಮ್ರಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಥಾನ ಗಳಿಸಿದಾಗಿನಿಂದಲೂ ಅತ್ಯುತ್ತಮ ಸಾಧನೆ ನೀಡಿದ್ದಾರೆ. ತನ್ನ ವಿಶಿಷ್ಟವಾದ ಬೌಲಿಂಗ್ ಶೈಲಿ ಹಾಗೂ ಯಾರ್ಕರ್‌ನಿಂದಾಗಿ ಬುಮ್ರಾ ವಿಶ್ವದ ಟಾಪ್ ಒನ್ ಬೌಲರ್ ಆಗಿದ್ದಾರೆ.

ಅತ್ಯಂತ ಒತ್ತಡದ ಕೊನೆಯ ಓವರ್‌ಗಳಲ್ಲಿಯೂ ಬೌಂಡರಿಗಳು ನೀಡದೆ ಬ್ಯಾಟ್ಸ್ಮೆನ್‌ಗಳು ತಿಣುಕಾಡುವಂತೆ ಮಾಡುವ ಪ್ರತಿಭಾವಂತ ಬೌಲರ್ ಬುಮ್ರಾ. ಟೆಸ್ಟ್ನಲ್ಲಿ 2.64, ಏಕದಿನ ಪಂದ್ಯಗಳಲ್ಲಿ 4.49 ಹಾಗೂ ಟಿ-20 ಅಲ್ಲಿ 6.66 ಎಕಾನಮಿಯನ್ನು (ಒವರ್ ಒಂದಕ್ಕೆ ನೀಡುವ ರನ್‌ಗಳ ಸರಾಸರಿ) ಕಾಪಾಡಿಕೊಂಡಿರುವ ಬುಮ್ರಾ ಭಾರತ ತಂಡದ ಬೌಲಿಂಗ್ ಬಲವಾಗಿದ್ದಾರೆ.

ಸುಧಾರಿಸಬೇಕಿದೆ ಫೀಲ್ಡಿಂಗ್

ಹೆಚ್ಚು ಹೊಸ ಹಾಗೂ ಅನಾನುಭವಿಗಳಿರುವ ತಂಡದಲ್ಲಿ ಫೀಲ್ಡಿಂಗ್ ನೀರಸವಾಗಿದೆ. ಕ್ಯಾಚ್‌ಗಳನ್ನು ಕೈಚೆಲ್ಲುವುದು, ಬೌಂಡರಿಗಳನ್ನು ಬಿಡುವುದು ಹೆಚ್ಚಾಗಿರುವುದು ನಾಯಕ ಕೋಹ್ಲಿಯ ಕೋಪಕ್ಕೂ ಕಾರಣವಾಗಿದೆ.

ಒಳ್ಳೆಯ ಅವಕಾಶಕ್ಕೆ ಕಾದಿರುವ ಪಾಂಡೆ

ಕರ್ನಾಟಕ ತಂಡದ ಭರವಸೆಯ ಓಪನರ್ ಮನೀಷ್ ಪಾಂಡೆ ಭಾರತದ ತಂಡದ ಟಿ-20 ಪಂದ್ಯದಲ್ಲಿ ಸ್ಥಾನ ಪಡೆದಿದ್ದು ಲೊವರ್ ಆರ್ಡರ್‌ನಲ್ಲಿ ಆಡುತ್ತಿದ್ದಾರೆ. ಮಿಡಲ್ ಆರ್ಡರ್‌ನಲ್ಲಿ ಬರುತ್ತಿರುವ ಶಿವಮ್ ದೂಬೆ ಐಪಿಎಲ್‌ನಲ್ಲಿ ಮಿಂಚಿದ್ದರಾದರೂ ನ್ಯೂಜೀ಼ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಓವರ್ ಒಂದರಲ್ಲಿ 34 ರನ್ ನೀಡಿ ಭಾರತದ ದುಬಾರಿ ಬೌಲರ್ ಆಗಿದ್ದಾರೆ. ಫೀಲ್ಡಿಂಗ್ ನಲ್ಲೂ ಕ್ಯಾಚ್‌ಗಳನ್ನು ಕೈಚೆಲ್ಲಿದ್ದಾರೆ. ಇವರ ಬದಲಿಗೆ ಮನೀಷ್ ಪಾಂಡೆಗೆ ಅವಕಾಶ ನೀಡಬೇಕೆಂದು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...