Homeಸಿನಿಮಾಕ್ರೀಡೆಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

ಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

- Advertisement -
- Advertisement -

2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆಲ್ಲುವ ಫೇವರೆಟ್ ತಂಡಗಳ ಪೈಕಿ ಒಂದಾಗಿದ್ದ ಭಾರತ ಸೆಮಿ ಫೈನಲ್ ತಲುಪಿ ಪಂದ್ಯದಿಂದ ಹೊರಬಂದಿತ್ತು. ವಿಶ್ವಕಪ್ ನಂತರದಲ್ಲಿ ನಡೆದ ಎಲ್ಲಾ ಟೂರ್ನಮೆಂಟ್‌ಗಳಲ್ಲಿ ಭಾರತದ ಸಾಧನೆ ಐತಿಹಾಸಿಕವಾದದ್ದು.

ವಿಶ್ವಕಪ್ ಪಂದ್ಯಾವಳಿಯ ನಂತರ ಸೆಪ್ಟೆಂಬರ್‌ನಲ್ಲಿ ವಿಂಡೀಸ್ ಜೊತೆಗೆ ಆರಂಭವಾದ ಟೂರ್ನಿಯಿಂದ ಈಗ ನ್ಯೂಜಿಲ್ಯಾಂಡ್‌ಗೆ ಭಾರತ ನಡೆಸಿರುವ ಟೂರ್‌ವರೆಗೂ ಭಾರತದ ಸಾಧನೆಯನ್ನು ಗಮನಿಸೋಣ.

ಸೆಪ್ಟೆಂಬರ್ ನಲ್ಲಿ ವಿಂಡೀಸ್ ವಿರುದ್ಧ ಭಾರತವು ಟೆಸ್ಟ್, ಏಕದಿನ ಪಂದ್ಯ ಹಾಗೂ ಟಿ-20 ಮೂರು ಪ್ರಕಾರಗಳಲ್ಲಿ ಆಡಿತ್ತು ಮೂರರಲ್ಲಿಯೂ ಭಾರತ ಕ್ರಮವಾಗಿ 2-0, 2-0, 2-0 ಅಂತರದಲ್ಲಿ ವಿಂಡೀಸ್‌ಗೆ ಯಾವುದೇ ಗೆಲ್ಲುವ ಅವಕಾಶ ಕೊಡದೆ ಜಯಭೇರಿ ಸಾಧಿಸಿತು.

ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಹಾಗೂ ಟೆಸ್ಟ್ ಮ್ಯಾಚ್‌ಗಳನ್ನು ಭಾರತ ಆಡಿತ್ತು. ಟಿ-20 ಯಲ್ಲಿ ಸಮಬಲ ಸಾಧಿಸಿದರೆ (1-1) ಟೆಸ್ಟ್ ಪಂದ್ಯದಲ್ಲಿ 3-0 ಅಂತರದಲ್ಲಿ ವಿಜಯ ಸಾಧಿಸಿತು.

ನವೆಂಬರ್‌ನಲ್ಲಿ ಭಾರತಕ್ಕೆ ಪ್ರವಾಸ ಬಳಸಿದ ಬಾಂಗ್ಲಾದೇಶದ ವಿರುದ್ಧ ಭಾರತ ಟಿ-20 (2-1) ಹಾಗೂ ಟೆಸ್ಟ್ (2-0) ಪಂದ್ಯಗಳಲ್ಲಿ ಸೀರಿಸ್ ಗೆದ್ದುಕೊಂಡಿತ್ತು.

ಡಿಸೆಂಬರ್‌ನಲ್ಲಿ ಕೆರೇಬಿಯನ್‌ರ ವಿರುದ್ಧ ಟಿ-20 ಯಲ್ಲಿ 2-1 ಹಾಗೂ ಏಕದಿನ ಪಂದ್ಯದಲ್ಲಿ 2-1 ಅಂತರದಿಂದ ಮತ್ತೊಮ್ಮೆ ಭಾರತ ವಿಜಯ ಸಾಧಿಸಿತು. ಜನವರಿ 2020ರ ಆರಂಭದಲ್ಲಿ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಟಿ-20 ಪಂದ್ಯವನ್ನು ಭಾರತ ಗೆದ್ದಿತು.

ಅದೇ ತಿಂಗಳಿನಲ್ಲಿ ಭಾರತಕ್ಕೆ ಪ್ರವಾಸ ಬಂದಿದ್ದ ಆಸ್ಟ್ರೇಲಿಯಾ ತಂಡದ ವಿರುದ್ಧ ಮೂರು ಏಕದಿನ ಪಂದ್ಯವನ್ನು ಆಡಿತ್ತು. ಮೊದಲ ಪಂದ್ಯವನ್ನು ಸೋತಿದ್ದ ಭಾರತ ಮುಂದಿನ ಎರಡೂ ಪಂದ್ಯಗಳನ್ನು ಗೆದ್ದು ಬಲಿಷ್ಠ ಆಸಿಸ್‌ಗೆ ಶಾಕ್ ನೀಡಿತ್ತು. ಆಸಿಸ್ ವಿರುದ್ಧದ ಪಂದ್ಯಾವಳಿಯ ನಂತರ ಭಾರತ ತಂಡ ಇದೀಗ ನ್ಯೂಜೀಲ್ಯಾಂಡ್‌ಗೆ ಪ್ರವಾಸ ನಡೆಸಿದೆ. ಈ ಪ್ರವಾಸದಲ್ಲಿ ಆತಿಥೇಯ ನ್ಯೂಜೀಲ್ಯಾಂಡ್ ವಿರುದ್ಧ ಟಿ-20, ಏಕದಿನ ಹಾಗೂ ಟೆಸ್ಟ್ ಮೂರು ಪ್ರಕಾರಗಳ ಪಂದ್ಯವನ್ನು ಆಡಲಿದೆ.

ನ್ಯೂಜೀಲ್ಯಾಂಡ್ ವಿರುದ್ಧ ಭಾರತದ ಐತಿಹಾಸಿಕ ಗೆಲುವು: ಜನವರಿ 24 ರಿಂದ ಶುರುವಾಗಿರುವ ಪಂದ್ಯಾವಳಿಯಲ್ಲಿ ಒಟ್ಟು 5 ಟಿ-20, 3 ಏಕದಿನ ಪಂದ್ಯ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈಗಾಗಲೇ 5 ಟಿ-20 ಪಂದ್ಯಗಳನ್ನು ಆಡಿದ್ದು 5-0 ಅಂತರದಲ್ಲಿ ಭರ್ಜರಿಯಾಗಿ ಐತಿಹಾಸಿಕ ವಿಜಯ ಸಾಧಿಸಿದೆ. ಐಸಿಸಿ ಸದಸ್ಯ ತಂಡಗಳ ಪೈಕಿ ಟಿ-20 ಪ್ರಕಾರದಲ್ಲಿ ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದಿರುವ (ವೈಟ್‌ವಾಷ್) ಮೊದಲ ತಂಡವೆಂಬ ಗರಿಯು ಈಗ ಭಾರತದ ಪಾಲಾಗಿದೆ.

ಅಲ್ಲದೆ 2008 ರಿಂದ ನ್ಯೂಜೀ಼ಲ್ಯಾಂಡ್ ನೆಲದಲ್ಲಿ ಟಿ-20 ಸಿರೀಸ್ ಅನ್ನು ಭಾರತ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ಅದನ್ನೂ ಸಾಧಿಸಿದೆ. ಇನ್ನೂ ಮುಂದಿನ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿಯೂ ಭಾರತ ಗೆಲ್ಲುವ ಫೇವರಿಟ್ ತಂಡವಾಗಿದೆ. ಒಟ್ಟಾರೆಯಲ್ಲಿ ಭಾರತ ವಿಶ್ವಕಪ್ ನಂತರದಲ್ಲಿ ಎಲ್ಲಾ ಪ್ರಕಾರಗಳ ಪಂದ್ಯದಲ್ಲಿ ವಿಜಯ ಸಾಧಿಸಿದೆ. ವಿಶೇಷವಾಗಿ ಟೆಸ್ಟ್ ಪಂದ್ಯಗಳಲ್ಲಿ ವೈಟ್‌ವಾಷ್ ಅನ್ನು ಸಾಧಿಸಿದೆ. ಭಾರತ ಐಸಿಸಿಯ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮುಂದುವರೆಸಿದೆ.

ದಾಖಲೆ ಬರೆದ ಕರ್ನಾಟಕದ ಕೆ.ಎಲ್. ರಾಹುಲ್

ಹಿಟ್‌ಮ್ಯಾನ್ ರೋಹಿತ್ ಶರ್ಮಾರ ಜೊತೆ ಆರಂಭಿಕ ಬ್ಯಾಟ್ಸ್ಮೆನ್ ಆಗಿ ಕಣಕ್ಕೆ ಇಳಿಯುತ್ತಿರುವ ರಾಹುಲ್ ವಿಶ್ವಕಪ್ ನಲ್ಲಿ ಹೇಳಿಕೊಳ್ಳುವಂತ ಸಾಧನೆಯನ್ನು ಮಾಡಿರಲಿಲ್ಲ. ಇದೀಗ ಶಿಖರ್ ಧವನ್‌ರ ಅನುಪಸ್ಥಿತಿಯಲ್ಲಿ ರಾಹುಲ್ ಆರಂಭಿಕ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಓಪನಿಂಗ್ ಅಲ್ಲಿ ಅತ್ಯುತ್ತಮ ಲಯ ಕಂಡುಕೊAಡಿರುವ ರಾಹುಲ್ ಎಲ್ಲರ ಮೆಚ್ಚುಗೆಯನ್ನು ಗಳಿಸಿದ್ದಾರೆ, ಭಾರತ ತಂಡದ ನಂಬಿಕಾರ್ಹ ಭರವಸೆಯ ಬ್ಯಾಟ್ಸ್ಮೆನ್ ಆಗಿದ್ದಾರೆ.

ನ್ಯೂಜೀ಼ಲ್ಯಾಂಡ್ ವಿರುದ್ಧದ ಟಿ-20 ಸಿರೀಸ್ ಅಲ್ಲಿ ಎರಡು ಅರ್ಧ ಶತಕಗಳೊಂದಿಗೆ ಒಟ್ಟು 224 ರನ್ನ ಗಳಿಸಿ ಮ್ಯಾನ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದು ಅಲ್ಲದೆ ಟಿ-20 ಸಿರೀಸ್ ಒಂದರಲ್ಲಿ ಅತ್ಯಧಿಕ ರನ್ ಗಳಿಸಿದ ಮೊದಲ ಭಾರತದ ಬ್ಯಾಟ್ಸ್ಮೆನ್ ಎಂಬ ಇತಿಹಾಸ ಬರೆದಿದ್ದಾರೆ. ಅಲ್ಲದೆ ವಿಶ್ವದ ಎರಡನೇ ಬ್ಯಾಟ್ಸ್ಮೆನ್ ಆಗಿದ್ದಾರೆ.

ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಸಾಧನೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಒಟ್ಟು 5,046 ಅಂಕಗಳೊಂದಿಗೆ ಟಾಪ್ 1 ಸ್ಥಾನದಲ್ಲಿದೆ.

ಏಕದಿನ ಕ್ರಿಕೆಟ್‌ನಲ್ಲಿ 7,748 ಅಂಕಗಳೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ.

ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಎರಡರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ವಿರಾಟ್ ಕೋಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಏಕದಿನ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬುಮ್ರಾ ಟಾಪ್ 1 ಸ್ಥಾನದಲ್ಲಿದ್ದಾರೆ.

ಏಕದಿನ ಕ್ರಿಕೆಟ್ ಬ್ಯಾಟಿಂಗ್‌ನಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ.

ಟಿ-20 ಬ್ಯಾಟಿಂಗ್ ರ‍್ಯಾಕಿಂಗ್ ಅಲ್ಲಿ ಕರ್ನಾಟಕದ ಕೆ.ಎಲ್. ರಾಹುಲ್ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಭಾರತಕ್ಕೆ ಬುಮ್ರಾ ಬಲ

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಟ್ರಂಪ್ ಕಾರ್ಡ್ ಆಗಿದ್ದ ಭರವಸೆಯ ಬೌಲರ್ ಜಸ್ಪ್ರಿತ್ ಬುಮ್ರಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಥಾನ ಗಳಿಸಿದಾಗಿನಿಂದಲೂ ಅತ್ಯುತ್ತಮ ಸಾಧನೆ ನೀಡಿದ್ದಾರೆ. ತನ್ನ ವಿಶಿಷ್ಟವಾದ ಬೌಲಿಂಗ್ ಶೈಲಿ ಹಾಗೂ ಯಾರ್ಕರ್‌ನಿಂದಾಗಿ ಬುಮ್ರಾ ವಿಶ್ವದ ಟಾಪ್ ಒನ್ ಬೌಲರ್ ಆಗಿದ್ದಾರೆ.

ಅತ್ಯಂತ ಒತ್ತಡದ ಕೊನೆಯ ಓವರ್‌ಗಳಲ್ಲಿಯೂ ಬೌಂಡರಿಗಳು ನೀಡದೆ ಬ್ಯಾಟ್ಸ್ಮೆನ್‌ಗಳು ತಿಣುಕಾಡುವಂತೆ ಮಾಡುವ ಪ್ರತಿಭಾವಂತ ಬೌಲರ್ ಬುಮ್ರಾ. ಟೆಸ್ಟ್ನಲ್ಲಿ 2.64, ಏಕದಿನ ಪಂದ್ಯಗಳಲ್ಲಿ 4.49 ಹಾಗೂ ಟಿ-20 ಅಲ್ಲಿ 6.66 ಎಕಾನಮಿಯನ್ನು (ಒವರ್ ಒಂದಕ್ಕೆ ನೀಡುವ ರನ್‌ಗಳ ಸರಾಸರಿ) ಕಾಪಾಡಿಕೊಂಡಿರುವ ಬುಮ್ರಾ ಭಾರತ ತಂಡದ ಬೌಲಿಂಗ್ ಬಲವಾಗಿದ್ದಾರೆ.

ಸುಧಾರಿಸಬೇಕಿದೆ ಫೀಲ್ಡಿಂಗ್

ಹೆಚ್ಚು ಹೊಸ ಹಾಗೂ ಅನಾನುಭವಿಗಳಿರುವ ತಂಡದಲ್ಲಿ ಫೀಲ್ಡಿಂಗ್ ನೀರಸವಾಗಿದೆ. ಕ್ಯಾಚ್‌ಗಳನ್ನು ಕೈಚೆಲ್ಲುವುದು, ಬೌಂಡರಿಗಳನ್ನು ಬಿಡುವುದು ಹೆಚ್ಚಾಗಿರುವುದು ನಾಯಕ ಕೋಹ್ಲಿಯ ಕೋಪಕ್ಕೂ ಕಾರಣವಾಗಿದೆ.

ಒಳ್ಳೆಯ ಅವಕಾಶಕ್ಕೆ ಕಾದಿರುವ ಪಾಂಡೆ

ಕರ್ನಾಟಕ ತಂಡದ ಭರವಸೆಯ ಓಪನರ್ ಮನೀಷ್ ಪಾಂಡೆ ಭಾರತದ ತಂಡದ ಟಿ-20 ಪಂದ್ಯದಲ್ಲಿ ಸ್ಥಾನ ಪಡೆದಿದ್ದು ಲೊವರ್ ಆರ್ಡರ್‌ನಲ್ಲಿ ಆಡುತ್ತಿದ್ದಾರೆ. ಮಿಡಲ್ ಆರ್ಡರ್‌ನಲ್ಲಿ ಬರುತ್ತಿರುವ ಶಿವಮ್ ದೂಬೆ ಐಪಿಎಲ್‌ನಲ್ಲಿ ಮಿಂಚಿದ್ದರಾದರೂ ನ್ಯೂಜೀ಼ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಓವರ್ ಒಂದರಲ್ಲಿ 34 ರನ್ ನೀಡಿ ಭಾರತದ ದುಬಾರಿ ಬೌಲರ್ ಆಗಿದ್ದಾರೆ. ಫೀಲ್ಡಿಂಗ್ ನಲ್ಲೂ ಕ್ಯಾಚ್‌ಗಳನ್ನು ಕೈಚೆಲ್ಲಿದ್ದಾರೆ. ಇವರ ಬದಲಿಗೆ ಮನೀಷ್ ಪಾಂಡೆಗೆ ಅವಕಾಶ ನೀಡಬೇಕೆಂದು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...