Homeಸಿನಿಮಾಕ್ರೀಡೆಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

ಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

- Advertisement -
- Advertisement -

2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆಲ್ಲುವ ಫೇವರೆಟ್ ತಂಡಗಳ ಪೈಕಿ ಒಂದಾಗಿದ್ದ ಭಾರತ ಸೆಮಿ ಫೈನಲ್ ತಲುಪಿ ಪಂದ್ಯದಿಂದ ಹೊರಬಂದಿತ್ತು. ವಿಶ್ವಕಪ್ ನಂತರದಲ್ಲಿ ನಡೆದ ಎಲ್ಲಾ ಟೂರ್ನಮೆಂಟ್‌ಗಳಲ್ಲಿ ಭಾರತದ ಸಾಧನೆ ಐತಿಹಾಸಿಕವಾದದ್ದು.

ವಿಶ್ವಕಪ್ ಪಂದ್ಯಾವಳಿಯ ನಂತರ ಸೆಪ್ಟೆಂಬರ್‌ನಲ್ಲಿ ವಿಂಡೀಸ್ ಜೊತೆಗೆ ಆರಂಭವಾದ ಟೂರ್ನಿಯಿಂದ ಈಗ ನ್ಯೂಜಿಲ್ಯಾಂಡ್‌ಗೆ ಭಾರತ ನಡೆಸಿರುವ ಟೂರ್‌ವರೆಗೂ ಭಾರತದ ಸಾಧನೆಯನ್ನು ಗಮನಿಸೋಣ.

ಸೆಪ್ಟೆಂಬರ್ ನಲ್ಲಿ ವಿಂಡೀಸ್ ವಿರುದ್ಧ ಭಾರತವು ಟೆಸ್ಟ್, ಏಕದಿನ ಪಂದ್ಯ ಹಾಗೂ ಟಿ-20 ಮೂರು ಪ್ರಕಾರಗಳಲ್ಲಿ ಆಡಿತ್ತು ಮೂರರಲ್ಲಿಯೂ ಭಾರತ ಕ್ರಮವಾಗಿ 2-0, 2-0, 2-0 ಅಂತರದಲ್ಲಿ ವಿಂಡೀಸ್‌ಗೆ ಯಾವುದೇ ಗೆಲ್ಲುವ ಅವಕಾಶ ಕೊಡದೆ ಜಯಭೇರಿ ಸಾಧಿಸಿತು.

ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಹಾಗೂ ಟೆಸ್ಟ್ ಮ್ಯಾಚ್‌ಗಳನ್ನು ಭಾರತ ಆಡಿತ್ತು. ಟಿ-20 ಯಲ್ಲಿ ಸಮಬಲ ಸಾಧಿಸಿದರೆ (1-1) ಟೆಸ್ಟ್ ಪಂದ್ಯದಲ್ಲಿ 3-0 ಅಂತರದಲ್ಲಿ ವಿಜಯ ಸಾಧಿಸಿತು.

ನವೆಂಬರ್‌ನಲ್ಲಿ ಭಾರತಕ್ಕೆ ಪ್ರವಾಸ ಬಳಸಿದ ಬಾಂಗ್ಲಾದೇಶದ ವಿರುದ್ಧ ಭಾರತ ಟಿ-20 (2-1) ಹಾಗೂ ಟೆಸ್ಟ್ (2-0) ಪಂದ್ಯಗಳಲ್ಲಿ ಸೀರಿಸ್ ಗೆದ್ದುಕೊಂಡಿತ್ತು.

ಡಿಸೆಂಬರ್‌ನಲ್ಲಿ ಕೆರೇಬಿಯನ್‌ರ ವಿರುದ್ಧ ಟಿ-20 ಯಲ್ಲಿ 2-1 ಹಾಗೂ ಏಕದಿನ ಪಂದ್ಯದಲ್ಲಿ 2-1 ಅಂತರದಿಂದ ಮತ್ತೊಮ್ಮೆ ಭಾರತ ವಿಜಯ ಸಾಧಿಸಿತು. ಜನವರಿ 2020ರ ಆರಂಭದಲ್ಲಿ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಟಿ-20 ಪಂದ್ಯವನ್ನು ಭಾರತ ಗೆದ್ದಿತು.

ಅದೇ ತಿಂಗಳಿನಲ್ಲಿ ಭಾರತಕ್ಕೆ ಪ್ರವಾಸ ಬಂದಿದ್ದ ಆಸ್ಟ್ರೇಲಿಯಾ ತಂಡದ ವಿರುದ್ಧ ಮೂರು ಏಕದಿನ ಪಂದ್ಯವನ್ನು ಆಡಿತ್ತು. ಮೊದಲ ಪಂದ್ಯವನ್ನು ಸೋತಿದ್ದ ಭಾರತ ಮುಂದಿನ ಎರಡೂ ಪಂದ್ಯಗಳನ್ನು ಗೆದ್ದು ಬಲಿಷ್ಠ ಆಸಿಸ್‌ಗೆ ಶಾಕ್ ನೀಡಿತ್ತು. ಆಸಿಸ್ ವಿರುದ್ಧದ ಪಂದ್ಯಾವಳಿಯ ನಂತರ ಭಾರತ ತಂಡ ಇದೀಗ ನ್ಯೂಜೀಲ್ಯಾಂಡ್‌ಗೆ ಪ್ರವಾಸ ನಡೆಸಿದೆ. ಈ ಪ್ರವಾಸದಲ್ಲಿ ಆತಿಥೇಯ ನ್ಯೂಜೀಲ್ಯಾಂಡ್ ವಿರುದ್ಧ ಟಿ-20, ಏಕದಿನ ಹಾಗೂ ಟೆಸ್ಟ್ ಮೂರು ಪ್ರಕಾರಗಳ ಪಂದ್ಯವನ್ನು ಆಡಲಿದೆ.

ನ್ಯೂಜೀಲ್ಯಾಂಡ್ ವಿರುದ್ಧ ಭಾರತದ ಐತಿಹಾಸಿಕ ಗೆಲುವು: ಜನವರಿ 24 ರಿಂದ ಶುರುವಾಗಿರುವ ಪಂದ್ಯಾವಳಿಯಲ್ಲಿ ಒಟ್ಟು 5 ಟಿ-20, 3 ಏಕದಿನ ಪಂದ್ಯ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈಗಾಗಲೇ 5 ಟಿ-20 ಪಂದ್ಯಗಳನ್ನು ಆಡಿದ್ದು 5-0 ಅಂತರದಲ್ಲಿ ಭರ್ಜರಿಯಾಗಿ ಐತಿಹಾಸಿಕ ವಿಜಯ ಸಾಧಿಸಿದೆ. ಐಸಿಸಿ ಸದಸ್ಯ ತಂಡಗಳ ಪೈಕಿ ಟಿ-20 ಪ್ರಕಾರದಲ್ಲಿ ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದಿರುವ (ವೈಟ್‌ವಾಷ್) ಮೊದಲ ತಂಡವೆಂಬ ಗರಿಯು ಈಗ ಭಾರತದ ಪಾಲಾಗಿದೆ.

ಅಲ್ಲದೆ 2008 ರಿಂದ ನ್ಯೂಜೀ಼ಲ್ಯಾಂಡ್ ನೆಲದಲ್ಲಿ ಟಿ-20 ಸಿರೀಸ್ ಅನ್ನು ಭಾರತ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ಅದನ್ನೂ ಸಾಧಿಸಿದೆ. ಇನ್ನೂ ಮುಂದಿನ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿಯೂ ಭಾರತ ಗೆಲ್ಲುವ ಫೇವರಿಟ್ ತಂಡವಾಗಿದೆ. ಒಟ್ಟಾರೆಯಲ್ಲಿ ಭಾರತ ವಿಶ್ವಕಪ್ ನಂತರದಲ್ಲಿ ಎಲ್ಲಾ ಪ್ರಕಾರಗಳ ಪಂದ್ಯದಲ್ಲಿ ವಿಜಯ ಸಾಧಿಸಿದೆ. ವಿಶೇಷವಾಗಿ ಟೆಸ್ಟ್ ಪಂದ್ಯಗಳಲ್ಲಿ ವೈಟ್‌ವಾಷ್ ಅನ್ನು ಸಾಧಿಸಿದೆ. ಭಾರತ ಐಸಿಸಿಯ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮುಂದುವರೆಸಿದೆ.

ದಾಖಲೆ ಬರೆದ ಕರ್ನಾಟಕದ ಕೆ.ಎಲ್. ರಾಹುಲ್

ಹಿಟ್‌ಮ್ಯಾನ್ ರೋಹಿತ್ ಶರ್ಮಾರ ಜೊತೆ ಆರಂಭಿಕ ಬ್ಯಾಟ್ಸ್ಮೆನ್ ಆಗಿ ಕಣಕ್ಕೆ ಇಳಿಯುತ್ತಿರುವ ರಾಹುಲ್ ವಿಶ್ವಕಪ್ ನಲ್ಲಿ ಹೇಳಿಕೊಳ್ಳುವಂತ ಸಾಧನೆಯನ್ನು ಮಾಡಿರಲಿಲ್ಲ. ಇದೀಗ ಶಿಖರ್ ಧವನ್‌ರ ಅನುಪಸ್ಥಿತಿಯಲ್ಲಿ ರಾಹುಲ್ ಆರಂಭಿಕ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಓಪನಿಂಗ್ ಅಲ್ಲಿ ಅತ್ಯುತ್ತಮ ಲಯ ಕಂಡುಕೊAಡಿರುವ ರಾಹುಲ್ ಎಲ್ಲರ ಮೆಚ್ಚುಗೆಯನ್ನು ಗಳಿಸಿದ್ದಾರೆ, ಭಾರತ ತಂಡದ ನಂಬಿಕಾರ್ಹ ಭರವಸೆಯ ಬ್ಯಾಟ್ಸ್ಮೆನ್ ಆಗಿದ್ದಾರೆ.

ನ್ಯೂಜೀ಼ಲ್ಯಾಂಡ್ ವಿರುದ್ಧದ ಟಿ-20 ಸಿರೀಸ್ ಅಲ್ಲಿ ಎರಡು ಅರ್ಧ ಶತಕಗಳೊಂದಿಗೆ ಒಟ್ಟು 224 ರನ್ನ ಗಳಿಸಿ ಮ್ಯಾನ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದು ಅಲ್ಲದೆ ಟಿ-20 ಸಿರೀಸ್ ಒಂದರಲ್ಲಿ ಅತ್ಯಧಿಕ ರನ್ ಗಳಿಸಿದ ಮೊದಲ ಭಾರತದ ಬ್ಯಾಟ್ಸ್ಮೆನ್ ಎಂಬ ಇತಿಹಾಸ ಬರೆದಿದ್ದಾರೆ. ಅಲ್ಲದೆ ವಿಶ್ವದ ಎರಡನೇ ಬ್ಯಾಟ್ಸ್ಮೆನ್ ಆಗಿದ್ದಾರೆ.

ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಸಾಧನೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಒಟ್ಟು 5,046 ಅಂಕಗಳೊಂದಿಗೆ ಟಾಪ್ 1 ಸ್ಥಾನದಲ್ಲಿದೆ.

ಏಕದಿನ ಕ್ರಿಕೆಟ್‌ನಲ್ಲಿ 7,748 ಅಂಕಗಳೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ.

ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಎರಡರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ವಿರಾಟ್ ಕೋಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಏಕದಿನ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬುಮ್ರಾ ಟಾಪ್ 1 ಸ್ಥಾನದಲ್ಲಿದ್ದಾರೆ.

ಏಕದಿನ ಕ್ರಿಕೆಟ್ ಬ್ಯಾಟಿಂಗ್‌ನಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ.

ಟಿ-20 ಬ್ಯಾಟಿಂಗ್ ರ‍್ಯಾಕಿಂಗ್ ಅಲ್ಲಿ ಕರ್ನಾಟಕದ ಕೆ.ಎಲ್. ರಾಹುಲ್ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಭಾರತಕ್ಕೆ ಬುಮ್ರಾ ಬಲ

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಟ್ರಂಪ್ ಕಾರ್ಡ್ ಆಗಿದ್ದ ಭರವಸೆಯ ಬೌಲರ್ ಜಸ್ಪ್ರಿತ್ ಬುಮ್ರಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಥಾನ ಗಳಿಸಿದಾಗಿನಿಂದಲೂ ಅತ್ಯುತ್ತಮ ಸಾಧನೆ ನೀಡಿದ್ದಾರೆ. ತನ್ನ ವಿಶಿಷ್ಟವಾದ ಬೌಲಿಂಗ್ ಶೈಲಿ ಹಾಗೂ ಯಾರ್ಕರ್‌ನಿಂದಾಗಿ ಬುಮ್ರಾ ವಿಶ್ವದ ಟಾಪ್ ಒನ್ ಬೌಲರ್ ಆಗಿದ್ದಾರೆ.

ಅತ್ಯಂತ ಒತ್ತಡದ ಕೊನೆಯ ಓವರ್‌ಗಳಲ್ಲಿಯೂ ಬೌಂಡರಿಗಳು ನೀಡದೆ ಬ್ಯಾಟ್ಸ್ಮೆನ್‌ಗಳು ತಿಣುಕಾಡುವಂತೆ ಮಾಡುವ ಪ್ರತಿಭಾವಂತ ಬೌಲರ್ ಬುಮ್ರಾ. ಟೆಸ್ಟ್ನಲ್ಲಿ 2.64, ಏಕದಿನ ಪಂದ್ಯಗಳಲ್ಲಿ 4.49 ಹಾಗೂ ಟಿ-20 ಅಲ್ಲಿ 6.66 ಎಕಾನಮಿಯನ್ನು (ಒವರ್ ಒಂದಕ್ಕೆ ನೀಡುವ ರನ್‌ಗಳ ಸರಾಸರಿ) ಕಾಪಾಡಿಕೊಂಡಿರುವ ಬುಮ್ರಾ ಭಾರತ ತಂಡದ ಬೌಲಿಂಗ್ ಬಲವಾಗಿದ್ದಾರೆ.

ಸುಧಾರಿಸಬೇಕಿದೆ ಫೀಲ್ಡಿಂಗ್

ಹೆಚ್ಚು ಹೊಸ ಹಾಗೂ ಅನಾನುಭವಿಗಳಿರುವ ತಂಡದಲ್ಲಿ ಫೀಲ್ಡಿಂಗ್ ನೀರಸವಾಗಿದೆ. ಕ್ಯಾಚ್‌ಗಳನ್ನು ಕೈಚೆಲ್ಲುವುದು, ಬೌಂಡರಿಗಳನ್ನು ಬಿಡುವುದು ಹೆಚ್ಚಾಗಿರುವುದು ನಾಯಕ ಕೋಹ್ಲಿಯ ಕೋಪಕ್ಕೂ ಕಾರಣವಾಗಿದೆ.

ಒಳ್ಳೆಯ ಅವಕಾಶಕ್ಕೆ ಕಾದಿರುವ ಪಾಂಡೆ

ಕರ್ನಾಟಕ ತಂಡದ ಭರವಸೆಯ ಓಪನರ್ ಮನೀಷ್ ಪಾಂಡೆ ಭಾರತದ ತಂಡದ ಟಿ-20 ಪಂದ್ಯದಲ್ಲಿ ಸ್ಥಾನ ಪಡೆದಿದ್ದು ಲೊವರ್ ಆರ್ಡರ್‌ನಲ್ಲಿ ಆಡುತ್ತಿದ್ದಾರೆ. ಮಿಡಲ್ ಆರ್ಡರ್‌ನಲ್ಲಿ ಬರುತ್ತಿರುವ ಶಿವಮ್ ದೂಬೆ ಐಪಿಎಲ್‌ನಲ್ಲಿ ಮಿಂಚಿದ್ದರಾದರೂ ನ್ಯೂಜೀ಼ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಓವರ್ ಒಂದರಲ್ಲಿ 34 ರನ್ ನೀಡಿ ಭಾರತದ ದುಬಾರಿ ಬೌಲರ್ ಆಗಿದ್ದಾರೆ. ಫೀಲ್ಡಿಂಗ್ ನಲ್ಲೂ ಕ್ಯಾಚ್‌ಗಳನ್ನು ಕೈಚೆಲ್ಲಿದ್ದಾರೆ. ಇವರ ಬದಲಿಗೆ ಮನೀಷ್ ಪಾಂಡೆಗೆ ಅವಕಾಶ ನೀಡಬೇಕೆಂದು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...