Homeಸಿನಿಮಾಕ್ರೀಡೆಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

ಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

- Advertisement -
- Advertisement -

2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆಲ್ಲುವ ಫೇವರೆಟ್ ತಂಡಗಳ ಪೈಕಿ ಒಂದಾಗಿದ್ದ ಭಾರತ ಸೆಮಿ ಫೈನಲ್ ತಲುಪಿ ಪಂದ್ಯದಿಂದ ಹೊರಬಂದಿತ್ತು. ವಿಶ್ವಕಪ್ ನಂತರದಲ್ಲಿ ನಡೆದ ಎಲ್ಲಾ ಟೂರ್ನಮೆಂಟ್‌ಗಳಲ್ಲಿ ಭಾರತದ ಸಾಧನೆ ಐತಿಹಾಸಿಕವಾದದ್ದು.

ವಿಶ್ವಕಪ್ ಪಂದ್ಯಾವಳಿಯ ನಂತರ ಸೆಪ್ಟೆಂಬರ್‌ನಲ್ಲಿ ವಿಂಡೀಸ್ ಜೊತೆಗೆ ಆರಂಭವಾದ ಟೂರ್ನಿಯಿಂದ ಈಗ ನ್ಯೂಜಿಲ್ಯಾಂಡ್‌ಗೆ ಭಾರತ ನಡೆಸಿರುವ ಟೂರ್‌ವರೆಗೂ ಭಾರತದ ಸಾಧನೆಯನ್ನು ಗಮನಿಸೋಣ.

ಸೆಪ್ಟೆಂಬರ್ ನಲ್ಲಿ ವಿಂಡೀಸ್ ವಿರುದ್ಧ ಭಾರತವು ಟೆಸ್ಟ್, ಏಕದಿನ ಪಂದ್ಯ ಹಾಗೂ ಟಿ-20 ಮೂರು ಪ್ರಕಾರಗಳಲ್ಲಿ ಆಡಿತ್ತು ಮೂರರಲ್ಲಿಯೂ ಭಾರತ ಕ್ರಮವಾಗಿ 2-0, 2-0, 2-0 ಅಂತರದಲ್ಲಿ ವಿಂಡೀಸ್‌ಗೆ ಯಾವುದೇ ಗೆಲ್ಲುವ ಅವಕಾಶ ಕೊಡದೆ ಜಯಭೇರಿ ಸಾಧಿಸಿತು.

ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಹಾಗೂ ಟೆಸ್ಟ್ ಮ್ಯಾಚ್‌ಗಳನ್ನು ಭಾರತ ಆಡಿತ್ತು. ಟಿ-20 ಯಲ್ಲಿ ಸಮಬಲ ಸಾಧಿಸಿದರೆ (1-1) ಟೆಸ್ಟ್ ಪಂದ್ಯದಲ್ಲಿ 3-0 ಅಂತರದಲ್ಲಿ ವಿಜಯ ಸಾಧಿಸಿತು.

ನವೆಂಬರ್‌ನಲ್ಲಿ ಭಾರತಕ್ಕೆ ಪ್ರವಾಸ ಬಳಸಿದ ಬಾಂಗ್ಲಾದೇಶದ ವಿರುದ್ಧ ಭಾರತ ಟಿ-20 (2-1) ಹಾಗೂ ಟೆಸ್ಟ್ (2-0) ಪಂದ್ಯಗಳಲ್ಲಿ ಸೀರಿಸ್ ಗೆದ್ದುಕೊಂಡಿತ್ತು.

ಡಿಸೆಂಬರ್‌ನಲ್ಲಿ ಕೆರೇಬಿಯನ್‌ರ ವಿರುದ್ಧ ಟಿ-20 ಯಲ್ಲಿ 2-1 ಹಾಗೂ ಏಕದಿನ ಪಂದ್ಯದಲ್ಲಿ 2-1 ಅಂತರದಿಂದ ಮತ್ತೊಮ್ಮೆ ಭಾರತ ವಿಜಯ ಸಾಧಿಸಿತು. ಜನವರಿ 2020ರ ಆರಂಭದಲ್ಲಿ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಟಿ-20 ಪಂದ್ಯವನ್ನು ಭಾರತ ಗೆದ್ದಿತು.

ಅದೇ ತಿಂಗಳಿನಲ್ಲಿ ಭಾರತಕ್ಕೆ ಪ್ರವಾಸ ಬಂದಿದ್ದ ಆಸ್ಟ್ರೇಲಿಯಾ ತಂಡದ ವಿರುದ್ಧ ಮೂರು ಏಕದಿನ ಪಂದ್ಯವನ್ನು ಆಡಿತ್ತು. ಮೊದಲ ಪಂದ್ಯವನ್ನು ಸೋತಿದ್ದ ಭಾರತ ಮುಂದಿನ ಎರಡೂ ಪಂದ್ಯಗಳನ್ನು ಗೆದ್ದು ಬಲಿಷ್ಠ ಆಸಿಸ್‌ಗೆ ಶಾಕ್ ನೀಡಿತ್ತು. ಆಸಿಸ್ ವಿರುದ್ಧದ ಪಂದ್ಯಾವಳಿಯ ನಂತರ ಭಾರತ ತಂಡ ಇದೀಗ ನ್ಯೂಜೀಲ್ಯಾಂಡ್‌ಗೆ ಪ್ರವಾಸ ನಡೆಸಿದೆ. ಈ ಪ್ರವಾಸದಲ್ಲಿ ಆತಿಥೇಯ ನ್ಯೂಜೀಲ್ಯಾಂಡ್ ವಿರುದ್ಧ ಟಿ-20, ಏಕದಿನ ಹಾಗೂ ಟೆಸ್ಟ್ ಮೂರು ಪ್ರಕಾರಗಳ ಪಂದ್ಯವನ್ನು ಆಡಲಿದೆ.

ನ್ಯೂಜೀಲ್ಯಾಂಡ್ ವಿರುದ್ಧ ಭಾರತದ ಐತಿಹಾಸಿಕ ಗೆಲುವು: ಜನವರಿ 24 ರಿಂದ ಶುರುವಾಗಿರುವ ಪಂದ್ಯಾವಳಿಯಲ್ಲಿ ಒಟ್ಟು 5 ಟಿ-20, 3 ಏಕದಿನ ಪಂದ್ಯ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈಗಾಗಲೇ 5 ಟಿ-20 ಪಂದ್ಯಗಳನ್ನು ಆಡಿದ್ದು 5-0 ಅಂತರದಲ್ಲಿ ಭರ್ಜರಿಯಾಗಿ ಐತಿಹಾಸಿಕ ವಿಜಯ ಸಾಧಿಸಿದೆ. ಐಸಿಸಿ ಸದಸ್ಯ ತಂಡಗಳ ಪೈಕಿ ಟಿ-20 ಪ್ರಕಾರದಲ್ಲಿ ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದಿರುವ (ವೈಟ್‌ವಾಷ್) ಮೊದಲ ತಂಡವೆಂಬ ಗರಿಯು ಈಗ ಭಾರತದ ಪಾಲಾಗಿದೆ.

ಅಲ್ಲದೆ 2008 ರಿಂದ ನ್ಯೂಜೀ಼ಲ್ಯಾಂಡ್ ನೆಲದಲ್ಲಿ ಟಿ-20 ಸಿರೀಸ್ ಅನ್ನು ಭಾರತ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ಅದನ್ನೂ ಸಾಧಿಸಿದೆ. ಇನ್ನೂ ಮುಂದಿನ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿಯೂ ಭಾರತ ಗೆಲ್ಲುವ ಫೇವರಿಟ್ ತಂಡವಾಗಿದೆ. ಒಟ್ಟಾರೆಯಲ್ಲಿ ಭಾರತ ವಿಶ್ವಕಪ್ ನಂತರದಲ್ಲಿ ಎಲ್ಲಾ ಪ್ರಕಾರಗಳ ಪಂದ್ಯದಲ್ಲಿ ವಿಜಯ ಸಾಧಿಸಿದೆ. ವಿಶೇಷವಾಗಿ ಟೆಸ್ಟ್ ಪಂದ್ಯಗಳಲ್ಲಿ ವೈಟ್‌ವಾಷ್ ಅನ್ನು ಸಾಧಿಸಿದೆ. ಭಾರತ ಐಸಿಸಿಯ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮುಂದುವರೆಸಿದೆ.

ದಾಖಲೆ ಬರೆದ ಕರ್ನಾಟಕದ ಕೆ.ಎಲ್. ರಾಹುಲ್

ಹಿಟ್‌ಮ್ಯಾನ್ ರೋಹಿತ್ ಶರ್ಮಾರ ಜೊತೆ ಆರಂಭಿಕ ಬ್ಯಾಟ್ಸ್ಮೆನ್ ಆಗಿ ಕಣಕ್ಕೆ ಇಳಿಯುತ್ತಿರುವ ರಾಹುಲ್ ವಿಶ್ವಕಪ್ ನಲ್ಲಿ ಹೇಳಿಕೊಳ್ಳುವಂತ ಸಾಧನೆಯನ್ನು ಮಾಡಿರಲಿಲ್ಲ. ಇದೀಗ ಶಿಖರ್ ಧವನ್‌ರ ಅನುಪಸ್ಥಿತಿಯಲ್ಲಿ ರಾಹುಲ್ ಆರಂಭಿಕ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಓಪನಿಂಗ್ ಅಲ್ಲಿ ಅತ್ಯುತ್ತಮ ಲಯ ಕಂಡುಕೊAಡಿರುವ ರಾಹುಲ್ ಎಲ್ಲರ ಮೆಚ್ಚುಗೆಯನ್ನು ಗಳಿಸಿದ್ದಾರೆ, ಭಾರತ ತಂಡದ ನಂಬಿಕಾರ್ಹ ಭರವಸೆಯ ಬ್ಯಾಟ್ಸ್ಮೆನ್ ಆಗಿದ್ದಾರೆ.

ನ್ಯೂಜೀ಼ಲ್ಯಾಂಡ್ ವಿರುದ್ಧದ ಟಿ-20 ಸಿರೀಸ್ ಅಲ್ಲಿ ಎರಡು ಅರ್ಧ ಶತಕಗಳೊಂದಿಗೆ ಒಟ್ಟು 224 ರನ್ನ ಗಳಿಸಿ ಮ್ಯಾನ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದು ಅಲ್ಲದೆ ಟಿ-20 ಸಿರೀಸ್ ಒಂದರಲ್ಲಿ ಅತ್ಯಧಿಕ ರನ್ ಗಳಿಸಿದ ಮೊದಲ ಭಾರತದ ಬ್ಯಾಟ್ಸ್ಮೆನ್ ಎಂಬ ಇತಿಹಾಸ ಬರೆದಿದ್ದಾರೆ. ಅಲ್ಲದೆ ವಿಶ್ವದ ಎರಡನೇ ಬ್ಯಾಟ್ಸ್ಮೆನ್ ಆಗಿದ್ದಾರೆ.

ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಸಾಧನೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಒಟ್ಟು 5,046 ಅಂಕಗಳೊಂದಿಗೆ ಟಾಪ್ 1 ಸ್ಥಾನದಲ್ಲಿದೆ.

ಏಕದಿನ ಕ್ರಿಕೆಟ್‌ನಲ್ಲಿ 7,748 ಅಂಕಗಳೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ.

ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಎರಡರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ವಿರಾಟ್ ಕೋಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಏಕದಿನ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬುಮ್ರಾ ಟಾಪ್ 1 ಸ್ಥಾನದಲ್ಲಿದ್ದಾರೆ.

ಏಕದಿನ ಕ್ರಿಕೆಟ್ ಬ್ಯಾಟಿಂಗ್‌ನಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ.

ಟಿ-20 ಬ್ಯಾಟಿಂಗ್ ರ‍್ಯಾಕಿಂಗ್ ಅಲ್ಲಿ ಕರ್ನಾಟಕದ ಕೆ.ಎಲ್. ರಾಹುಲ್ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಭಾರತಕ್ಕೆ ಬುಮ್ರಾ ಬಲ

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಟ್ರಂಪ್ ಕಾರ್ಡ್ ಆಗಿದ್ದ ಭರವಸೆಯ ಬೌಲರ್ ಜಸ್ಪ್ರಿತ್ ಬುಮ್ರಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಥಾನ ಗಳಿಸಿದಾಗಿನಿಂದಲೂ ಅತ್ಯುತ್ತಮ ಸಾಧನೆ ನೀಡಿದ್ದಾರೆ. ತನ್ನ ವಿಶಿಷ್ಟವಾದ ಬೌಲಿಂಗ್ ಶೈಲಿ ಹಾಗೂ ಯಾರ್ಕರ್‌ನಿಂದಾಗಿ ಬುಮ್ರಾ ವಿಶ್ವದ ಟಾಪ್ ಒನ್ ಬೌಲರ್ ಆಗಿದ್ದಾರೆ.

ಅತ್ಯಂತ ಒತ್ತಡದ ಕೊನೆಯ ಓವರ್‌ಗಳಲ್ಲಿಯೂ ಬೌಂಡರಿಗಳು ನೀಡದೆ ಬ್ಯಾಟ್ಸ್ಮೆನ್‌ಗಳು ತಿಣುಕಾಡುವಂತೆ ಮಾಡುವ ಪ್ರತಿಭಾವಂತ ಬೌಲರ್ ಬುಮ್ರಾ. ಟೆಸ್ಟ್ನಲ್ಲಿ 2.64, ಏಕದಿನ ಪಂದ್ಯಗಳಲ್ಲಿ 4.49 ಹಾಗೂ ಟಿ-20 ಅಲ್ಲಿ 6.66 ಎಕಾನಮಿಯನ್ನು (ಒವರ್ ಒಂದಕ್ಕೆ ನೀಡುವ ರನ್‌ಗಳ ಸರಾಸರಿ) ಕಾಪಾಡಿಕೊಂಡಿರುವ ಬುಮ್ರಾ ಭಾರತ ತಂಡದ ಬೌಲಿಂಗ್ ಬಲವಾಗಿದ್ದಾರೆ.

ಸುಧಾರಿಸಬೇಕಿದೆ ಫೀಲ್ಡಿಂಗ್

ಹೆಚ್ಚು ಹೊಸ ಹಾಗೂ ಅನಾನುಭವಿಗಳಿರುವ ತಂಡದಲ್ಲಿ ಫೀಲ್ಡಿಂಗ್ ನೀರಸವಾಗಿದೆ. ಕ್ಯಾಚ್‌ಗಳನ್ನು ಕೈಚೆಲ್ಲುವುದು, ಬೌಂಡರಿಗಳನ್ನು ಬಿಡುವುದು ಹೆಚ್ಚಾಗಿರುವುದು ನಾಯಕ ಕೋಹ್ಲಿಯ ಕೋಪಕ್ಕೂ ಕಾರಣವಾಗಿದೆ.

ಒಳ್ಳೆಯ ಅವಕಾಶಕ್ಕೆ ಕಾದಿರುವ ಪಾಂಡೆ

ಕರ್ನಾಟಕ ತಂಡದ ಭರವಸೆಯ ಓಪನರ್ ಮನೀಷ್ ಪಾಂಡೆ ಭಾರತದ ತಂಡದ ಟಿ-20 ಪಂದ್ಯದಲ್ಲಿ ಸ್ಥಾನ ಪಡೆದಿದ್ದು ಲೊವರ್ ಆರ್ಡರ್‌ನಲ್ಲಿ ಆಡುತ್ತಿದ್ದಾರೆ. ಮಿಡಲ್ ಆರ್ಡರ್‌ನಲ್ಲಿ ಬರುತ್ತಿರುವ ಶಿವಮ್ ದೂಬೆ ಐಪಿಎಲ್‌ನಲ್ಲಿ ಮಿಂಚಿದ್ದರಾದರೂ ನ್ಯೂಜೀ಼ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಓವರ್ ಒಂದರಲ್ಲಿ 34 ರನ್ ನೀಡಿ ಭಾರತದ ದುಬಾರಿ ಬೌಲರ್ ಆಗಿದ್ದಾರೆ. ಫೀಲ್ಡಿಂಗ್ ನಲ್ಲೂ ಕ್ಯಾಚ್‌ಗಳನ್ನು ಕೈಚೆಲ್ಲಿದ್ದಾರೆ. ಇವರ ಬದಲಿಗೆ ಮನೀಷ್ ಪಾಂಡೆಗೆ ಅವಕಾಶ ನೀಡಬೇಕೆಂದು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...