Homeಸಿನಿಮಾಕ್ರೀಡೆಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

ಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

- Advertisement -
- Advertisement -

2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆಲ್ಲುವ ಫೇವರೆಟ್ ತಂಡಗಳ ಪೈಕಿ ಒಂದಾಗಿದ್ದ ಭಾರತ ಸೆಮಿ ಫೈನಲ್ ತಲುಪಿ ಪಂದ್ಯದಿಂದ ಹೊರಬಂದಿತ್ತು. ವಿಶ್ವಕಪ್ ನಂತರದಲ್ಲಿ ನಡೆದ ಎಲ್ಲಾ ಟೂರ್ನಮೆಂಟ್‌ಗಳಲ್ಲಿ ಭಾರತದ ಸಾಧನೆ ಐತಿಹಾಸಿಕವಾದದ್ದು.

ವಿಶ್ವಕಪ್ ಪಂದ್ಯಾವಳಿಯ ನಂತರ ಸೆಪ್ಟೆಂಬರ್‌ನಲ್ಲಿ ವಿಂಡೀಸ್ ಜೊತೆಗೆ ಆರಂಭವಾದ ಟೂರ್ನಿಯಿಂದ ಈಗ ನ್ಯೂಜಿಲ್ಯಾಂಡ್‌ಗೆ ಭಾರತ ನಡೆಸಿರುವ ಟೂರ್‌ವರೆಗೂ ಭಾರತದ ಸಾಧನೆಯನ್ನು ಗಮನಿಸೋಣ.

ಸೆಪ್ಟೆಂಬರ್ ನಲ್ಲಿ ವಿಂಡೀಸ್ ವಿರುದ್ಧ ಭಾರತವು ಟೆಸ್ಟ್, ಏಕದಿನ ಪಂದ್ಯ ಹಾಗೂ ಟಿ-20 ಮೂರು ಪ್ರಕಾರಗಳಲ್ಲಿ ಆಡಿತ್ತು ಮೂರರಲ್ಲಿಯೂ ಭಾರತ ಕ್ರಮವಾಗಿ 2-0, 2-0, 2-0 ಅಂತರದಲ್ಲಿ ವಿಂಡೀಸ್‌ಗೆ ಯಾವುದೇ ಗೆಲ್ಲುವ ಅವಕಾಶ ಕೊಡದೆ ಜಯಭೇರಿ ಸಾಧಿಸಿತು.

ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಹಾಗೂ ಟೆಸ್ಟ್ ಮ್ಯಾಚ್‌ಗಳನ್ನು ಭಾರತ ಆಡಿತ್ತು. ಟಿ-20 ಯಲ್ಲಿ ಸಮಬಲ ಸಾಧಿಸಿದರೆ (1-1) ಟೆಸ್ಟ್ ಪಂದ್ಯದಲ್ಲಿ 3-0 ಅಂತರದಲ್ಲಿ ವಿಜಯ ಸಾಧಿಸಿತು.

ನವೆಂಬರ್‌ನಲ್ಲಿ ಭಾರತಕ್ಕೆ ಪ್ರವಾಸ ಬಳಸಿದ ಬಾಂಗ್ಲಾದೇಶದ ವಿರುದ್ಧ ಭಾರತ ಟಿ-20 (2-1) ಹಾಗೂ ಟೆಸ್ಟ್ (2-0) ಪಂದ್ಯಗಳಲ್ಲಿ ಸೀರಿಸ್ ಗೆದ್ದುಕೊಂಡಿತ್ತು.

ಡಿಸೆಂಬರ್‌ನಲ್ಲಿ ಕೆರೇಬಿಯನ್‌ರ ವಿರುದ್ಧ ಟಿ-20 ಯಲ್ಲಿ 2-1 ಹಾಗೂ ಏಕದಿನ ಪಂದ್ಯದಲ್ಲಿ 2-1 ಅಂತರದಿಂದ ಮತ್ತೊಮ್ಮೆ ಭಾರತ ವಿಜಯ ಸಾಧಿಸಿತು. ಜನವರಿ 2020ರ ಆರಂಭದಲ್ಲಿ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಟಿ-20 ಪಂದ್ಯವನ್ನು ಭಾರತ ಗೆದ್ದಿತು.

ಅದೇ ತಿಂಗಳಿನಲ್ಲಿ ಭಾರತಕ್ಕೆ ಪ್ರವಾಸ ಬಂದಿದ್ದ ಆಸ್ಟ್ರೇಲಿಯಾ ತಂಡದ ವಿರುದ್ಧ ಮೂರು ಏಕದಿನ ಪಂದ್ಯವನ್ನು ಆಡಿತ್ತು. ಮೊದಲ ಪಂದ್ಯವನ್ನು ಸೋತಿದ್ದ ಭಾರತ ಮುಂದಿನ ಎರಡೂ ಪಂದ್ಯಗಳನ್ನು ಗೆದ್ದು ಬಲಿಷ್ಠ ಆಸಿಸ್‌ಗೆ ಶಾಕ್ ನೀಡಿತ್ತು. ಆಸಿಸ್ ವಿರುದ್ಧದ ಪಂದ್ಯಾವಳಿಯ ನಂತರ ಭಾರತ ತಂಡ ಇದೀಗ ನ್ಯೂಜೀಲ್ಯಾಂಡ್‌ಗೆ ಪ್ರವಾಸ ನಡೆಸಿದೆ. ಈ ಪ್ರವಾಸದಲ್ಲಿ ಆತಿಥೇಯ ನ್ಯೂಜೀಲ್ಯಾಂಡ್ ವಿರುದ್ಧ ಟಿ-20, ಏಕದಿನ ಹಾಗೂ ಟೆಸ್ಟ್ ಮೂರು ಪ್ರಕಾರಗಳ ಪಂದ್ಯವನ್ನು ಆಡಲಿದೆ.

ನ್ಯೂಜೀಲ್ಯಾಂಡ್ ವಿರುದ್ಧ ಭಾರತದ ಐತಿಹಾಸಿಕ ಗೆಲುವು: ಜನವರಿ 24 ರಿಂದ ಶುರುವಾಗಿರುವ ಪಂದ್ಯಾವಳಿಯಲ್ಲಿ ಒಟ್ಟು 5 ಟಿ-20, 3 ಏಕದಿನ ಪಂದ್ಯ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈಗಾಗಲೇ 5 ಟಿ-20 ಪಂದ್ಯಗಳನ್ನು ಆಡಿದ್ದು 5-0 ಅಂತರದಲ್ಲಿ ಭರ್ಜರಿಯಾಗಿ ಐತಿಹಾಸಿಕ ವಿಜಯ ಸಾಧಿಸಿದೆ. ಐಸಿಸಿ ಸದಸ್ಯ ತಂಡಗಳ ಪೈಕಿ ಟಿ-20 ಪ್ರಕಾರದಲ್ಲಿ ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದಿರುವ (ವೈಟ್‌ವಾಷ್) ಮೊದಲ ತಂಡವೆಂಬ ಗರಿಯು ಈಗ ಭಾರತದ ಪಾಲಾಗಿದೆ.

ಅಲ್ಲದೆ 2008 ರಿಂದ ನ್ಯೂಜೀ಼ಲ್ಯಾಂಡ್ ನೆಲದಲ್ಲಿ ಟಿ-20 ಸಿರೀಸ್ ಅನ್ನು ಭಾರತ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ಅದನ್ನೂ ಸಾಧಿಸಿದೆ. ಇನ್ನೂ ಮುಂದಿನ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿಯೂ ಭಾರತ ಗೆಲ್ಲುವ ಫೇವರಿಟ್ ತಂಡವಾಗಿದೆ. ಒಟ್ಟಾರೆಯಲ್ಲಿ ಭಾರತ ವಿಶ್ವಕಪ್ ನಂತರದಲ್ಲಿ ಎಲ್ಲಾ ಪ್ರಕಾರಗಳ ಪಂದ್ಯದಲ್ಲಿ ವಿಜಯ ಸಾಧಿಸಿದೆ. ವಿಶೇಷವಾಗಿ ಟೆಸ್ಟ್ ಪಂದ್ಯಗಳಲ್ಲಿ ವೈಟ್‌ವಾಷ್ ಅನ್ನು ಸಾಧಿಸಿದೆ. ಭಾರತ ಐಸಿಸಿಯ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮುಂದುವರೆಸಿದೆ.

ದಾಖಲೆ ಬರೆದ ಕರ್ನಾಟಕದ ಕೆ.ಎಲ್. ರಾಹುಲ್

ಹಿಟ್‌ಮ್ಯಾನ್ ರೋಹಿತ್ ಶರ್ಮಾರ ಜೊತೆ ಆರಂಭಿಕ ಬ್ಯಾಟ್ಸ್ಮೆನ್ ಆಗಿ ಕಣಕ್ಕೆ ಇಳಿಯುತ್ತಿರುವ ರಾಹುಲ್ ವಿಶ್ವಕಪ್ ನಲ್ಲಿ ಹೇಳಿಕೊಳ್ಳುವಂತ ಸಾಧನೆಯನ್ನು ಮಾಡಿರಲಿಲ್ಲ. ಇದೀಗ ಶಿಖರ್ ಧವನ್‌ರ ಅನುಪಸ್ಥಿತಿಯಲ್ಲಿ ರಾಹುಲ್ ಆರಂಭಿಕ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಓಪನಿಂಗ್ ಅಲ್ಲಿ ಅತ್ಯುತ್ತಮ ಲಯ ಕಂಡುಕೊAಡಿರುವ ರಾಹುಲ್ ಎಲ್ಲರ ಮೆಚ್ಚುಗೆಯನ್ನು ಗಳಿಸಿದ್ದಾರೆ, ಭಾರತ ತಂಡದ ನಂಬಿಕಾರ್ಹ ಭರವಸೆಯ ಬ್ಯಾಟ್ಸ್ಮೆನ್ ಆಗಿದ್ದಾರೆ.

ನ್ಯೂಜೀ಼ಲ್ಯಾಂಡ್ ವಿರುದ್ಧದ ಟಿ-20 ಸಿರೀಸ್ ಅಲ್ಲಿ ಎರಡು ಅರ್ಧ ಶತಕಗಳೊಂದಿಗೆ ಒಟ್ಟು 224 ರನ್ನ ಗಳಿಸಿ ಮ್ಯಾನ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದು ಅಲ್ಲದೆ ಟಿ-20 ಸಿರೀಸ್ ಒಂದರಲ್ಲಿ ಅತ್ಯಧಿಕ ರನ್ ಗಳಿಸಿದ ಮೊದಲ ಭಾರತದ ಬ್ಯಾಟ್ಸ್ಮೆನ್ ಎಂಬ ಇತಿಹಾಸ ಬರೆದಿದ್ದಾರೆ. ಅಲ್ಲದೆ ವಿಶ್ವದ ಎರಡನೇ ಬ್ಯಾಟ್ಸ್ಮೆನ್ ಆಗಿದ್ದಾರೆ.

ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಸಾಧನೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಒಟ್ಟು 5,046 ಅಂಕಗಳೊಂದಿಗೆ ಟಾಪ್ 1 ಸ್ಥಾನದಲ್ಲಿದೆ.

ಏಕದಿನ ಕ್ರಿಕೆಟ್‌ನಲ್ಲಿ 7,748 ಅಂಕಗಳೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ.

ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಎರಡರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ವಿರಾಟ್ ಕೋಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಏಕದಿನ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬುಮ್ರಾ ಟಾಪ್ 1 ಸ್ಥಾನದಲ್ಲಿದ್ದಾರೆ.

ಏಕದಿನ ಕ್ರಿಕೆಟ್ ಬ್ಯಾಟಿಂಗ್‌ನಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ.

ಟಿ-20 ಬ್ಯಾಟಿಂಗ್ ರ‍್ಯಾಕಿಂಗ್ ಅಲ್ಲಿ ಕರ್ನಾಟಕದ ಕೆ.ಎಲ್. ರಾಹುಲ್ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಭಾರತಕ್ಕೆ ಬುಮ್ರಾ ಬಲ

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಟ್ರಂಪ್ ಕಾರ್ಡ್ ಆಗಿದ್ದ ಭರವಸೆಯ ಬೌಲರ್ ಜಸ್ಪ್ರಿತ್ ಬುಮ್ರಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಥಾನ ಗಳಿಸಿದಾಗಿನಿಂದಲೂ ಅತ್ಯುತ್ತಮ ಸಾಧನೆ ನೀಡಿದ್ದಾರೆ. ತನ್ನ ವಿಶಿಷ್ಟವಾದ ಬೌಲಿಂಗ್ ಶೈಲಿ ಹಾಗೂ ಯಾರ್ಕರ್‌ನಿಂದಾಗಿ ಬುಮ್ರಾ ವಿಶ್ವದ ಟಾಪ್ ಒನ್ ಬೌಲರ್ ಆಗಿದ್ದಾರೆ.

ಅತ್ಯಂತ ಒತ್ತಡದ ಕೊನೆಯ ಓವರ್‌ಗಳಲ್ಲಿಯೂ ಬೌಂಡರಿಗಳು ನೀಡದೆ ಬ್ಯಾಟ್ಸ್ಮೆನ್‌ಗಳು ತಿಣುಕಾಡುವಂತೆ ಮಾಡುವ ಪ್ರತಿಭಾವಂತ ಬೌಲರ್ ಬುಮ್ರಾ. ಟೆಸ್ಟ್ನಲ್ಲಿ 2.64, ಏಕದಿನ ಪಂದ್ಯಗಳಲ್ಲಿ 4.49 ಹಾಗೂ ಟಿ-20 ಅಲ್ಲಿ 6.66 ಎಕಾನಮಿಯನ್ನು (ಒವರ್ ಒಂದಕ್ಕೆ ನೀಡುವ ರನ್‌ಗಳ ಸರಾಸರಿ) ಕಾಪಾಡಿಕೊಂಡಿರುವ ಬುಮ್ರಾ ಭಾರತ ತಂಡದ ಬೌಲಿಂಗ್ ಬಲವಾಗಿದ್ದಾರೆ.

ಸುಧಾರಿಸಬೇಕಿದೆ ಫೀಲ್ಡಿಂಗ್

ಹೆಚ್ಚು ಹೊಸ ಹಾಗೂ ಅನಾನುಭವಿಗಳಿರುವ ತಂಡದಲ್ಲಿ ಫೀಲ್ಡಿಂಗ್ ನೀರಸವಾಗಿದೆ. ಕ್ಯಾಚ್‌ಗಳನ್ನು ಕೈಚೆಲ್ಲುವುದು, ಬೌಂಡರಿಗಳನ್ನು ಬಿಡುವುದು ಹೆಚ್ಚಾಗಿರುವುದು ನಾಯಕ ಕೋಹ್ಲಿಯ ಕೋಪಕ್ಕೂ ಕಾರಣವಾಗಿದೆ.

ಒಳ್ಳೆಯ ಅವಕಾಶಕ್ಕೆ ಕಾದಿರುವ ಪಾಂಡೆ

ಕರ್ನಾಟಕ ತಂಡದ ಭರವಸೆಯ ಓಪನರ್ ಮನೀಷ್ ಪಾಂಡೆ ಭಾರತದ ತಂಡದ ಟಿ-20 ಪಂದ್ಯದಲ್ಲಿ ಸ್ಥಾನ ಪಡೆದಿದ್ದು ಲೊವರ್ ಆರ್ಡರ್‌ನಲ್ಲಿ ಆಡುತ್ತಿದ್ದಾರೆ. ಮಿಡಲ್ ಆರ್ಡರ್‌ನಲ್ಲಿ ಬರುತ್ತಿರುವ ಶಿವಮ್ ದೂಬೆ ಐಪಿಎಲ್‌ನಲ್ಲಿ ಮಿಂಚಿದ್ದರಾದರೂ ನ್ಯೂಜೀ಼ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಓವರ್ ಒಂದರಲ್ಲಿ 34 ರನ್ ನೀಡಿ ಭಾರತದ ದುಬಾರಿ ಬೌಲರ್ ಆಗಿದ್ದಾರೆ. ಫೀಲ್ಡಿಂಗ್ ನಲ್ಲೂ ಕ್ಯಾಚ್‌ಗಳನ್ನು ಕೈಚೆಲ್ಲಿದ್ದಾರೆ. ಇವರ ಬದಲಿಗೆ ಮನೀಷ್ ಪಾಂಡೆಗೆ ಅವಕಾಶ ನೀಡಬೇಕೆಂದು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...