Homeಸಿನಿಮಾಕ್ರೀಡೆವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

2019ರ ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ಥಾನ ವಿರುದ್ಧ ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟ ಶಮಿ ಭಾರತದ ಹೆಮ್ಮೆ ಎಂದು ಕೊಂಡಾಡಲಾಗಿದೆ.

- Advertisement -
- Advertisement -

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದು ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡ ನಿಂತಿರುವುದರ ದ್ಯೋತಕವಾಗಿದೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಇಂದು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...