Homeಸಿನಿಮಾಕ್ರೀಡೆವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

2019ರ ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ಥಾನ ವಿರುದ್ಧ ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟ ಶಮಿ ಭಾರತದ ಹೆಮ್ಮೆ ಎಂದು ಕೊಂಡಾಡಲಾಗಿದೆ.

- Advertisement -
- Advertisement -

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದು ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡ ನಿಂತಿರುವುದರ ದ್ಯೋತಕವಾಗಿದೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಇಂದು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...