Homeಸಿನಿಮಾಕ್ರೀಡೆವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

2019ರ ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ಥಾನ ವಿರುದ್ಧ ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟ ಶಮಿ ಭಾರತದ ಹೆಮ್ಮೆ ಎಂದು ಕೊಂಡಾಡಲಾಗಿದೆ.

- Advertisement -
- Advertisement -

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದು ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡ ನಿಂತಿರುವುದರ ದ್ಯೋತಕವಾಗಿದೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಇಂದು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...