Homeಮುಖಪುಟ4 ವರ್ಷದೊಳಗಿನ ಮಕ್ಕಳಿಗೆ ಶೀತ ನಿವಾರಕ ಔಷಧದ ಮಿಶ್ರಣ ನೀಡಬೇಡಿ: CDSCO

4 ವರ್ಷದೊಳಗಿನ ಮಕ್ಕಳಿಗೆ ಶೀತ ನಿವಾರಕ ಔಷಧದ ಮಿಶ್ರಣ ನೀಡಬೇಡಿ: CDSCO

- Advertisement -
- Advertisement -

ಭಾರತೀಯ ಔಷಧ ನಿಯಂತ್ರಕ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಶಿಶುಗಳು ಮತ್ತು 4 ವರ್ಷದೊಳಗಿನ ಮಕ್ಕಳಿಗೆ ವ್ಯಾಪಕವಾಗಿ ಬಳಸುವ ಶೀತ ನಿವಾರಕ ಕಾಕ್ಟೈಲ್ ಮೆಡಿಸಿನ್  ಮಿಶ್ರಣವನ್ನು ನೀಡದಂತೆ ನಿಷೇಧಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ರಾಜ್ಯದ ಡ್ರಗ್ ಕಂಟ್ರೋಲರ್‌ಗಳಿಗೆ ತಮ್ಮ ವ್ಯಾಪ್ತಿಯಲ್ಲಿರುವ ತಯಾರಕರಿಗೆ ಈ ಕುರಿತು ಮಹತ್ವದ ಸೂಚನೆಯನ್ನು ನೀಡಿದೆ. ಜೂನ್‌ನಲ್ಲಿ ತಜ್ಞರ ಸಮಿತಿ ನೀಡಿದ ಶಿಫಾರಸುಗಳ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಮತ್ತು ಸಿಡಿಎಸ್‌ಸಿಒ ಮುಖ್ಯಸ್ಥ ಡಾ ರಾಜೀವ್ ಸಿಂಗ್ ರಘುವಂಶಿ ಹೇಳಿದ್ದಾರೆ.

ಶೀತ ವಿರೋಧಿ ಔಷಧದಲ್ಲಿ ಕ್ಲೋರ್ಫೆನಿರಮೈನ್ ಮೆಲೇಟ್ ಮತ್ತು ಫೀನೈಲ್ಫ್ರಿನ್ ಹೈಡ್ರೋಕ್ಲೋರೈಡ್‌ನ ‘ಫಿಕ್ಸೆಡ್-ಡೋಸ್  (ಎಫ್‌ಡಿಸಿ) ಬಳಸಲಾಗುತ್ತದೆ. ರಾಯಿಟರ್ಸ್ ಪ್ರಕಾರ, ಸಾಮಾನ್ಯ ಶೀತ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡಲು ಎಫ್‌ಡಿಸಿಯನ್ನು ಸಿರಪ್‌ಗಳು ಮತ್ತು ಟ್ಯಾಬ್ಲೆಟ್‌ಗಳಲ್ಲಿ ಬಳಸಲಾಗುತ್ತದೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಅಪೆಕ್ಸ್ ಹೆಲ್ತ್ ರೆಗ್ಯುಲೇಟರಿ ಏಜೆನ್ಸಿಯು ಕ್ಲೋರ್‌ಫೆನಿರಮೈನ್ ಮಲೇಟ್ ಐಪಿ 2ಎಂಜಿ ಮತ್ತು ಫೆನೈಲ್‌ಫ್ರಿನ್ ಎಚ್‌ಸಿಐ ಐಪಿ 5ಎಂಜಿ ಡ್ರಾಪ್ಸ್‌ನ ಸ್ಥಿರ ಔಷಧ ಸಂಯೋಜನೆಯ ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಮಿಶ್ರಣವು  ಶಿಶುಗಳಿಗೆ ಅನುಮೋದಿತವಲ್ಲ ಎಂದು ಹೇಳಿದೆ.

ಭಾರತದಲ್ಲಿ ತಯಾರಿಸಲಾದ ಕೆಮ್ಮುವಿನ ಸಿರಪ್‌ಗಳ ಸೇವನೆ ಬಳಿಕ ವಿದೇಶದಲ್ಲಿ ಮಕ್ಕಳ ಸಾವುಗಳು ವರದಿ ಬಳಿಕ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ಗಳು ಪರಿಶೀಲನೆಗೆ ಒಳಪಟ್ಟಿವೆ. 2022ರಲ್ಲಿ ಗ್ಯಾಂಬಿಯಾ, ಉಜ್ಬೇಕಿಸ್ತಾನ್ ಮತ್ತು ಕ್ಯಾಮರೂನ್‌ನಲ್ಲಿ 141 ಮಕ್ಕಳ ಸಾವುಗಳು ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳಿಗೆ ಸಂಬಂಧಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು.

ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿ, ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿಯು ತಯಾರಿಸಿದ ಡಿಕೊಂಜೆಸ್ಟೆಂಟ್ ಮತ್ತು ಕೆಮ್ಮಿನ ಸಿರಪ್ ಕುಡಿದು 66 ಮಕ್ಕಳು ಸಾವನ್ನಪ್ಪಿದ್ದರು. ಆ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಈ ಸಿರಪ್‌ಗಳನ್ನು ಬಳಸದಂತೆ ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ದೆಹಲಿಯಲ್ಲಿರುವ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತನಿಖೆಗೆ ಆದೇಶಿಸಿತ್ತು.

ಈ ಡ್ರಗ್ಸ್‌ನ್ನು ಹರ್ಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ಕಂಪನಿಯಲ್ಲಿ ತಯಾರಿಸಲಾಗುತ್ತಿತ್ತು. ಇದನ್ನು ಸೇವಿಸಿದ ಪರಿಣಾಮ ಭಾರೀ ಪ್ರಮಾಣದಲ್ಲಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು. ಔಷಧಿ ಸೇವಿಸಿದ ಮಕ್ಕಳು ಮೂತ್ರಪಿಂಡದ ಹಾನಿ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದರು ಎನ್ನಲಾಗಿತ್ತು.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...