Homeಎಕಾನಮಿಭಾರತ ಮತ್ತು ವಿಶ್ವಾಸ ಕಳೆದುಕೊಂಡ ಆರ್ಥಿಕತೆ : ಕೌಶಿಕ್ ಬಸು

ಭಾರತ ಮತ್ತು ವಿಶ್ವಾಸ ಕಳೆದುಕೊಂಡ ಆರ್ಥಿಕತೆ : ಕೌಶಿಕ್ ಬಸು

ಆರ್ಥಿಕ ಬೆಳವಣಿಗೆ ನಿಧಾನವಾಗುತ್ತಿರುವುದರ ಜೊತೆಗೆ ಅಸಮಾನತೆಯು ಹೆಚ್ಚುತ್ತಿದೆ. ಆಕ್ಸ್ಫಾಮ್ ಪ್ರಕಾರ 2017ರಲ್ಲಿ ಶೇಕಡ 73ರಷ್ಟು ಸಂಪತ್ತು ಶೇಕಡ ಒಂದರಷ್ಟು ಶ್ರೀಮಂತ ಜನಕ್ಕೆ ಹೋಗುತ್ತಿತ್ತು. ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಅಸಮಾನತೆ ಹದಗೆಡುತ್ತಿತ್ತು.

- Advertisement -
- Advertisement -

ಕೃಪೆ: ನ್ಯೂಯಾರ್ಕ್ ಟೈಮ್ಸ್

ಅನುವಾದ : ಟಿ.ಎಸ್ ವೇಣುಗೋಪಾಲ್

ಬಲವಾದ ಸರ್ಕಾರವಿರುವ ದೇಶಗಳಲ್ಲಿ ಅಂತಿಮವಾಗಿ ಆರ್ಥಿಕತೆ ದುರ್ಬಲವಾಗುತ್ತದೆ. ಭಾರತ ಕೂಡ ಅದೇ ಹಾದಿ ಹಿಡಿಯುವ ಅಪಾಯದಲ್ಲಿದೆ. ಈ ಮೊದಲು ಇಲ್ಲಿ ಆರ್ಥಿಕತೆ ತೃಪ್ತಿಕರವಾಗೇ ಇತ್ತು.

ಜಾಗತಿಕ ಬ್ಯಾಂಕ್ ಬೇರೆ ಬೇರೆ ದೇಶಗಳಲ್ಲಿ ಉದ್ದಿಮೆ ನಡೆಸಲು ಇರುವ ವಾತಾವರಣ ಎಷ್ಟು ಅನುಕೂಲಕರವಾಗಿದೆ ಎಂಬುದನ್ನು ತೌಲನಿಕವಾಗಿ ಅಧ್ಯಯನ ಮಾಡಿ ಒಂದು ವರದಿಯನ್ನು ಪ್ರತಿ ವರ್ಷ ಪ್ರಕಟಿಸುತ್ತದೆ. ಈ ವರ್ಷವೂ ಅದು 190 ದೇಶಗಳಲ್ಲಿ ಅಂತಹ ಒಂದು ಅಧ್ಯಯನ ಮಾಡಿ ಒಂದು ವರದಿಯನ್ನು ಪ್ರಕಟಿಸಿದೆ. ಕಳೆದ ವರ್ಷ ಭಾರತ 77ನೇ ಸ್ಥಾನದಲ್ಲಿತ್ತು. ಈಗ ಅದರ ಸ್ಥಿತಿ ಸುಧಾರಿಸಿ ಅದು 63ನೇ ಸ್ಥಾನಕ್ಕೆ ಬಂದಿದೆ. ಭಾರತದ ಹಾಗೆ ಸೌದಿ ಅರೇಬಿಯಾ, ಪಾಕಿಸ್ಥಾನ ಮತ್ತು ಚೀನಾ ಮೊದಲಾದ ಹತ್ತು ದೇಶಗಳು ಈ ವರದಿಯಲ್ಲಿ ಪ್ರಗತಿಯನ್ನು ಸಾಧಿಸಿದೆ. ಆದರೆ ಭಾರತದಲ್ಲಿ ಪ್ರಮುಖ ಸೂಚಿಗಳು ಆರ್ಥಿಕತೆ ತೀವ್ರವಾಗಿ ಕುಸಿಯುತ್ತಿವೆ.

2014ರಲ್ಲಿ ಅಧಿಕಾರಕ್ಕೆ ಬಂದರೆ ಭಾರತವನ್ನು ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ಪ್ರಬಲವಾದ ಆರ್ಥಿಕ ಶಕ್ತಿಯನ್ನಾಗಿ ಮಾಡುತ್ತೇನೆ ಎಂಬ ಭರವಸೆಯನ್ನು ನರೇಂದ್ರ ಮೋದಿಯವರು ನೀಡಿದ್ದರು. ಆಯ್ಕೆಯೂ ಆದರು. ಈ ವರ್ಷ ಮತ್ತೆ ಚುನಾಯಿತರಾದ ಮೇಲೆ ಭಾರತವನ್ನು 2024ರವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ಅಂದರೆ ಆರ್ಥಿಕತೆಯನ್ನು ಈಗ ಇರುವುದರ ದುಪ್ಪಟ ಬೆಳೆಸುವುದಾಗಿ ತಿಳಿಸಿದ್ದಾರೆೆ.

ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರ ಭಾರತದ ವರಮಾನದ ಬೆಳವಣಿಗೆಯ ದರ ಈ ವರ್ಷದ ಎರಡನೆ ಪಾದದಲ್ಲಿ ಕೇವಲ ಶೇಕಡ 5ರಷ್ಟಿದೆ. ಕಳೆದ ವರ್ಷ ಅದು ಶೇಕಡ 8ರಷ್ಟಿತ್ತು. 2019ರಲ್ಲಿ ಭಾರತದ ಬೆಳವಣಿಗೆಯ ದರ ಶೇಕಡ 7.3ರಷ್ಟು ಇರುತ್ತದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಏಪ್ರಿಲಿನಲ್ಲಿ ಅಂದಾಜು ಮಾಡಿತ್ತು. ಆದರೆ ಈಗಿನ ಪರಿಸ್ಥಿತಿಯನ್ನು ಗಮನಿಸಿ ತನ್ನ ಅಂದಾಜನ್ನು ಅದು ಶೇಕಡ 6.1ಕ್ಕೆ ಇಳಿಸಿದೆ. 2003ರಿಂದ 2011ರವರೆಗೆ ಬೆಳವಣಿಗೆ ದರ ಸುಮಾರಾಗಿ ಶೇಕಡ 8.5ರಷ್ಟಿತ್ತು. 2005ರಿಂದ 2008ರ ಅವಧಿಯಲ್ಲಿ ಭಾರತದ ಆರ್ಥಿಕತೆಯ ವಾರ್ಷಿಕ ಬೆಳವಣಿಗೆ ಶೇಕಡ 9ಕ್ಕಿಂತ ಹೆಚ್ಚಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅದು ದಿಢೀರನೆ ತೀರಾ ಕಮ್ಮಿಯಾಗಿದೆ. ಇದು ತೀರಾ ಅನಿರೀಕ್ಷಿತ, ಅಷ್ಟೇ ಕಳವಳಕಾರಿಯಾದ ಸಂಗತಿ.

ವಿವರಗಳನ್ನು ಗಮನಿಸಿದರೆ ಈ ಕುಸಿತ ಸ್ಪಷ್ಟವಾಗುತ್ತದೆ. ಪ್ರಯಾಣಿಕರ ಕಾರು ಮಾರಾಟ ಕೆಲ ದಿನಗಳಿಂದ ಇಳಿಯುತ್ತಿದೆ. 2018ಕ್ಕೆ ಹೋಲಿಸಿದರೆ ಏಪ್ರಿಲ್ ಮತ್ತು ಸೆಪ್ಟೆಂಬರ್ ನಡುವೆ ಅದು ಶೇಕಡ 23ರಷ್ಟು ಕುಸಿದಿದೆ. ಇದನ್ನು ಭಾರತೀಯ ಆಟೋಮೊಬೈಲ್ ಉತ್ಪಾದಕರ ಸಂಘವು ತಿಳಿಸಿದೆ. ರಫ್ತು ಹಲವು ದಿನಗಳಿಂದ ಮಂದಗೊಂಡಿದೆ. ಸ್ಟಾಂಡರ್ಡ್ ಅಂಡ್ ಪೂರ್ ಸಂಘಟನೆಯು ಭಾರತೀಯ ಹಣಕಾಸು ವಲಯದ ಹೆಚ್ಚುತ್ತಿರುವ ಅಪಾಯದ ಬಗ್ಗೆ ಎಚ್ಚರಿಸಿದೆ. ಈಗಿನ ನಿರುದ್ಯೋಗ ದರ ಕಳೆದ 45ವರ್ಷಗಳಲ್ಲೇ ಅತಿ ಹೆಚ್ಚಿನ ಮಟ್ಟವನ್ನು ತಲುಪಿದೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಆರ್ಥಿಕ ಬೆಳವಣಿಗೆ ನಿಧಾನವಾಗುತ್ತಿರುವುದರ ಜೊತೆಗೆ ಅಸಮಾನತೆಯು ಹೆಚ್ಚುತ್ತಿದೆ. ಆಕ್ಸ್ಫಾಮ್ ಪ್ರಕಾರ 2017ರಲ್ಲಿ ಶೇಕಡ 73ರಷ್ಟು ಸಂಪತ್ತು ಶೇಕಡ ಒಂದರಷ್ಟು ಶ್ರೀಮಂತ ಜನಕ್ಕೆ ಹೋಗುತ್ತಿತ್ತು. ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಅಸಮಾನತೆ ಹದಗೆಡುತ್ತಿತ್ತು. ಆದರೆ ಬೆಳವಣೆಗೆ ನಿಧಾನವಾಗುತ್ತಿರುವುದರಿಂದ ಮತ್ತು ನಿರುದ್ಯೋಗ ಹೆಚ್ಚುತ್ತಿರುವುದರಿಂದ ಅದರ ಪರಿಣಾಮ ಹೆಚ್ಚು ನೋವು ಉಂಟುಮಾಡುತ್ತಿದೆ.

ಕೆಲವು ಅಂದಾಜಿನ ಪ್ರಕಾರ ಆರ್ಥಿಕ ಬೆಳವಣಿಗೆ ಋಣಾತ್ಮಕವಾಗುತ್ತಿದೆ. ಪರಿಸ್ಥಿತಿ ಹೀಗಿದ್ದಾಗ ಭಾರತದಲ್ಲಿ ಉದ್ದಿಮೆ ನಡೆಸಲು ಬೇಕಾದ ವಾತಾವರಣ ಸುಧಾರಿಸುವುದಕ್ಕೆ ಹೇಗೆ ಸಾಧ್ಯ?

ಒಂದು ದೇಶದಲ್ಲಿನ ಉದ್ಧಿಮ ನಡೆಸಲು ಇರುವ ಪರಿಸ್ಥಿತಿ ಎಷ್ಟು ಸಲೀಸಾಗಿದೆ ಎಂದು ನಿರ್ಧರಿಸಲು ವಿಶ್ವಬ್ಯಾಂಕ್ ಆಯಾ ದೇಶದಲ್ಲಿ ಲಿಖಿತರೂಪದಲ್ಲಿನ ಕಾನೂನನ್ನು ಗಮನಿಸುತ್ತದೆಯೇ ಹೊರತು ವಿನಃ ಆಚರಣೆಯಲ್ಲಿ ಅದು ಹೇಗೆ ಕೆಲಸ ಮಾಡುತ್ತಿದೆ ಅನ್ನುವುದನ್ನು ಪರಿಗಣಿಸುವುದಿಲ್ಲ. ವಿಶ್ವಬ್ಯಾಂಕಿನ ವರದಿಯೇ ಹೇಳುವಂತೆ “ವ್ಯವಹಾರ ನಡೆಸುವುದಕ್ಕೆ ವಾತಾವರಣ ಎಷ್ಟು ಸುಲಲಿತವಾಗಿದೆ ಎಂದು ಲೆಕ್ಕಹಾಕುವುದಕ್ಕೆ ಬಳಸುವ ಅಂಕಿಅಂಶದಲ್ಲಿ ಸುಮಾರು ಮೂರನೇ ಎರಡು ಭಾಗ ಕಾನೂನಿನ ಪಠ್ಯವನ್ನು ಆಧರಿಸಿರುತ್ತದೆ.” ಅಂದರೆ ಸರ್ಕಾರಗಳು ಬೇಕಾದರೆ ತಮ್ಮ ದೇಶದ ಸೂಚ್ಯಾಂಕವನ್ನು ಉತ್ತಮ ಪಡಿಸಿಕೊಳ್ಳುವುದಕ್ಕೆ ಅದಕ್ಕೆ ಬೇಕಾದ ಹಾಗೆ ನಿಯಮಗಳನ್ನು ಮಾರ್ಪಡಿಸಿಕೊಳ್ಳಬಹುದು. ಆದರೆ ಆ ಬದಲಾವಣೆಗಳು ವಾಸ್ತವದಲ್ಲಿ ಏನೂ ಪರಿಣಾಮ ಬೀರದೆಯೂ ಇರಬಹುದು.

ಆದರೆ ನಿಜವಾದ ಪ್ರಗತಿಯ ವಿಷಯದಲ್ಲಿ ಇದು ಸಾಧ್ಯವಿಲ್ಲ. ಅಲ್ಲಿ ವಾಸ್ತವದಲ್ಲಿ ಕಾನೂನು ಹೇಗೆ ಕೆಲಸ ಮಾಡುತ್ತವೆ ಅನ್ನುವುದು ಮುಖ್ಯವಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಇಡೀ ಸಮಾಜದಲ್ಲಿ ಒಡಕು ಹೆಚ್ಚುತ್ತಿದೆ. ಸರ್ಕಾರದ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಕೊನೆಯ ಪಕ್ಷ ಪ್ರಮುಖ ಆರ್ಥಿಕ ಅಂಶಗಳ ವಿಷಯದಲ್ಲಂತೂ ಈ ವಿಶ್ವಾಸದ ಕೊರತೆಯನ್ನು ಕಾಣಬಹುದು. ಹೂಡಿಕೆಯ ಕುಸಿತ ವಿಶ್ವಾಸದ ಕುಸಿತವನ್ನು ಪರೋಕ್ಷವಾಗಿ ಸೂಚಿಸುತ್ತದೆ. ಅದನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ. ಅರ್ಥಶಾಸ್ತ್ರಜ್ಞರು “ಹೂಡಿಕೆ” ಅನ್ನುವಾಗ ರಾಷ್ಟ್ರೀಯ ಉತ್ಪನ್ನದ ಒಂದು ಭಾಗ ಮಾತ್ರವನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳುತ್ತಾರೆ. ಅದರಲ್ಲಿ ಆಹಾರ, ಬಟ್ಟೆ, ವಸತಿ ಇತ್ಯಾದಿ ಬಳಕೆಯ ವಸ್ತುಗಳು ಸೇರುವುದಿಲ್ಲ. ಕೇವಲ ಮುಂದಿನ ಉತ್ಪಾದಕತೆಯನ್ನು ಹೆಚ್ಚಿಸಬಲ್ಲ ಯಂತ್ರಗಳು, ಫ್ಯಾಕ್ಟರಿಗಳು ಮತ್ತು ಮೂಲಭೂತ ಸೌಕರ್ಯಗಳು ಮಾತ್ರ ಸೇರಿರುತ್ತವೆ.

ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿಜವೇ? ಹೇಗೆ?

ದುಡಿಯುವ ಜನ ಹೇರಳವಾಗಿ ಇರುವ ರಾಷ್ಟ್ರಗಳಲ್ಲಿ ಹೂಡಿಕೆ ಹೆಚ್ಚಿದಂತೆ ಒಟ್ಟಾರೆಯಾಗಿ ಬೆಳವಣಿಗೆಯೂ ಹೆಚ್ಚುತ್ತದೆ. ಇದನ್ನು ಆರ್ಥಿಕ ಸಿದ್ಧಾಂತಗಳೂ ಹೇಳುತ್ತವೆ, ವಾಸ್ತವ ಬದುಕಿನಲ್ಲೂ ಇದಕ್ಕೆ ಪುರಾವೆಗಳು ಸಿಗುತ್ತವೆ. ರಾಬರ್ಟ್ ಸೊಲೊ ಅವರ ಪ್ರಖ್ಯಾತ ಸಿದ್ಧಾಂತವೂ ಇದನ್ನೇ ಹೇಳುತ್ತದೆ. ಹಾಗೆಯೇ ಹಲವು ರಾಷ್ಟ್ರಗಳ ಉದಾಹರಣೆಗಳು, ಅದರಲ್ಲೂ ವಿಶೇಷವಾಗಿ 1980ರಲ್ಲಿ ಅತ್ಯಂತ ವೇಗವಾಗಿ ಬೆಳೆದ ಇಸ್ಟ್ ಏಶ್ಯನ್ ಆರ್ಥಿಕತೆಗಳು ಈ ಅಂಶವನ್ನು ಪುಷ್ಠೀಕರಿಸುತ್ತವೆ.

1947ರಲ್ಲಿ ಸ್ವಾತಂತ್ರ್ಯ ಬಂದ ಮೇಲೆ ಬಹು ವರ್ಷಗಳ ಕಾಲ ಇಂಡಿಯಾದಲ್ಲಿ ಹೂಡಿಕೆಯ ಪ್ರಮಾಣ ಕಡಿಮೆಯೇ ಇತ್ತು. 1970ರವರೆಗೆ ಭಾರತದ ಹೂಡಿಕೆ ಜಿಡಿಪಿಯ ಶೇಕಡ 20ನ್ನು ಮೀರಿರಲಿಲ್ಲ. 2004-05ರಲ್ಲಿ ಅದು ಮೊಟ್ಟಮೊದಲಿಗೆ ಶೇಕಡ 30ರ ಗಡಿಯನ್ನು ದಾಟಿತು. 2011-12ರಲ್ಲಿ ಶೇಕಡ 39ರಷ್ಟಾಗಿತ್ತು. 1980ರಲ್ಲಿ ಭಾರತ ಬಹುಮಟ್ಟಿಗೆ ಇಸ್ಟ್ ಏಷಿಯನ್ ಆರ್ಥಿಕತೆಯನ್ನು ಹೋಲುತ್ತಿತ್ತು. ಅವುಗಳ ಹಾಗೆಯೇ ಬೆಳೆಯಿತು. ನಂತರ ಹೂಡಿಕೆ ಇಳಿಮುಖವಾಗತೊಡಗಿತು. 2016-17ರಲ್ಲಿ ಅದು ಮತ್ತೆ ಶೇಕಡ 30ಕ್ಕೆ ಬಂತು.

ಆರ್ಥಿಕ ಪರಿಸ್ಥಿತಿ ಚೆನ್ನಾಗಿದ್ದರೆ ಅದರ ಬಗ್ಗೆ ಉದ್ದಿಮೆದಾರರಿಗೆ ಹೆಚ್ಚಿನ ವಿಶ್ವಾಸ ಹೆಚ್ಚಿರುತ್ತದೆ. ಆರ್ಥಿಕತೆ ಕುಸಿದರೆ ಅದರ ಬಗ್ಗೆ ವಿಶ್ವಾಸವೂ ಕುಸಿಯುತ್ತದೆ. ಇದು ನಿರೀಕ್ಷಿತವೇ. ಸಧ್ಯದ ಪರಿಸ್ಥಿತಿ ಹಾಗೂ ಭವಿಷ್ಯದಲ್ಲಿ ಅದು ಚೆನ್ನಾಗಿರುತ್ತದೆ ಎಂಬ ವಿಶ್ವಾಸ ಇದ್ದರೆ ಉದ್ದಿಮೆ ಹಣ ಹೂಡುತ್ತದೆ. ಇಲ್ಲದೇ ಹೋದರೆ ಬಂಡವಾಳ ಹೂಡುವುದಕ್ಕೆ ಹಿಂದೇಟು ಹಾಕುತ್ತವೆ. ಸರ್ಕಾರ ಮಾರ್ಕೆಟ್ಟಿನಲ್ಲಿ ತೀವ್ರವಾಗಿ ಹಸ್ತಕ್ಷೇಪ ಮಾಡಿದರೆ ವಿಶ್ವಾಸ ಕೆಡುತ್ತದೆ. ಉದಾಹರಣೆಗೆ 2016ರಲ್ಲಿ ಸರ್ಕಾರ ನೋಟನ್ನು ರದ್ದುಗೊಳಿಸಲು ನಿರ್ಧರಿಸಿದಾಗ ವಿಶ್ವಾಸಕ್ಕೆ ಹೊಡೆತ ಬಿತ್ತು. ಹಾಗೆಯೇ ರಾಜಕೀಯದಲ್ಲಿ ಅಥವಾ ಅಧಿಕಾರಶಾಹಿಯಲ್ಲಿ ಅಸಹನೆ ಕಂಡಬಂದಾಗಲೂ ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ.

ಅರ್ಥಶಾಸ್ತ್ರಜ್ಞರು ಇದನ್ನು ಒಪ್ಪುವುದಕ್ಕೆ ಇಷ್ಟಪಡುವುದಿಲ್ಲ. ಆದರೆ ಒಂದು ದೇಶದ ಆರ್ಥಿಕ ಸ್ಥಿತಿ, ಆ ದೇಶದ ಆರ್ಥಿಕ ನೀತಿಯಷ್ಟೇ ಅದರ ರಾಜಕೀಯವನ್ನು ಆಧರಿಸಿರುತ್ತದೆ. ಸ್ವಾತಂತ್ರ್ಯ ಬಂದ ಪ್ರಾರಂಭದಲ್ಲಿ ಭಾರತ ರಾಜಕೀಯ ಸಂಸ್ಥೆಗಳನ್ನು ಸಂಘಟಿಸಿತು. ಪ್ರಜಾಸತ್ತೆ, ವಾಕ್ ಸ್ವಾತಂತ್ರ್ಯ, ಮುಕ್ತ ಮಾಧ್ಯಮ, ಧರ್ಮ ನಿರಪೇಕ್ಷತೆ, ಹಾಗೂ ಅಲ್ಪ ಸಂಖ್ಯಾತರ ಹಕ್ಕುಗಳ ರಕ್ಷಣೆ ಇವುಗಳಿಗೆ ಒತ್ತು ನೀಡಿತು. ಎರಡನೆಯ ಮಹಾಯುದ್ಧದ ನಂತರ ಎಲ್ಲಾ ದೇಶಗಳು ಸಾಮ್ರಾಜ್ಯಶಾಹಿಯ ಬಂಧನದಿಂದ ಸ್ವಾತಂತ್ರ್ಯಗೊಳ್ಳುತ್ತಿದ್ದಂತೆ ಇತರ ಕೆಲವು ಪ್ರಗತಿಪರ ನಾಯಕರು – ಉದಾಹರಣೆಗೆ ಇಂಡೋನೇಷಿಯ ಹಾಗೂ ಘಾನ ದೇಶಗಳ ನಾಯಕರು – ಪ್ರಯತ್ನಿಸಿದರು. ಆದರೆ ಅಂತಹ ಪ್ರಯತ್ನಗಳು ಯಶಸ್ವಿಯಾಗಲಿಲ್ಲ. ದಂಗೆ, ಗೊಂದಲ ಅಥವಾ ಘರ್ಷಣೆಗಳು ನಡೆದು ಒಂದಾದ ಮೇಲೆ ಒಂದು ದೇಶದಲ್ಲಿ ಪ್ರಜಾಸತ್ತೆ ನಾಶವಾಗುತ್ತಾ ಹೋಯಿತು. ಅಲ್ಲೆಲ್ಲಾ ಮಿಲಿಟರಿ ಆಡಳಿತ ಅಥವಾ ಧಾರ್ಮಿಕ ಘರ್ಷಣೆಗಳು ಪ್ರಾರಂಭವಾದವು. ಭಾರತ ತನ್ನ ಉದಾರವಾದೀ ಸಂವಿಧಾನ, ಚುನಾವಣೆ ಹಾಗೂ ಬಲವಾದ ಸುಪ್ರಿಂ ಕೋರ್ಟು ಇವುಗಳಿಂದಾಗಿ ಅದಕ್ಕೊಂದು ಅಪವಾದವಾಗಿ ಉಳಿದುಕೊಂಡಿತು.

ಸ್ವಾತಂತ್ರ್ಯ ಬಂದ ಪ್ರಾರಂಭದ ದಶಕಗಳಲ್ಲಿ ಇಂಡಿಯಾದಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗೇ ಸಾಗಿತ್ತು. ಭಾರತ ಪ್ರಾರಂಭದಲ್ಲಿ ಪ್ರಗತಿಪರ ರಾಜಕೀಯದಲ್ಲಿ ತೊಡಗಿಸಿಕೊಂಡಿತ್ತು. ಅದು ಸರಿಯಾದ ಆಯ್ಕೆಯೇ ಎನ್ನುವುದನ್ನು ಕುರಿತಂತೆ ಚರ್ಚೆ ಸಾಧ್ಯ (ಅದು ಸರಿಯಾದ ಆಯ್ಕೆ ಎಂದು ನನಗೆ ತೋರುತ್ತದೆ). ಆದರೆ ಆ ಆಯ್ಕೆಯನ್ನು ಮಾಡಿಕೊಂಡ ಮೇಲೆ ಅದರಿಂದ ದಕ್ಕಿದ ರಾಜಕೀಯ ಬಂಡವಾಳವನ್ನು, ಅದರಲ್ಲೂ ವಿಶೇಷವಾಗಿ 1990ರ ಮೊದಲ ಭಾಗದಲ್ಲಿ ಮತ್ತು 2003ರಲ್ಲಿ ಅದ್ಭುತವಾಗಿ ಯಶಸ್ಸು ಸಾಧಿಸಿದ ಮೇಲೆ ಈಗ ಕಳೆದುಕೊಳ್ಳುವುದು ಅಪರಾಧವಾಗುತ್ತದೆ. ಭಾರತದ ಆರ್ಥಿಕತೆಯ ಬುನಾದಿ ಇನ್ನೂ ಬಲವಾಗಿಯೇ ಇದೆ.

ನಮ್ಮಲ್ಲಿ ಉದಾರವಾದೀ ಪ್ರವೃತ್ತಿಯು ನಾಶವಾಗಿದ್ದರಿಂದ ವಿಶ್ವಾಸ ಕುಸಿದಿದೆ. ಆರ್ಥಿಕ ಹಿಂಜರಿಕೆ ಉಂಟಾಗಿದೆ. ಭಾರತ ಮತ್ತೆ ತನ್ನ ಪ್ರಗತಿಪರ ಪರಂಪರೆಯನ್ನು ಕಂಡುಕೊಳ್ಳಬೇಕಾಗಿದೆ. ಅದನ್ನು ಆಧರಿಸಿ ನಮ್ಮ ಆರ್ಥಿಕತೆಯನ್ನು ಕಟ್ಟಬೇಕಾಗಿದೆ. ಹಾಗೆ ಮಾಡುವುದರಿಂದ ನಮ್ಮ ಆರ್ಥಿಕತೆಯನ್ನು ಮತ್ತೆ ಬೆಳೆಸಬಹುದು.

(ಕೌಶಿಕ್ ಬಸು ಅವರು ಕಾರ್ನೆಲ್ ವಿಶ್ವವಿದ್ಯಾನಿಲಯದಲ್ಲಿ ಇಂಟರ್ ನ್ಯಾಷನಲ್ ಸ್ಟಡೀಸ್ ಹಾಗು ಎಕಾನಮಿಕ್ಸ್ ಪ್ರಾಧ್ಯಾಪಕರು. 2009ರಿಂದ 2012ವರೆಗೆ ಭಾರತ ಸರ್ಕಾರದ ಪ್ರಮುಖ ಸಲಹೆಗಾರರಾಗಿದ್ದರು. 2012ರಿಂದ 2016ರವರೆಗೆ ಜಾಗತಿಕ ಬ್ಯಾಂಕಿನ ಪ್ರಮುಖ ಅರ್ಥಶಾಸ್ತ್ರಜ್ಞರಾಗಿದ್ದರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...