Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...