Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...