Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....