Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...