Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...