Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...