Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...