Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...