Homeಮುಖಪುಟಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

- Advertisement -
- Advertisement -

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾನುವಾರ (ಫೆ.15) ಪೋಸ್ಟ್ ಹಾಕಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

ಡ್ರೈ ಡಿಸ್ಟಿಲರ್ಸ್ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರ ಅರ್ಥವೇನು? ಭಾರತೀಯ ಜಾನುವಾರುಗಳಿಗೆ ಅಮೆರಿಕದ ಮೆಕ್ಕೆ ಜೋಳದಿಂದ ತಯಾರಿಸಿದ ಡಿಸ್ಟಿಲರ್‌ಗಳ ಧಾನ್ಯಗಳನ್ನು ನೀಡಲಾಗುತ್ತದೆಯೇ? ಹೀಗೆ ಮಾಡುವುದರಿಂದ ನಮ್ಮ ಹಾಲಿನ ಉತ್ಪನ್ನಗಳು ಅಮೆರಿಕದ ಕೃಷಿ ಉದ್ಯಮದ ಮೇಲೆ ಅವಲಂಬಿತವಾಗುವಂತೆ ಮಾಡುವುದಿಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತವು ಅಮೆರಿಕದಿಂದ ಸೋಯಾ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿದರೆ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ದೇಶದಾದ್ಯಂತದ ಸೋಯಾ ಬೆಳೆಯುವ ರೈತರ ಮೇಲೆ ನೇರ ಪರಿಣಾಮ ಬೀರಲಿದೆ. ಮಾತ್ರವಲ್ಲ, ತೀವ್ರ ಬೆಲೆ ನಷ್ಟ ಉಂಟಾಗಲಿದೆ. ಇದನ್ನು ಭಾರತದ ರೈತರು ಹೇಗೆ ತಡೆದುಕೊಳ್ಳುತ್ತಾರೆ? ಎಂದು ಕೇಳಿದ್ದಾರೆ.

ಹೆಚ್ಚುವರಿ ಪದಾರ್ಥಗಳು ಎಂದರೆ ಏನು? ಅದು ಏನನ್ನು ಒಳಗೊಂಡಿದೆ? ಇದರಿಂದ ಮುಂದಿನ ದಿನಗಳಲ್ಲಿ ಅಮೆರಿಕದ ದ್ವಿದಳ ಧಾನ್ಯಗಳು ಹಾಗೂ ಇತರೆ ಬೆಳೆಗಳ ಆಮದಿಗೆ ಅಡಿಪಾಯ ಹಾಕುವುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ವ್ಯಾಪಾರೇತರ ಅಡೆತಡೆಗಳನ್ನು ತೆಗೆದುಹಾಕುವುದರ ಅರ್ಥವೇನು? ಮುಂದಿನ ದಿನಗಳಲ್ಲಿ ಮಾರ್ಪಡಿಸಿದ ತಳಿಗಳ ಮೇಲಿನ ತಮ್ಮ ನಿಲುವನ್ನು ಸಡಿಲಗೊಳಿಸಿ, ಸಂಗ್ರಹಣೆಯನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಮತ್ತು ಬೋನಸ್‌ ಅನ್ನು ಕಡಿಮೆ ಮಾಡಲು ಭಾರತದ ರೈತರ ಮೇಲೆ ಒತ್ತಡ ಹೇರಲಾಗುವುದಿಲ್ಲವೇ? ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ಅಮೆರಿಕ ಹಾಗೂ ಭಾರತ ನಡುವಿನ ಈ ವ್ಯಾಪಾರ ಒಮ್ಮೆ ಆರಂಭವಾದರೆ, ಇದು ಪ್ರತೀ ವರ್ಷವೂ ದೊಡ್ಡದಾಗುತ್ತದೆ. ಅದನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಉಭಯ ದೇಶಗಳ ನಡುವೆ ಈ ವ್ಯಾಪಾರ ಒಪ್ಪಂದ ಆರಂಭವಾದೆ, ಮುಂದಿನ ದಿನಗಳಲ್ಲಿ ಇದನ್ನು ತಡೆಯಲು ಸಾಧ್ಯವಾಗುತ್ತದೆಯೇ? ಇದು ವರ್ಷದಿಂದ ವರ್ಷಕ್ಕೆ ಹಚ್ಚಾಗುತ್ತಾ ಹೋಗುತ್ತದೆ. ಈ ಬಗ್ಗೆ ರೈತರು ಸ್ಪಷ್ಟತೆ ಪಡೆಯಬೇಕು ಎಂದು ಹೇಳಿದ್ದಾರೆ.

ಇದು ಕೇವಲ ಇಂದಿನ ಸಮಸ್ಯೆಯಲ್ಲ, ಭವಿಷ್ಯದ ದೃಷ್ಟಿಯಿಂದ ಗಂಭೀರವಾಗಿ ಯೋಚಿಸಬೇಕಾಗಿದೆ. ಭಾರತದ ಕೃಷಿ ಉದ್ಯಮದ ಮೇಲೆ ದೀರ್ಘಕಾಲದ ಹಿಡಿತ ಸಾಧಿಸಲು ಇನ್ನೊಂದು ದೇಶಕ್ಕೆ ಅವಕಾಶ ನೀಡುತ್ತಿದ್ದೇವೆಯೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...