Homeಅಂತರಾಷ್ಟ್ರೀಯಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

"ಎರಡೂ ರಾಷ್ಟ್ರದ ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ಭೇಟಿಯಾದಾಗ ಭಾರತದೊಂದಿಗೆ ಈ ಕಳವಳವನ್ನು ಹಂಚಿಕೊಳ್ಳಲಾಗುವುದು" - ಬ್ರಿಟನ್ ಸರ್ಕಾರ

- Advertisement -
- Advertisement -

ಭಾರತದಲ್ಲಿ “ರೈತರ ಸುರಕ್ಷತೆ” ಮತ್ತು “ಪತ್ರಿಕಾ ಸ್ವಾತಂತ್ರ‍್ಯ” ಕುರಿತು ಸೋಮವಾರ ಬ್ರಿಟನ್ ಸಂಸತ್ತಿನಲ್ಲಿ ನಡೆದ ಚರ್ಚೆಗೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಸಮತೋಲಿತ ಚರ್ಚೆಯ ಬದಲು, ದೃಢೀಕರಣ ಅಥವಾ ಸತ್ಯಗಳಿಲ್ಲದೆ ಸುಳ್ಳು ಪ್ರತಿಪಾದನೆಗಳನ್ನು ಮಾಡಲಾಗಿದೆಯೆಂದು ನಾವು ತೀವ್ರವಾಗಿ ವಿಷಾದಿಸುತ್ತೇವೆ, ವಿಶ್ವದ ಅತಿದೊಡ್ಡ ಕಾರ್ಯನಿರತ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳನ್ನು ಅನುಮಾನಿಸಲಾಗಿದೆ’ ಎಂದು ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ.

“ಬ್ರಿಟಿಷ್ ಮಾಧ್ಯಮಗಳು ಸೇರಿದಂತೆ ವಿದೇಶಿ ಮಾಧ್ಯಮಗಳು ಭಾರತದಲ್ಲಿವೆ ಮತ್ತು ಚರ್ಚೆಯಲ್ಲಿರುವ ಘಟನೆಗಳಿಗೆ ಮೊದಲ ಬಾರಿಗೆ ಸಾಕ್ಷಿಯಾಗಿವೆ. ಭಾರತದಲ್ಲಿ ಮಾಧ್ಯಮಗಳ ಸ್ವಾತಂತ್ರ‍್ಯದ ಕೊರತೆಯ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಹೈಮಿಷನ್ ಹೇಳಿದೆ.

ಸೋಮವಾರ, ಬ್ರಿಟಿಷ್ ಸಂಸತ್ತು ಭಾರತದಲ್ಲಿ “ರೈತರ ಸುರಕ್ಷತೆ” ಮತ್ತು “ಪತ್ರಿಕಾ ಸ್ವಾತಂತ್ರ‍್ಯ” ಕುರಿತು ಚರ್ಚಿಸಲು 90 ನಿಮಿಷಗಳನ್ನು ಮೀಸಲಿಟ್ಟಿತ್ತು. ರೈತರ ಪ್ರತಿಭಟನೆಗಳಿಗೆ ಭಾರತೀಯ ಸರ್ಕಾರದ ಪ್ರತಿಕ್ರಿಯೆಯ ಬಗ್ಗೆ ಲೇಬರ್ ಪಕ್ಷದ ಹಲವಾರು ಸಂಸದರು, ಲಿಬರಲ್ ಪ್ರಜಾಪ್ರಭುತ್ವವಾದಿಗಳು ಮತ್ತು ಸ್ಕಾಟಿಷ್ ರಾಷ್ಟ್ರೀಯ ಪಕ್ಷದವರು ಕಳವಳ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಯುಕೆ ಸರ್ಕಾರ, “ಎರಡೂ ರಾಷ್ಟ್ರದ ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ಭೇಟಿಯಾದಾಗ ಭಾರತದೊಂದಿಗೆ ಈ ಕಳವಳವನ್ನು ಹಂಚಿಕೊಳ್ಳಲಾಗುವುದು” ಎಂದು ಹೇಳಿದೆ.
ಭಾರತೀಯ ಮೂಲದ ಮೈಡೆನ್‌ಹೆಡ್ ಲಿಬರಲ್ ಡೆಮೋಕ್ರಾಟ್ ನಾಯಕ ಗುರ್ಚ್ ಸಿಂಗ್ ಸಲ್ಲಿಸಿದ ಮನವಿಗೆ ಈ ಚರ್ಚೆಯು ಪ್ರತಿಕ್ರಿಯೆಯಾಗಿತ್ತು. ಈ ಪೆಟಿಷನ್‌ಗೆ ವಾರಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಯುಕೆ ನಿವಾಸಿಗಳು ಸಹಿ ಮಾಡಿದ್ದಾರೆ.

ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಮಾರ್ಟಿನ್ ಡೇ ಚರ್ಚೆ ಆರಂಭಿಸುತ್ತ, “ಕೃಷಿ ಸುಧಾರಣೆಗಳು ಭಾರತ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ ವಿಷಯವೆಂದು ಯುಕೆ ಸರ್ಕಾರ ಈಗಾಗಲೇ ಹೇಳಿದೆ. ಆದ್ದರಿಂದ ನಾವು ಈಗ ಸುಧಾರಣೆಗಳ ಬಗ್ಗೆ ಚರ್ಚಿಸುತ್ತಿಲ್ಲ. ಪ್ರತಿಭಟನಾಕಾರರ ಸುರಕ್ಷತೆಗಾಗಿ ನಾವು ಚರ್ಚಿಸುತ್ತಿದ್ದೇವೆ. ಜಲಫಿರಂಗಿ, ಅಶ್ರುವಾಯು ಬಳಕೆ, ಇಂಟರ್‌ನೆಟ್ ಸ್ಥಗಿತ ಮತ್ತು ಪೊಲೀಸರು ಮತ್ತು ರೈತರ ನಡುವೆ ಪದೇ ಪದೇ ಘರ್ಷಣೆ ಉಂಟಾಗುವುದು ಕಳವಳಕಾರಿ ವಿಷಯವಾಗಿದೆ. ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ ಎಂದರು.

ಭಾರತದ ರೈತರು ಮತ್ತು ಪತ್ರಕರ್ತರ ಸುರಕ್ಷತೆಯ ಬಗ್ಗೆ ಹಲವಾರು ವಿರೋಧ ಪಕ್ಷದ ಸಂಸದರು ಕಳವಳ ವ್ಯಕ್ತಪಡಿಸಿದರು. ಬ್ರಿಟನ್ನಿನ ಏಷ್ಯಾ ರಾಜ್ಯ ಸಚಿವ ನಿಗೆಲ್ ಆಡಮ್ಸ್, “ಭಾರತದೊಂದಿಗಿನ ನಿಕಟ ಸಂಬಂಧವು ರಾಷ್ಟ್ರವನ್ನು ಕಳವಳ ವ್ಯಕ್ತಪಡಿಸುವುದಕ್ಕೆ ಅಡ್ಡಿ ಮಾಡುವುದಿಲ್ಲ’ ಎಂದು ಹೇಳಿದರು.

ಕಾರ್ಮಿಕ ಮುಖಂಡ ಜೆರೆಮಿ ಕಾರ್ಬಿನ್, “ಅಭೂತಪೂರ್ವ ಪ್ರತಿಭಟನೆಗಳಿಗೆ ದೊಡ್ಡ ಸಂಖ್ಯೆಯಲ್ಲಿ ಜನ ಏಕೆ ಸೇರುತ್ತಿದ್ದಾರೆ ಎಂಬುದರ ಬಗ್ಗೆ ಯೋಚಿಸುವಂತೆ ಮಾಡಬೇಕು. ಪತ್ರಕರ್ತರ ಬಂಧನವು ಗಂಭೀರ ವಿಷಯವಾಗಿದೆ” ಎಂದು ಹೇಳಿದರು.

ಕನ್ಸರ್ವೇಟಿವ್ ಸಂಸದೆ ಥೆರೆಸಾ ವಿಲಿಯರ್ಸ್, ಭಾರತ ಸರ್ಕಾರದ ಪ್ರತಿಕ್ರಿಯೆಗೆ ಬೆಂಬಲವನ್ನು ಹಂಚಿಕೊಂಡರು. “ಸಾಮೂಹಿಕ ಪ್ರತಿಭಟನೆಗಳು ನಡೆದಾಗ ಇಲ್ಲಿಯೂ ಸಹ ಪೊಲೀಸರ ವಿರುದ್ಧ ನಾವು ದೂರುಗಳನ್ನು ಸ್ವೀಕರಿಸುತ್ತೇವೆ. ಇದರರ್ಥ ಬ್ರಿಟನ್ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದಲ್ಲ” ಎಂದರು.

ತನ್ನ ಹೇಳಿಕೆಯಲ್ಲಿ, ಭಾರತೀಯ ಹೈಕಮಿಷನ್, “ಭಾರತದ ಹೈಕಮಿಷನ್ ಸಾಮಾನ್ಯವಾಗಿ ಗೌರವಾನ್ವಿತ ಸಂಸತ್ ಸದಸ್ಯರ ಒಂದು ಸಣ್ಣ ಗುಂಪು ಸೀಮಿತ ಕೋರಂನಲ್ಲಿ ನಡೆಸುವ ಆಂತರಿಕ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೂ, ಯಾರಾದರೂ ಭಾರತದ ಮೇಲೆ ಆರೋಪಗಳನ್ನು ಮಾಡಿದಾಗ, ಅದನ್ನು ಸರಿಪಡಿಸುವ, ಸತ್ಯವನ್ನು ತೋರಿಸುವ ಹಕ್ಕು ಹೈಕಮಿಷನ್‌ಗೆ ಇದೆ’ ಎಂದು ಪ್ರತಿಪಾದಿಸಿದೆ.

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಜನವರಿಯಲ್ಲಿ ಭಾರತಕ್ಕೆ ಬರಬೇಕಿತ್ತು. ಯುಕೆಯಲ್ಲಿನ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಿದ ನಂತರ ಅವರು ಈ ಪ್ರವಾಸವನ್ನು ಮುಂದೂಡಬೇಕಾಯಿತು.
ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ನವೆಂಬರ್‌ನಲ್ಲಿ ದೆಹಲಿಯ ಗಡಿಯ ಬಳಿ ಪ್ರಾರಂಭವಾಯಿತು. ಕಳೆದ ತಿಂಗಳು, ಪಾಪ್ ತಾರೆ ರಿಹಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್, ಯುಎಸ್ ಮತ್ತು ಯುಕೆ ಸಂಸದರು ರೈತ ಪ್ರತಿಭಟನೆಗಳ ಪರ ನಿಂತ ನಂತರ ಪ್ರತಿಭಟನೆಗೆ ಅಪಾರ ಜಾಗತಿಕ ಬೆಂಬಲ ವ್ಯಕ್ತವಾಗಿತ್ತು.

“ಈ ಪ್ರತಿಭಟನೆಗಳನ್ನು ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಹಿನ್ನೆಲೆಯಲ್ಲಿ ನೋಡಬೇಕು ಎಂದು ನಾವು ಒತ್ತಿ ಹೇಳಲು ಬಯಸುತ್ತೇವೆ ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮತ್ತು ಸಂಬಂಧಪಟ್ಟ ರೈತ ಗುಂಪುಗಳ ಪ್ರಯತ್ನಗಳು ಜಾರಿಯಲ್ಲಿವೆ ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತ್ತು.


ಇದನ್ನೂ ಓದಿ: ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....