Homeಅಂತರಾಷ್ಟ್ರೀಯಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

"ಎರಡೂ ರಾಷ್ಟ್ರದ ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ಭೇಟಿಯಾದಾಗ ಭಾರತದೊಂದಿಗೆ ಈ ಕಳವಳವನ್ನು ಹಂಚಿಕೊಳ್ಳಲಾಗುವುದು" - ಬ್ರಿಟನ್ ಸರ್ಕಾರ

- Advertisement -
- Advertisement -

ಭಾರತದಲ್ಲಿ “ರೈತರ ಸುರಕ್ಷತೆ” ಮತ್ತು “ಪತ್ರಿಕಾ ಸ್ವಾತಂತ್ರ‍್ಯ” ಕುರಿತು ಸೋಮವಾರ ಬ್ರಿಟನ್ ಸಂಸತ್ತಿನಲ್ಲಿ ನಡೆದ ಚರ್ಚೆಗೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಸಮತೋಲಿತ ಚರ್ಚೆಯ ಬದಲು, ದೃಢೀಕರಣ ಅಥವಾ ಸತ್ಯಗಳಿಲ್ಲದೆ ಸುಳ್ಳು ಪ್ರತಿಪಾದನೆಗಳನ್ನು ಮಾಡಲಾಗಿದೆಯೆಂದು ನಾವು ತೀವ್ರವಾಗಿ ವಿಷಾದಿಸುತ್ತೇವೆ, ವಿಶ್ವದ ಅತಿದೊಡ್ಡ ಕಾರ್ಯನಿರತ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳನ್ನು ಅನುಮಾನಿಸಲಾಗಿದೆ’ ಎಂದು ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ.

“ಬ್ರಿಟಿಷ್ ಮಾಧ್ಯಮಗಳು ಸೇರಿದಂತೆ ವಿದೇಶಿ ಮಾಧ್ಯಮಗಳು ಭಾರತದಲ್ಲಿವೆ ಮತ್ತು ಚರ್ಚೆಯಲ್ಲಿರುವ ಘಟನೆಗಳಿಗೆ ಮೊದಲ ಬಾರಿಗೆ ಸಾಕ್ಷಿಯಾಗಿವೆ. ಭಾರತದಲ್ಲಿ ಮಾಧ್ಯಮಗಳ ಸ್ವಾತಂತ್ರ‍್ಯದ ಕೊರತೆಯ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಹೈಮಿಷನ್ ಹೇಳಿದೆ.

ಸೋಮವಾರ, ಬ್ರಿಟಿಷ್ ಸಂಸತ್ತು ಭಾರತದಲ್ಲಿ “ರೈತರ ಸುರಕ್ಷತೆ” ಮತ್ತು “ಪತ್ರಿಕಾ ಸ್ವಾತಂತ್ರ‍್ಯ” ಕುರಿತು ಚರ್ಚಿಸಲು 90 ನಿಮಿಷಗಳನ್ನು ಮೀಸಲಿಟ್ಟಿತ್ತು. ರೈತರ ಪ್ರತಿಭಟನೆಗಳಿಗೆ ಭಾರತೀಯ ಸರ್ಕಾರದ ಪ್ರತಿಕ್ರಿಯೆಯ ಬಗ್ಗೆ ಲೇಬರ್ ಪಕ್ಷದ ಹಲವಾರು ಸಂಸದರು, ಲಿಬರಲ್ ಪ್ರಜಾಪ್ರಭುತ್ವವಾದಿಗಳು ಮತ್ತು ಸ್ಕಾಟಿಷ್ ರಾಷ್ಟ್ರೀಯ ಪಕ್ಷದವರು ಕಳವಳ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಯುಕೆ ಸರ್ಕಾರ, “ಎರಡೂ ರಾಷ್ಟ್ರದ ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ಭೇಟಿಯಾದಾಗ ಭಾರತದೊಂದಿಗೆ ಈ ಕಳವಳವನ್ನು ಹಂಚಿಕೊಳ್ಳಲಾಗುವುದು” ಎಂದು ಹೇಳಿದೆ.
ಭಾರತೀಯ ಮೂಲದ ಮೈಡೆನ್‌ಹೆಡ್ ಲಿಬರಲ್ ಡೆಮೋಕ್ರಾಟ್ ನಾಯಕ ಗುರ್ಚ್ ಸಿಂಗ್ ಸಲ್ಲಿಸಿದ ಮನವಿಗೆ ಈ ಚರ್ಚೆಯು ಪ್ರತಿಕ್ರಿಯೆಯಾಗಿತ್ತು. ಈ ಪೆಟಿಷನ್‌ಗೆ ವಾರಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಯುಕೆ ನಿವಾಸಿಗಳು ಸಹಿ ಮಾಡಿದ್ದಾರೆ.

ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಮಾರ್ಟಿನ್ ಡೇ ಚರ್ಚೆ ಆರಂಭಿಸುತ್ತ, “ಕೃಷಿ ಸುಧಾರಣೆಗಳು ಭಾರತ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ ವಿಷಯವೆಂದು ಯುಕೆ ಸರ್ಕಾರ ಈಗಾಗಲೇ ಹೇಳಿದೆ. ಆದ್ದರಿಂದ ನಾವು ಈಗ ಸುಧಾರಣೆಗಳ ಬಗ್ಗೆ ಚರ್ಚಿಸುತ್ತಿಲ್ಲ. ಪ್ರತಿಭಟನಾಕಾರರ ಸುರಕ್ಷತೆಗಾಗಿ ನಾವು ಚರ್ಚಿಸುತ್ತಿದ್ದೇವೆ. ಜಲಫಿರಂಗಿ, ಅಶ್ರುವಾಯು ಬಳಕೆ, ಇಂಟರ್‌ನೆಟ್ ಸ್ಥಗಿತ ಮತ್ತು ಪೊಲೀಸರು ಮತ್ತು ರೈತರ ನಡುವೆ ಪದೇ ಪದೇ ಘರ್ಷಣೆ ಉಂಟಾಗುವುದು ಕಳವಳಕಾರಿ ವಿಷಯವಾಗಿದೆ. ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ ಎಂದರು.

ಭಾರತದ ರೈತರು ಮತ್ತು ಪತ್ರಕರ್ತರ ಸುರಕ್ಷತೆಯ ಬಗ್ಗೆ ಹಲವಾರು ವಿರೋಧ ಪಕ್ಷದ ಸಂಸದರು ಕಳವಳ ವ್ಯಕ್ತಪಡಿಸಿದರು. ಬ್ರಿಟನ್ನಿನ ಏಷ್ಯಾ ರಾಜ್ಯ ಸಚಿವ ನಿಗೆಲ್ ಆಡಮ್ಸ್, “ಭಾರತದೊಂದಿಗಿನ ನಿಕಟ ಸಂಬಂಧವು ರಾಷ್ಟ್ರವನ್ನು ಕಳವಳ ವ್ಯಕ್ತಪಡಿಸುವುದಕ್ಕೆ ಅಡ್ಡಿ ಮಾಡುವುದಿಲ್ಲ’ ಎಂದು ಹೇಳಿದರು.

ಕಾರ್ಮಿಕ ಮುಖಂಡ ಜೆರೆಮಿ ಕಾರ್ಬಿನ್, “ಅಭೂತಪೂರ್ವ ಪ್ರತಿಭಟನೆಗಳಿಗೆ ದೊಡ್ಡ ಸಂಖ್ಯೆಯಲ್ಲಿ ಜನ ಏಕೆ ಸೇರುತ್ತಿದ್ದಾರೆ ಎಂಬುದರ ಬಗ್ಗೆ ಯೋಚಿಸುವಂತೆ ಮಾಡಬೇಕು. ಪತ್ರಕರ್ತರ ಬಂಧನವು ಗಂಭೀರ ವಿಷಯವಾಗಿದೆ” ಎಂದು ಹೇಳಿದರು.

ಕನ್ಸರ್ವೇಟಿವ್ ಸಂಸದೆ ಥೆರೆಸಾ ವಿಲಿಯರ್ಸ್, ಭಾರತ ಸರ್ಕಾರದ ಪ್ರತಿಕ್ರಿಯೆಗೆ ಬೆಂಬಲವನ್ನು ಹಂಚಿಕೊಂಡರು. “ಸಾಮೂಹಿಕ ಪ್ರತಿಭಟನೆಗಳು ನಡೆದಾಗ ಇಲ್ಲಿಯೂ ಸಹ ಪೊಲೀಸರ ವಿರುದ್ಧ ನಾವು ದೂರುಗಳನ್ನು ಸ್ವೀಕರಿಸುತ್ತೇವೆ. ಇದರರ್ಥ ಬ್ರಿಟನ್ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದಲ್ಲ” ಎಂದರು.

ತನ್ನ ಹೇಳಿಕೆಯಲ್ಲಿ, ಭಾರತೀಯ ಹೈಕಮಿಷನ್, “ಭಾರತದ ಹೈಕಮಿಷನ್ ಸಾಮಾನ್ಯವಾಗಿ ಗೌರವಾನ್ವಿತ ಸಂಸತ್ ಸದಸ್ಯರ ಒಂದು ಸಣ್ಣ ಗುಂಪು ಸೀಮಿತ ಕೋರಂನಲ್ಲಿ ನಡೆಸುವ ಆಂತರಿಕ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೂ, ಯಾರಾದರೂ ಭಾರತದ ಮೇಲೆ ಆರೋಪಗಳನ್ನು ಮಾಡಿದಾಗ, ಅದನ್ನು ಸರಿಪಡಿಸುವ, ಸತ್ಯವನ್ನು ತೋರಿಸುವ ಹಕ್ಕು ಹೈಕಮಿಷನ್‌ಗೆ ಇದೆ’ ಎಂದು ಪ್ರತಿಪಾದಿಸಿದೆ.

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಜನವರಿಯಲ್ಲಿ ಭಾರತಕ್ಕೆ ಬರಬೇಕಿತ್ತು. ಯುಕೆಯಲ್ಲಿನ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಿದ ನಂತರ ಅವರು ಈ ಪ್ರವಾಸವನ್ನು ಮುಂದೂಡಬೇಕಾಯಿತು.
ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ನವೆಂಬರ್‌ನಲ್ಲಿ ದೆಹಲಿಯ ಗಡಿಯ ಬಳಿ ಪ್ರಾರಂಭವಾಯಿತು. ಕಳೆದ ತಿಂಗಳು, ಪಾಪ್ ತಾರೆ ರಿಹಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್, ಯುಎಸ್ ಮತ್ತು ಯುಕೆ ಸಂಸದರು ರೈತ ಪ್ರತಿಭಟನೆಗಳ ಪರ ನಿಂತ ನಂತರ ಪ್ರತಿಭಟನೆಗೆ ಅಪಾರ ಜಾಗತಿಕ ಬೆಂಬಲ ವ್ಯಕ್ತವಾಗಿತ್ತು.

“ಈ ಪ್ರತಿಭಟನೆಗಳನ್ನು ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಹಿನ್ನೆಲೆಯಲ್ಲಿ ನೋಡಬೇಕು ಎಂದು ನಾವು ಒತ್ತಿ ಹೇಳಲು ಬಯಸುತ್ತೇವೆ ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮತ್ತು ಸಂಬಂಧಪಟ್ಟ ರೈತ ಗುಂಪುಗಳ ಪ್ರಯತ್ನಗಳು ಜಾರಿಯಲ್ಲಿವೆ ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತ್ತು.


ಇದನ್ನೂ ಓದಿ: ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...