Homeಅಂತರಾಷ್ಟ್ರೀಯಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

"ಎರಡೂ ರಾಷ್ಟ್ರದ ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ಭೇಟಿಯಾದಾಗ ಭಾರತದೊಂದಿಗೆ ಈ ಕಳವಳವನ್ನು ಹಂಚಿಕೊಳ್ಳಲಾಗುವುದು" - ಬ್ರಿಟನ್ ಸರ್ಕಾರ

- Advertisement -
- Advertisement -

ಭಾರತದಲ್ಲಿ “ರೈತರ ಸುರಕ್ಷತೆ” ಮತ್ತು “ಪತ್ರಿಕಾ ಸ್ವಾತಂತ್ರ‍್ಯ” ಕುರಿತು ಸೋಮವಾರ ಬ್ರಿಟನ್ ಸಂಸತ್ತಿನಲ್ಲಿ ನಡೆದ ಚರ್ಚೆಗೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಸಮತೋಲಿತ ಚರ್ಚೆಯ ಬದಲು, ದೃಢೀಕರಣ ಅಥವಾ ಸತ್ಯಗಳಿಲ್ಲದೆ ಸುಳ್ಳು ಪ್ರತಿಪಾದನೆಗಳನ್ನು ಮಾಡಲಾಗಿದೆಯೆಂದು ನಾವು ತೀವ್ರವಾಗಿ ವಿಷಾದಿಸುತ್ತೇವೆ, ವಿಶ್ವದ ಅತಿದೊಡ್ಡ ಕಾರ್ಯನಿರತ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳನ್ನು ಅನುಮಾನಿಸಲಾಗಿದೆ’ ಎಂದು ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ.

“ಬ್ರಿಟಿಷ್ ಮಾಧ್ಯಮಗಳು ಸೇರಿದಂತೆ ವಿದೇಶಿ ಮಾಧ್ಯಮಗಳು ಭಾರತದಲ್ಲಿವೆ ಮತ್ತು ಚರ್ಚೆಯಲ್ಲಿರುವ ಘಟನೆಗಳಿಗೆ ಮೊದಲ ಬಾರಿಗೆ ಸಾಕ್ಷಿಯಾಗಿವೆ. ಭಾರತದಲ್ಲಿ ಮಾಧ್ಯಮಗಳ ಸ್ವಾತಂತ್ರ‍್ಯದ ಕೊರತೆಯ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಹೈಮಿಷನ್ ಹೇಳಿದೆ.

ಸೋಮವಾರ, ಬ್ರಿಟಿಷ್ ಸಂಸತ್ತು ಭಾರತದಲ್ಲಿ “ರೈತರ ಸುರಕ್ಷತೆ” ಮತ್ತು “ಪತ್ರಿಕಾ ಸ್ವಾತಂತ್ರ‍್ಯ” ಕುರಿತು ಚರ್ಚಿಸಲು 90 ನಿಮಿಷಗಳನ್ನು ಮೀಸಲಿಟ್ಟಿತ್ತು. ರೈತರ ಪ್ರತಿಭಟನೆಗಳಿಗೆ ಭಾರತೀಯ ಸರ್ಕಾರದ ಪ್ರತಿಕ್ರಿಯೆಯ ಬಗ್ಗೆ ಲೇಬರ್ ಪಕ್ಷದ ಹಲವಾರು ಸಂಸದರು, ಲಿಬರಲ್ ಪ್ರಜಾಪ್ರಭುತ್ವವಾದಿಗಳು ಮತ್ತು ಸ್ಕಾಟಿಷ್ ರಾಷ್ಟ್ರೀಯ ಪಕ್ಷದವರು ಕಳವಳ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಯುಕೆ ಸರ್ಕಾರ, “ಎರಡೂ ರಾಷ್ಟ್ರದ ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ಭೇಟಿಯಾದಾಗ ಭಾರತದೊಂದಿಗೆ ಈ ಕಳವಳವನ್ನು ಹಂಚಿಕೊಳ್ಳಲಾಗುವುದು” ಎಂದು ಹೇಳಿದೆ.
ಭಾರತೀಯ ಮೂಲದ ಮೈಡೆನ್‌ಹೆಡ್ ಲಿಬರಲ್ ಡೆಮೋಕ್ರಾಟ್ ನಾಯಕ ಗುರ್ಚ್ ಸಿಂಗ್ ಸಲ್ಲಿಸಿದ ಮನವಿಗೆ ಈ ಚರ್ಚೆಯು ಪ್ರತಿಕ್ರಿಯೆಯಾಗಿತ್ತು. ಈ ಪೆಟಿಷನ್‌ಗೆ ವಾರಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಯುಕೆ ನಿವಾಸಿಗಳು ಸಹಿ ಮಾಡಿದ್ದಾರೆ.

ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಮಾರ್ಟಿನ್ ಡೇ ಚರ್ಚೆ ಆರಂಭಿಸುತ್ತ, “ಕೃಷಿ ಸುಧಾರಣೆಗಳು ಭಾರತ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ ವಿಷಯವೆಂದು ಯುಕೆ ಸರ್ಕಾರ ಈಗಾಗಲೇ ಹೇಳಿದೆ. ಆದ್ದರಿಂದ ನಾವು ಈಗ ಸುಧಾರಣೆಗಳ ಬಗ್ಗೆ ಚರ್ಚಿಸುತ್ತಿಲ್ಲ. ಪ್ರತಿಭಟನಾಕಾರರ ಸುರಕ್ಷತೆಗಾಗಿ ನಾವು ಚರ್ಚಿಸುತ್ತಿದ್ದೇವೆ. ಜಲಫಿರಂಗಿ, ಅಶ್ರುವಾಯು ಬಳಕೆ, ಇಂಟರ್‌ನೆಟ್ ಸ್ಥಗಿತ ಮತ್ತು ಪೊಲೀಸರು ಮತ್ತು ರೈತರ ನಡುವೆ ಪದೇ ಪದೇ ಘರ್ಷಣೆ ಉಂಟಾಗುವುದು ಕಳವಳಕಾರಿ ವಿಷಯವಾಗಿದೆ. ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ ಎಂದರು.

ಭಾರತದ ರೈತರು ಮತ್ತು ಪತ್ರಕರ್ತರ ಸುರಕ್ಷತೆಯ ಬಗ್ಗೆ ಹಲವಾರು ವಿರೋಧ ಪಕ್ಷದ ಸಂಸದರು ಕಳವಳ ವ್ಯಕ್ತಪಡಿಸಿದರು. ಬ್ರಿಟನ್ನಿನ ಏಷ್ಯಾ ರಾಜ್ಯ ಸಚಿವ ನಿಗೆಲ್ ಆಡಮ್ಸ್, “ಭಾರತದೊಂದಿಗಿನ ನಿಕಟ ಸಂಬಂಧವು ರಾಷ್ಟ್ರವನ್ನು ಕಳವಳ ವ್ಯಕ್ತಪಡಿಸುವುದಕ್ಕೆ ಅಡ್ಡಿ ಮಾಡುವುದಿಲ್ಲ’ ಎಂದು ಹೇಳಿದರು.

ಕಾರ್ಮಿಕ ಮುಖಂಡ ಜೆರೆಮಿ ಕಾರ್ಬಿನ್, “ಅಭೂತಪೂರ್ವ ಪ್ರತಿಭಟನೆಗಳಿಗೆ ದೊಡ್ಡ ಸಂಖ್ಯೆಯಲ್ಲಿ ಜನ ಏಕೆ ಸೇರುತ್ತಿದ್ದಾರೆ ಎಂಬುದರ ಬಗ್ಗೆ ಯೋಚಿಸುವಂತೆ ಮಾಡಬೇಕು. ಪತ್ರಕರ್ತರ ಬಂಧನವು ಗಂಭೀರ ವಿಷಯವಾಗಿದೆ” ಎಂದು ಹೇಳಿದರು.

ಕನ್ಸರ್ವೇಟಿವ್ ಸಂಸದೆ ಥೆರೆಸಾ ವಿಲಿಯರ್ಸ್, ಭಾರತ ಸರ್ಕಾರದ ಪ್ರತಿಕ್ರಿಯೆಗೆ ಬೆಂಬಲವನ್ನು ಹಂಚಿಕೊಂಡರು. “ಸಾಮೂಹಿಕ ಪ್ರತಿಭಟನೆಗಳು ನಡೆದಾಗ ಇಲ್ಲಿಯೂ ಸಹ ಪೊಲೀಸರ ವಿರುದ್ಧ ನಾವು ದೂರುಗಳನ್ನು ಸ್ವೀಕರಿಸುತ್ತೇವೆ. ಇದರರ್ಥ ಬ್ರಿಟನ್ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದಲ್ಲ” ಎಂದರು.

ತನ್ನ ಹೇಳಿಕೆಯಲ್ಲಿ, ಭಾರತೀಯ ಹೈಕಮಿಷನ್, “ಭಾರತದ ಹೈಕಮಿಷನ್ ಸಾಮಾನ್ಯವಾಗಿ ಗೌರವಾನ್ವಿತ ಸಂಸತ್ ಸದಸ್ಯರ ಒಂದು ಸಣ್ಣ ಗುಂಪು ಸೀಮಿತ ಕೋರಂನಲ್ಲಿ ನಡೆಸುವ ಆಂತರಿಕ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೂ, ಯಾರಾದರೂ ಭಾರತದ ಮೇಲೆ ಆರೋಪಗಳನ್ನು ಮಾಡಿದಾಗ, ಅದನ್ನು ಸರಿಪಡಿಸುವ, ಸತ್ಯವನ್ನು ತೋರಿಸುವ ಹಕ್ಕು ಹೈಕಮಿಷನ್‌ಗೆ ಇದೆ’ ಎಂದು ಪ್ರತಿಪಾದಿಸಿದೆ.

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಜನವರಿಯಲ್ಲಿ ಭಾರತಕ್ಕೆ ಬರಬೇಕಿತ್ತು. ಯುಕೆಯಲ್ಲಿನ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಿದ ನಂತರ ಅವರು ಈ ಪ್ರವಾಸವನ್ನು ಮುಂದೂಡಬೇಕಾಯಿತು.
ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ನವೆಂಬರ್‌ನಲ್ಲಿ ದೆಹಲಿಯ ಗಡಿಯ ಬಳಿ ಪ್ರಾರಂಭವಾಯಿತು. ಕಳೆದ ತಿಂಗಳು, ಪಾಪ್ ತಾರೆ ರಿಹಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್, ಯುಎಸ್ ಮತ್ತು ಯುಕೆ ಸಂಸದರು ರೈತ ಪ್ರತಿಭಟನೆಗಳ ಪರ ನಿಂತ ನಂತರ ಪ್ರತಿಭಟನೆಗೆ ಅಪಾರ ಜಾಗತಿಕ ಬೆಂಬಲ ವ್ಯಕ್ತವಾಗಿತ್ತು.

“ಈ ಪ್ರತಿಭಟನೆಗಳನ್ನು ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಹಿನ್ನೆಲೆಯಲ್ಲಿ ನೋಡಬೇಕು ಎಂದು ನಾವು ಒತ್ತಿ ಹೇಳಲು ಬಯಸುತ್ತೇವೆ ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮತ್ತು ಸಂಬಂಧಪಟ್ಟ ರೈತ ಗುಂಪುಗಳ ಪ್ರಯತ್ನಗಳು ಜಾರಿಯಲ್ಲಿವೆ ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತ್ತು.


ಇದನ್ನೂ ಓದಿ: ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...