Homeಅಂತರಾಷ್ಟ್ರೀಯಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

"ಎರಡೂ ರಾಷ್ಟ್ರದ ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ಭೇಟಿಯಾದಾಗ ಭಾರತದೊಂದಿಗೆ ಈ ಕಳವಳವನ್ನು ಹಂಚಿಕೊಳ್ಳಲಾಗುವುದು" - ಬ್ರಿಟನ್ ಸರ್ಕಾರ

- Advertisement -
- Advertisement -

ಭಾರತದಲ್ಲಿ “ರೈತರ ಸುರಕ್ಷತೆ” ಮತ್ತು “ಪತ್ರಿಕಾ ಸ್ವಾತಂತ್ರ‍್ಯ” ಕುರಿತು ಸೋಮವಾರ ಬ್ರಿಟನ್ ಸಂಸತ್ತಿನಲ್ಲಿ ನಡೆದ ಚರ್ಚೆಗೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಸಮತೋಲಿತ ಚರ್ಚೆಯ ಬದಲು, ದೃಢೀಕರಣ ಅಥವಾ ಸತ್ಯಗಳಿಲ್ಲದೆ ಸುಳ್ಳು ಪ್ರತಿಪಾದನೆಗಳನ್ನು ಮಾಡಲಾಗಿದೆಯೆಂದು ನಾವು ತೀವ್ರವಾಗಿ ವಿಷಾದಿಸುತ್ತೇವೆ, ವಿಶ್ವದ ಅತಿದೊಡ್ಡ ಕಾರ್ಯನಿರತ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳನ್ನು ಅನುಮಾನಿಸಲಾಗಿದೆ’ ಎಂದು ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ.

“ಬ್ರಿಟಿಷ್ ಮಾಧ್ಯಮಗಳು ಸೇರಿದಂತೆ ವಿದೇಶಿ ಮಾಧ್ಯಮಗಳು ಭಾರತದಲ್ಲಿವೆ ಮತ್ತು ಚರ್ಚೆಯಲ್ಲಿರುವ ಘಟನೆಗಳಿಗೆ ಮೊದಲ ಬಾರಿಗೆ ಸಾಕ್ಷಿಯಾಗಿವೆ. ಭಾರತದಲ್ಲಿ ಮಾಧ್ಯಮಗಳ ಸ್ವಾತಂತ್ರ‍್ಯದ ಕೊರತೆಯ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಹೈಮಿಷನ್ ಹೇಳಿದೆ.

ಸೋಮವಾರ, ಬ್ರಿಟಿಷ್ ಸಂಸತ್ತು ಭಾರತದಲ್ಲಿ “ರೈತರ ಸುರಕ್ಷತೆ” ಮತ್ತು “ಪತ್ರಿಕಾ ಸ್ವಾತಂತ್ರ‍್ಯ” ಕುರಿತು ಚರ್ಚಿಸಲು 90 ನಿಮಿಷಗಳನ್ನು ಮೀಸಲಿಟ್ಟಿತ್ತು. ರೈತರ ಪ್ರತಿಭಟನೆಗಳಿಗೆ ಭಾರತೀಯ ಸರ್ಕಾರದ ಪ್ರತಿಕ್ರಿಯೆಯ ಬಗ್ಗೆ ಲೇಬರ್ ಪಕ್ಷದ ಹಲವಾರು ಸಂಸದರು, ಲಿಬರಲ್ ಪ್ರಜಾಪ್ರಭುತ್ವವಾದಿಗಳು ಮತ್ತು ಸ್ಕಾಟಿಷ್ ರಾಷ್ಟ್ರೀಯ ಪಕ್ಷದವರು ಕಳವಳ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಯುಕೆ ಸರ್ಕಾರ, “ಎರಡೂ ರಾಷ್ಟ್ರದ ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ಭೇಟಿಯಾದಾಗ ಭಾರತದೊಂದಿಗೆ ಈ ಕಳವಳವನ್ನು ಹಂಚಿಕೊಳ್ಳಲಾಗುವುದು” ಎಂದು ಹೇಳಿದೆ.
ಭಾರತೀಯ ಮೂಲದ ಮೈಡೆನ್‌ಹೆಡ್ ಲಿಬರಲ್ ಡೆಮೋಕ್ರಾಟ್ ನಾಯಕ ಗುರ್ಚ್ ಸಿಂಗ್ ಸಲ್ಲಿಸಿದ ಮನವಿಗೆ ಈ ಚರ್ಚೆಯು ಪ್ರತಿಕ್ರಿಯೆಯಾಗಿತ್ತು. ಈ ಪೆಟಿಷನ್‌ಗೆ ವಾರಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಯುಕೆ ನಿವಾಸಿಗಳು ಸಹಿ ಮಾಡಿದ್ದಾರೆ.

ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಮಾರ್ಟಿನ್ ಡೇ ಚರ್ಚೆ ಆರಂಭಿಸುತ್ತ, “ಕೃಷಿ ಸುಧಾರಣೆಗಳು ಭಾರತ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ ವಿಷಯವೆಂದು ಯುಕೆ ಸರ್ಕಾರ ಈಗಾಗಲೇ ಹೇಳಿದೆ. ಆದ್ದರಿಂದ ನಾವು ಈಗ ಸುಧಾರಣೆಗಳ ಬಗ್ಗೆ ಚರ್ಚಿಸುತ್ತಿಲ್ಲ. ಪ್ರತಿಭಟನಾಕಾರರ ಸುರಕ್ಷತೆಗಾಗಿ ನಾವು ಚರ್ಚಿಸುತ್ತಿದ್ದೇವೆ. ಜಲಫಿರಂಗಿ, ಅಶ್ರುವಾಯು ಬಳಕೆ, ಇಂಟರ್‌ನೆಟ್ ಸ್ಥಗಿತ ಮತ್ತು ಪೊಲೀಸರು ಮತ್ತು ರೈತರ ನಡುವೆ ಪದೇ ಪದೇ ಘರ್ಷಣೆ ಉಂಟಾಗುವುದು ಕಳವಳಕಾರಿ ವಿಷಯವಾಗಿದೆ. ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ ಎಂದರು.

ಭಾರತದ ರೈತರು ಮತ್ತು ಪತ್ರಕರ್ತರ ಸುರಕ್ಷತೆಯ ಬಗ್ಗೆ ಹಲವಾರು ವಿರೋಧ ಪಕ್ಷದ ಸಂಸದರು ಕಳವಳ ವ್ಯಕ್ತಪಡಿಸಿದರು. ಬ್ರಿಟನ್ನಿನ ಏಷ್ಯಾ ರಾಜ್ಯ ಸಚಿವ ನಿಗೆಲ್ ಆಡಮ್ಸ್, “ಭಾರತದೊಂದಿಗಿನ ನಿಕಟ ಸಂಬಂಧವು ರಾಷ್ಟ್ರವನ್ನು ಕಳವಳ ವ್ಯಕ್ತಪಡಿಸುವುದಕ್ಕೆ ಅಡ್ಡಿ ಮಾಡುವುದಿಲ್ಲ’ ಎಂದು ಹೇಳಿದರು.

ಕಾರ್ಮಿಕ ಮುಖಂಡ ಜೆರೆಮಿ ಕಾರ್ಬಿನ್, “ಅಭೂತಪೂರ್ವ ಪ್ರತಿಭಟನೆಗಳಿಗೆ ದೊಡ್ಡ ಸಂಖ್ಯೆಯಲ್ಲಿ ಜನ ಏಕೆ ಸೇರುತ್ತಿದ್ದಾರೆ ಎಂಬುದರ ಬಗ್ಗೆ ಯೋಚಿಸುವಂತೆ ಮಾಡಬೇಕು. ಪತ್ರಕರ್ತರ ಬಂಧನವು ಗಂಭೀರ ವಿಷಯವಾಗಿದೆ” ಎಂದು ಹೇಳಿದರು.

ಕನ್ಸರ್ವೇಟಿವ್ ಸಂಸದೆ ಥೆರೆಸಾ ವಿಲಿಯರ್ಸ್, ಭಾರತ ಸರ್ಕಾರದ ಪ್ರತಿಕ್ರಿಯೆಗೆ ಬೆಂಬಲವನ್ನು ಹಂಚಿಕೊಂಡರು. “ಸಾಮೂಹಿಕ ಪ್ರತಿಭಟನೆಗಳು ನಡೆದಾಗ ಇಲ್ಲಿಯೂ ಸಹ ಪೊಲೀಸರ ವಿರುದ್ಧ ನಾವು ದೂರುಗಳನ್ನು ಸ್ವೀಕರಿಸುತ್ತೇವೆ. ಇದರರ್ಥ ಬ್ರಿಟನ್ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದಲ್ಲ” ಎಂದರು.

ತನ್ನ ಹೇಳಿಕೆಯಲ್ಲಿ, ಭಾರತೀಯ ಹೈಕಮಿಷನ್, “ಭಾರತದ ಹೈಕಮಿಷನ್ ಸಾಮಾನ್ಯವಾಗಿ ಗೌರವಾನ್ವಿತ ಸಂಸತ್ ಸದಸ್ಯರ ಒಂದು ಸಣ್ಣ ಗುಂಪು ಸೀಮಿತ ಕೋರಂನಲ್ಲಿ ನಡೆಸುವ ಆಂತರಿಕ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೂ, ಯಾರಾದರೂ ಭಾರತದ ಮೇಲೆ ಆರೋಪಗಳನ್ನು ಮಾಡಿದಾಗ, ಅದನ್ನು ಸರಿಪಡಿಸುವ, ಸತ್ಯವನ್ನು ತೋರಿಸುವ ಹಕ್ಕು ಹೈಕಮಿಷನ್‌ಗೆ ಇದೆ’ ಎಂದು ಪ್ರತಿಪಾದಿಸಿದೆ.

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಜನವರಿಯಲ್ಲಿ ಭಾರತಕ್ಕೆ ಬರಬೇಕಿತ್ತು. ಯುಕೆಯಲ್ಲಿನ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಿದ ನಂತರ ಅವರು ಈ ಪ್ರವಾಸವನ್ನು ಮುಂದೂಡಬೇಕಾಯಿತು.
ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ನವೆಂಬರ್‌ನಲ್ಲಿ ದೆಹಲಿಯ ಗಡಿಯ ಬಳಿ ಪ್ರಾರಂಭವಾಯಿತು. ಕಳೆದ ತಿಂಗಳು, ಪಾಪ್ ತಾರೆ ರಿಹಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್, ಯುಎಸ್ ಮತ್ತು ಯುಕೆ ಸಂಸದರು ರೈತ ಪ್ರತಿಭಟನೆಗಳ ಪರ ನಿಂತ ನಂತರ ಪ್ರತಿಭಟನೆಗೆ ಅಪಾರ ಜಾಗತಿಕ ಬೆಂಬಲ ವ್ಯಕ್ತವಾಗಿತ್ತು.

“ಈ ಪ್ರತಿಭಟನೆಗಳನ್ನು ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಹಿನ್ನೆಲೆಯಲ್ಲಿ ನೋಡಬೇಕು ಎಂದು ನಾವು ಒತ್ತಿ ಹೇಳಲು ಬಯಸುತ್ತೇವೆ ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮತ್ತು ಸಂಬಂಧಪಟ್ಟ ರೈತ ಗುಂಪುಗಳ ಪ್ರಯತ್ನಗಳು ಜಾರಿಯಲ್ಲಿವೆ ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತ್ತು.


ಇದನ್ನೂ ಓದಿ: ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...