Homeಅಂತರಾಷ್ಟ್ರೀಯಭಾರತೀಯ ಮೀನುಗಾರರು ಶ್ರೀಲಂಕಾ ನೌಕಾಪಡೆಯ ವಶಕ್ಕೆ: ಬಂಧಿತರ ಸಂಖ್ಯೆ 54 ಕ್ಕೆ ಏರಿಕೆ

ಭಾರತೀಯ ಮೀನುಗಾರರು ಶ್ರೀಲಂಕಾ ನೌಕಾಪಡೆಯ ವಶಕ್ಕೆ: ಬಂಧಿತರ ಸಂಖ್ಯೆ 54 ಕ್ಕೆ ಏರಿಕೆ

- Advertisement -
- Advertisement -

ಶ್ರೀಲಂಕಾ ನೌಕಾಪಡೆಯು ದೇಶದ ಸರಹದ್ದಿನ ಸಮುದ್ರದಲ್ಲಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ ಐದು ಮೀನುಗಾರಿಕಾ ಬೋಟ್‌ ಮತ್ತು ಕನಿಷ್ಠ 54 ಭಾರತೀಯ ಮೀನುಗಾರರನ್ನು ಬಂಧಿಸಿದೆ ಎಂದು ಅಧಿಕೃತವಾಗಿ ಗುರುವಾರ ತಿಳಿಸಿದೆ. ಉತ್ತರ ಮತ್ತು ಈಶಾನ್ಯ ಪ್ರದೇಶಗಳ ಕರಾವಳಿಯಲ್ಲಿ ನೌಕಾಪಡೆಯು ಮೀನುಗಾರರನ್ನು ಬುಧವಾರ ಬಂಧಿಸಿದ್ದಾಗಿ ಅದು ತಿಳಿಸಿದೆ.

“ಶ್ರೀಲಂಕಾದ ತೀರದಲ್ಲಿ ವಿದೇಶಿಯರು ಮೀನುಗಾರಿಕೆ ಮಾಡುತ್ತಿರುವುದರಿಂದ ಸ್ಥಳೀಯ ಮೀನುಗಾರಿಕಾ ಸಮುದಾಯದ ಮೇಲೆ ಪರೀಣಾಮ ಬೀಡುತ್ತಿದೆ. ಶ್ರೀಲಂಕಾದ ಮೀನುಗಾರಿಕೆ ಸಂಪನ್ಮೂಲಗಳ ಸುಸ್ಥಿರತೆಯನ್ನು ಪರಿಗಣಿಸಿದ ನೌಕಾಪಡೆಯು ಶ್ರೀಲಂಕಾದ ಸಮುದ್ರದಲ್ಲಿ ಅಕ್ರಮ ಮೀನುಗಾರಿಕೆ ಚಟುವಟಿಕೆಗಳನ್ನು ತಡೆಯಲು ನಿಯಮಿತವಾಗಿ ಗಸ್ತು ನಡೆಸುತ್ತಿದೆ” ಎಂದು ನೌಕಾಪಡೆ ಹೇಳಿಕೆ ತಿಳಿಸಿದೆ .

ನೌಕಾಪಡೆಯು 14 ಮೀನುಗಾರರನ್ನೊಳಗೊಂಡು ಭಾರತೀಯ ಮೀನುಗಾರಿಕೆಯ ದೊಡ್ಡ ಹಡಗನ್ನು ಜಾಫ್ನಾದ ಕೋವಿಲಾನ್ ಕರಾವಳಿಯ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಬಂಧಿಸಿತು.

ಇದನ್ನೂ ಓದಿ: 20 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ 20 ಸಿಬ್ಬಂದಿಗಳೊಂದಿಗೆ ಇನ್ನೂ ಎರಡು ಭಾರತೀಯ ಮೀನುಗಾರಿಕಾ ಹಡಗುಗಳನ್ನು ಪೆನಲೈ, ಮನ್ನಾರ್‌ನಿಂದ 7 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮತ್ತು ಇರಾನಾಟಿವು ದ್ವೀಪದಿಂದ 5 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮುಲ್ಲೈತೀವ್‌‌ನಿಂದ 7.5 ಮತ್ತು 8.5 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ 20 ಸಿಬ್ಬಂದಿಗಳನ್ನು ಹೊಂದಿರುವ ಇನ್ನೆರಡು ಭಾರತೀಯ ಮೀನುಗಾರಿಕಾ ಹಡಗುಗಳನ್ನು ಬಂಧಿಸಲಾಗಿದೆ.

ಈ ಎರಡು ಹಡಗುಗಳು ಶ್ರೀಲಂಕಾದ ಸಮುದ್ರವನ್ನು 62 ನಾಟಿಕಲ್ ಮೈಲುಗಳಷ್ಟು ಉಲ್ಲಂಘಿಸಿದ್ದು, ಅಂತರರಾಷ್ಟ್ರೀಯ ಗಡಿರೇಖೆಯನ್ನು (ಐಎಂಬಿಎಲ್) ದಾಟಿತ್ತು ಎಂದು ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಭಾರತೀಯ ಮೀನುಗಾರರಿಂದ ಇದೇ ರೀತಿಯ ಮೀನುಗಾರಿಕಾ ಘಟನೆಗಳು ವರದಿಯಾದಾಗ ಈ ಹಿಂದೆ ಭಾರತೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದೆ ಎಂದು ನೌಕಾಪಡೆ ತಿಳಿಸಿದೆ.

“ಶ್ರೀಲಂಕಾದ ಸಮುದ್ರಕ್ಕೆ ವಿದೇಶಿ ಮೀನುಗಾರರ ಅಕ್ರಮ ಪ್ರವೇಶ ಮತ್ತು ನಿಷೇಧಿತ ಮೀನುಗಾರಿಕೆ ವಿಧಾನಗಳಿಂದಾಗಿ ಸಮುದ್ರ ಪರಿಸರ ವ್ಯವಸ್ಥೆಯನ್ನು ಗಂಭೀರವಾಗಿ ಪರಿಣಾಮವನ್ನು ಉಂಟುಮಾಡಿದೆ. ಅಲ್ಲದೆ ಇದು ದ್ವೀಪದ ಉತ್ತರ ಭಾಗದಲ್ಲಿನ ಮೀನುಗಾರರ ಜೀವನೋಪಾಯಕ್ಕೆ ಅಪಾಯವನ್ನುಂಟುಮಾಡಿದೆ” ಎಂದು ನೌಕಾಪಡೆ ಹೇಳಿದೆ.

ಜನವರಿಯಲ್ಲಿ ದೇಶದ ಸಮುದ್ರದ ಸರಹದ್ದಿನಲ್ಲಿ ಮೀನುಗಾರಿಕೆ ಮಾಡಿದ್ದಕ್ಕಾಗಿ ಒಂದು ಯಾಂತ್ರಿಕೃತ ದೋಣಿ ಸಹಿತ ಒಂಬತ್ತು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿತ್ತು.

ಇದನ್ನೂ ಓದಿ: ಬಿಹಾರ ವಿಧಾನಸಭೆಯಲ್ಲಿ ವಿಪಕ್ಷ ಶಾಸಕರ ಮೇಲೆ ಪೊಲೀಸರಿಂದ ತೀವ್ರ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...