Homeಅಂತರಾಷ್ಟ್ರೀಯಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಈ ಮಧ್ಯೆ ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

- Advertisement -
- Advertisement -

ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡೆನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮದಲ್ಲಿ, ಅಮೆರಿಕ ಸಂಸತ್ತಿನ ಹೊರಗಡೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದರು. ಈ ದಾಂಧಲೆ ಸಮಯದಲ್ಲಿ ಭಾತರದ ಧ್ವಜ ಕಾಣಿಸಿಕೊಂಡಿದ್ದು ವ್ಯಾಪಕ ಖಂಡನೆಗೊಳಗಾಗಿದೆ.

ಅಮೆರಿಕ ಅಧ್ಯಕ್ಷಿಯ ಚುನಾವಣೆಯಲ್ಲಿ ಟ್ರಂಪ್ ಪರಾಜಯಗೊಂಡಿದ್ದರಾದರು, ತನ್ನ ಸೋಲನ್ನು ಅವರು ನಿರಾಕರಿಸುತ್ತಲೇ ಬಂದಿದ್ದರು. ಅವರ ಎದುರಾಳಿ ಜೋ ಬೈಡೆನ್ ಅವರ ಗೆಲುವನ್ನು ಅಮೆರಿಕ ಸಂಸತ್ತು ಗುರುವಾರ ಪ್ರಾಮಾಣಿಕರಿಸಿದೆ. ಆದರೆ ಸಂಸತ್ತಿನಲ್ಲಿ ಈ ಪ್ರಕ್ರಿಯೆ ನಡೆಯುವುದಕ್ಕಿಂಲೂ ಮುಂಚೆ, ಸಂಸತ್ತಿನ ಹೊರಗಡೆ ಟ್ರಂಪ್ ಬೆಂಬಲಿಗರು ಸಂಸತ್ತಿನ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಿಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ನಾಲ್ಕು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಪ್ರಧಾನಿ ಮೋದಿ ದಾಳಿಯನ್ನು ಖಂಡಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ. ಅಧಿಕಾರದ ಕ್ರಮಬದ್ಧ ಮತ್ತು ಶಾಂತಿಯುತ ವರ್ಗಾವಣೆ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆದರೆ ಇದೀಗ ಈ ದಾಂದಲೆ ನಡೆಸುವ ಸಮಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವೈರಲಾಗಿದೆ. ಘಟನೆಯನ್ನು ಹಲವಾರು ಭಾರತೀಯರು ವಿರೋಧಿಸಿದ್ದಾರೆ. ಬಿಜೆಪಿ ನಾಯಕ ವರುಣ್ ಗಾಂಧಿ, “ಅಲ್ಲಿ ಭಾರತೀಯ ಧ್ವಜ ಯಾಕಿದೆ ? ಖಂಡಿತವಾಗಿಯೂ ಇದು ನಾವು ಭಾಗವಹಿಸಬೇಕಾದ ಹೋರಾಟವಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ವರುಣ್ ಗಾಂಧಿ ಟ್ವೀಟನ್ನು ರೀಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿತರೂರ್‌, “ವರುಣ್‌ ಗಾಂಧಿಯವರೇ, ದುರದೃಷ್ಟವಾತ್‌, ಕೆಲವು ಭಾರತೀಯರು ಕೂಡಾ ಟ್ರಂಪ್‌ ಬೆಂಬಲಿಗರ ಹಾಗೆ ಗುಂಪು ಹಿಂಸಾಚಾರ ಬೆಂಬಲಿಸುವ ಮನಸ್ಥಿತಿಯವರೆ ಆಗಿದ್ದಾರೆ. ಬಾವುಟವನ್ನು ಹೆಮ್ಮೆಯ ಸಂಕೇತವಾಗಿ ಬಳಸದೇ ಅದನ್ನು ಅಸ್ತ್ರವನ್ನಾಗಿ ಬಳಸಲು ಬಯಸುತ್ತಾರೆ. ಯಾರೆಲ್ಲಾ ಅದನ್ನು ಒಪ್ಪುವುದಿಲ್ಲವೋ ಅವರೆಲ್ಲರೂ ರಾಷ್ಟ್ರ ವಿರೋಧಿಗಳು ಮತ್ತು ದೇಶದ್ರೋಹಿಳೆಂದು ಹೇಳುತ್ತಾರೆ. ಆ ಭಾವುಟ ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿಯು ರಾಷ್ಟ್ರದ ಸಂಕೇತಗಳನ್ನು ಬಳಸಿಕೊಂಡು ಅವರ ವಿರೋಧಿಗಳನ್ನು ಹಣಿಯುತ್ತಿರುವುದನ್ನು ಶಶಿ ತರೂರು ಇಲ್ಲಿ ಉಲ್ಲೇಖಿಸಿದ್ದಾರೆ.

ಪ್ರವೀಣ್ ಕುಮಾರ್‌ ರಾಜೇಂದ್ರನ್, “ಆಂತರಿಕ ಗಲಭೆಯ ಸಂದರ್ಭದಲ್ಲಿ ಭಾರತೀಯ ಧ್ವಜದ ಹಾರಾಟ ನಡೆಸಿರುವವರ ವೀಸಾವನ್ನು ಅಮೆರಿಕ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ತಿಲಕ್ ಅವರು, “ದೊಡ್ಡ ಗುಂಪಿನಲ್ಲಿರುವ ಮೂರ್ಖ ಜನರ ಶಕ್ತಿಯನ್ನು ಕಡೆಗಣಿಸಬೇಡಿ. ವಿಶ್ವದ ಹಳೆಯ ಪ್ರಜಾಪ್ರಭುತ್ವದ ಸಂಸತ್ತಿನ ಮೇಲೆ ನಡೆದ ದಾಳಿಗೆ ಶತಮೂರ್ಖ ಅನಿವಾಸಿಯೊಬ್ಬ ಭಾರತೀಯ ಧ್ವಜವನ್ನು ಹಿಡಿದಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಪ್ರಧಾನಿ ಮೋದಿಯ ಖಂಡನೆಗೆ ಕೆಲವರು ಆಕ್ಷೇಪ ವ್ಯಕ್ತಪಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಶೀವತ್ಸ ಅವರು, “‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ಗೆ ಏನಾಯಿತು? ನಿಮ್ಮ ‘ಪ್ರೇಂಡ್‌‌’ ಗಾಗಿ ನೀವು ಪ್ರಚಾರ ಮಾಡಿ ನಮ್ಮ ವಿದೇಶಾಂಗ ನೀತಿಯನ್ನು ಕುಗ್ಗಿಸಲಿಲ್ಲವೇ? ಭಾರತದಲ್ಲಿ ಕೊರೊನಾ ಹರಡುತ್ತಿರುವಾಗ, ನೀವು ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ₹ 100 ಕೋಟಿ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂತರನ್‌ಆಫ್‌ ಎಂಬ ಟ್ವಿಟ್ಟರ್‌ ಹ್ಯಾಂಡಲ್‌, ಬಿಜೆಪಿ ನಾಯಕ ವರುಣ್ ಗಾಂಧಿ ಟ್ವೀಟ್‌ಗೆ ಅಧ್ಯಕ್ಷೀಯ ಚುನಾವಣೆಗಿಂತಲೂ ಮುಂಚೆ ಪ್ರಧಾನಿ ಮೋದಿ ಅಲ್ಲಿನ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಟ್ರಂಪ್ ಪರ ಪ್ರಚಾರ ಮಾಡಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...