Homeಅಂತರಾಷ್ಟ್ರೀಯಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಈ ಮಧ್ಯೆ ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

- Advertisement -
- Advertisement -

ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡೆನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮದಲ್ಲಿ, ಅಮೆರಿಕ ಸಂಸತ್ತಿನ ಹೊರಗಡೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದರು. ಈ ದಾಂಧಲೆ ಸಮಯದಲ್ಲಿ ಭಾತರದ ಧ್ವಜ ಕಾಣಿಸಿಕೊಂಡಿದ್ದು ವ್ಯಾಪಕ ಖಂಡನೆಗೊಳಗಾಗಿದೆ.

ಅಮೆರಿಕ ಅಧ್ಯಕ್ಷಿಯ ಚುನಾವಣೆಯಲ್ಲಿ ಟ್ರಂಪ್ ಪರಾಜಯಗೊಂಡಿದ್ದರಾದರು, ತನ್ನ ಸೋಲನ್ನು ಅವರು ನಿರಾಕರಿಸುತ್ತಲೇ ಬಂದಿದ್ದರು. ಅವರ ಎದುರಾಳಿ ಜೋ ಬೈಡೆನ್ ಅವರ ಗೆಲುವನ್ನು ಅಮೆರಿಕ ಸಂಸತ್ತು ಗುರುವಾರ ಪ್ರಾಮಾಣಿಕರಿಸಿದೆ. ಆದರೆ ಸಂಸತ್ತಿನಲ್ಲಿ ಈ ಪ್ರಕ್ರಿಯೆ ನಡೆಯುವುದಕ್ಕಿಂಲೂ ಮುಂಚೆ, ಸಂಸತ್ತಿನ ಹೊರಗಡೆ ಟ್ರಂಪ್ ಬೆಂಬಲಿಗರು ಸಂಸತ್ತಿನ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಿಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ನಾಲ್ಕು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಪ್ರಧಾನಿ ಮೋದಿ ದಾಳಿಯನ್ನು ಖಂಡಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ. ಅಧಿಕಾರದ ಕ್ರಮಬದ್ಧ ಮತ್ತು ಶಾಂತಿಯುತ ವರ್ಗಾವಣೆ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆದರೆ ಇದೀಗ ಈ ದಾಂದಲೆ ನಡೆಸುವ ಸಮಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವೈರಲಾಗಿದೆ. ಘಟನೆಯನ್ನು ಹಲವಾರು ಭಾರತೀಯರು ವಿರೋಧಿಸಿದ್ದಾರೆ. ಬಿಜೆಪಿ ನಾಯಕ ವರುಣ್ ಗಾಂಧಿ, “ಅಲ್ಲಿ ಭಾರತೀಯ ಧ್ವಜ ಯಾಕಿದೆ ? ಖಂಡಿತವಾಗಿಯೂ ಇದು ನಾವು ಭಾಗವಹಿಸಬೇಕಾದ ಹೋರಾಟವಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ವರುಣ್ ಗಾಂಧಿ ಟ್ವೀಟನ್ನು ರೀಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿತರೂರ್‌, “ವರುಣ್‌ ಗಾಂಧಿಯವರೇ, ದುರದೃಷ್ಟವಾತ್‌, ಕೆಲವು ಭಾರತೀಯರು ಕೂಡಾ ಟ್ರಂಪ್‌ ಬೆಂಬಲಿಗರ ಹಾಗೆ ಗುಂಪು ಹಿಂಸಾಚಾರ ಬೆಂಬಲಿಸುವ ಮನಸ್ಥಿತಿಯವರೆ ಆಗಿದ್ದಾರೆ. ಬಾವುಟವನ್ನು ಹೆಮ್ಮೆಯ ಸಂಕೇತವಾಗಿ ಬಳಸದೇ ಅದನ್ನು ಅಸ್ತ್ರವನ್ನಾಗಿ ಬಳಸಲು ಬಯಸುತ್ತಾರೆ. ಯಾರೆಲ್ಲಾ ಅದನ್ನು ಒಪ್ಪುವುದಿಲ್ಲವೋ ಅವರೆಲ್ಲರೂ ರಾಷ್ಟ್ರ ವಿರೋಧಿಗಳು ಮತ್ತು ದೇಶದ್ರೋಹಿಳೆಂದು ಹೇಳುತ್ತಾರೆ. ಆ ಭಾವುಟ ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿಯು ರಾಷ್ಟ್ರದ ಸಂಕೇತಗಳನ್ನು ಬಳಸಿಕೊಂಡು ಅವರ ವಿರೋಧಿಗಳನ್ನು ಹಣಿಯುತ್ತಿರುವುದನ್ನು ಶಶಿ ತರೂರು ಇಲ್ಲಿ ಉಲ್ಲೇಖಿಸಿದ್ದಾರೆ.

ಪ್ರವೀಣ್ ಕುಮಾರ್‌ ರಾಜೇಂದ್ರನ್, “ಆಂತರಿಕ ಗಲಭೆಯ ಸಂದರ್ಭದಲ್ಲಿ ಭಾರತೀಯ ಧ್ವಜದ ಹಾರಾಟ ನಡೆಸಿರುವವರ ವೀಸಾವನ್ನು ಅಮೆರಿಕ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ತಿಲಕ್ ಅವರು, “ದೊಡ್ಡ ಗುಂಪಿನಲ್ಲಿರುವ ಮೂರ್ಖ ಜನರ ಶಕ್ತಿಯನ್ನು ಕಡೆಗಣಿಸಬೇಡಿ. ವಿಶ್ವದ ಹಳೆಯ ಪ್ರಜಾಪ್ರಭುತ್ವದ ಸಂಸತ್ತಿನ ಮೇಲೆ ನಡೆದ ದಾಳಿಗೆ ಶತಮೂರ್ಖ ಅನಿವಾಸಿಯೊಬ್ಬ ಭಾರತೀಯ ಧ್ವಜವನ್ನು ಹಿಡಿದಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಪ್ರಧಾನಿ ಮೋದಿಯ ಖಂಡನೆಗೆ ಕೆಲವರು ಆಕ್ಷೇಪ ವ್ಯಕ್ತಪಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಶೀವತ್ಸ ಅವರು, “‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ಗೆ ಏನಾಯಿತು? ನಿಮ್ಮ ‘ಪ್ರೇಂಡ್‌‌’ ಗಾಗಿ ನೀವು ಪ್ರಚಾರ ಮಾಡಿ ನಮ್ಮ ವಿದೇಶಾಂಗ ನೀತಿಯನ್ನು ಕುಗ್ಗಿಸಲಿಲ್ಲವೇ? ಭಾರತದಲ್ಲಿ ಕೊರೊನಾ ಹರಡುತ್ತಿರುವಾಗ, ನೀವು ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ₹ 100 ಕೋಟಿ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂತರನ್‌ಆಫ್‌ ಎಂಬ ಟ್ವಿಟ್ಟರ್‌ ಹ್ಯಾಂಡಲ್‌, ಬಿಜೆಪಿ ನಾಯಕ ವರುಣ್ ಗಾಂಧಿ ಟ್ವೀಟ್‌ಗೆ ಅಧ್ಯಕ್ಷೀಯ ಚುನಾವಣೆಗಿಂತಲೂ ಮುಂಚೆ ಪ್ರಧಾನಿ ಮೋದಿ ಅಲ್ಲಿನ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಟ್ರಂಪ್ ಪರ ಪ್ರಚಾರ ಮಾಡಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...