Homeಅಂತರಾಷ್ಟ್ರೀಯಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಈ ಮಧ್ಯೆ ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

- Advertisement -
- Advertisement -

ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡೆನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮದಲ್ಲಿ, ಅಮೆರಿಕ ಸಂಸತ್ತಿನ ಹೊರಗಡೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದರು. ಈ ದಾಂಧಲೆ ಸಮಯದಲ್ಲಿ ಭಾತರದ ಧ್ವಜ ಕಾಣಿಸಿಕೊಂಡಿದ್ದು ವ್ಯಾಪಕ ಖಂಡನೆಗೊಳಗಾಗಿದೆ.

ಅಮೆರಿಕ ಅಧ್ಯಕ್ಷಿಯ ಚುನಾವಣೆಯಲ್ಲಿ ಟ್ರಂಪ್ ಪರಾಜಯಗೊಂಡಿದ್ದರಾದರು, ತನ್ನ ಸೋಲನ್ನು ಅವರು ನಿರಾಕರಿಸುತ್ತಲೇ ಬಂದಿದ್ದರು. ಅವರ ಎದುರಾಳಿ ಜೋ ಬೈಡೆನ್ ಅವರ ಗೆಲುವನ್ನು ಅಮೆರಿಕ ಸಂಸತ್ತು ಗುರುವಾರ ಪ್ರಾಮಾಣಿಕರಿಸಿದೆ. ಆದರೆ ಸಂಸತ್ತಿನಲ್ಲಿ ಈ ಪ್ರಕ್ರಿಯೆ ನಡೆಯುವುದಕ್ಕಿಂಲೂ ಮುಂಚೆ, ಸಂಸತ್ತಿನ ಹೊರಗಡೆ ಟ್ರಂಪ್ ಬೆಂಬಲಿಗರು ಸಂಸತ್ತಿನ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಿಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ನಾಲ್ಕು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಪ್ರಧಾನಿ ಮೋದಿ ದಾಳಿಯನ್ನು ಖಂಡಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ. ಅಧಿಕಾರದ ಕ್ರಮಬದ್ಧ ಮತ್ತು ಶಾಂತಿಯುತ ವರ್ಗಾವಣೆ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆದರೆ ಇದೀಗ ಈ ದಾಂದಲೆ ನಡೆಸುವ ಸಮಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವೈರಲಾಗಿದೆ. ಘಟನೆಯನ್ನು ಹಲವಾರು ಭಾರತೀಯರು ವಿರೋಧಿಸಿದ್ದಾರೆ. ಬಿಜೆಪಿ ನಾಯಕ ವರುಣ್ ಗಾಂಧಿ, “ಅಲ್ಲಿ ಭಾರತೀಯ ಧ್ವಜ ಯಾಕಿದೆ ? ಖಂಡಿತವಾಗಿಯೂ ಇದು ನಾವು ಭಾಗವಹಿಸಬೇಕಾದ ಹೋರಾಟವಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ವರುಣ್ ಗಾಂಧಿ ಟ್ವೀಟನ್ನು ರೀಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿತರೂರ್‌, “ವರುಣ್‌ ಗಾಂಧಿಯವರೇ, ದುರದೃಷ್ಟವಾತ್‌, ಕೆಲವು ಭಾರತೀಯರು ಕೂಡಾ ಟ್ರಂಪ್‌ ಬೆಂಬಲಿಗರ ಹಾಗೆ ಗುಂಪು ಹಿಂಸಾಚಾರ ಬೆಂಬಲಿಸುವ ಮನಸ್ಥಿತಿಯವರೆ ಆಗಿದ್ದಾರೆ. ಬಾವುಟವನ್ನು ಹೆಮ್ಮೆಯ ಸಂಕೇತವಾಗಿ ಬಳಸದೇ ಅದನ್ನು ಅಸ್ತ್ರವನ್ನಾಗಿ ಬಳಸಲು ಬಯಸುತ್ತಾರೆ. ಯಾರೆಲ್ಲಾ ಅದನ್ನು ಒಪ್ಪುವುದಿಲ್ಲವೋ ಅವರೆಲ್ಲರೂ ರಾಷ್ಟ್ರ ವಿರೋಧಿಗಳು ಮತ್ತು ದೇಶದ್ರೋಹಿಳೆಂದು ಹೇಳುತ್ತಾರೆ. ಆ ಭಾವುಟ ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿಯು ರಾಷ್ಟ್ರದ ಸಂಕೇತಗಳನ್ನು ಬಳಸಿಕೊಂಡು ಅವರ ವಿರೋಧಿಗಳನ್ನು ಹಣಿಯುತ್ತಿರುವುದನ್ನು ಶಶಿ ತರೂರು ಇಲ್ಲಿ ಉಲ್ಲೇಖಿಸಿದ್ದಾರೆ.

ಪ್ರವೀಣ್ ಕುಮಾರ್‌ ರಾಜೇಂದ್ರನ್, “ಆಂತರಿಕ ಗಲಭೆಯ ಸಂದರ್ಭದಲ್ಲಿ ಭಾರತೀಯ ಧ್ವಜದ ಹಾರಾಟ ನಡೆಸಿರುವವರ ವೀಸಾವನ್ನು ಅಮೆರಿಕ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ತಿಲಕ್ ಅವರು, “ದೊಡ್ಡ ಗುಂಪಿನಲ್ಲಿರುವ ಮೂರ್ಖ ಜನರ ಶಕ್ತಿಯನ್ನು ಕಡೆಗಣಿಸಬೇಡಿ. ವಿಶ್ವದ ಹಳೆಯ ಪ್ರಜಾಪ್ರಭುತ್ವದ ಸಂಸತ್ತಿನ ಮೇಲೆ ನಡೆದ ದಾಳಿಗೆ ಶತಮೂರ್ಖ ಅನಿವಾಸಿಯೊಬ್ಬ ಭಾರತೀಯ ಧ್ವಜವನ್ನು ಹಿಡಿದಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಪ್ರಧಾನಿ ಮೋದಿಯ ಖಂಡನೆಗೆ ಕೆಲವರು ಆಕ್ಷೇಪ ವ್ಯಕ್ತಪಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಶೀವತ್ಸ ಅವರು, “‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ಗೆ ಏನಾಯಿತು? ನಿಮ್ಮ ‘ಪ್ರೇಂಡ್‌‌’ ಗಾಗಿ ನೀವು ಪ್ರಚಾರ ಮಾಡಿ ನಮ್ಮ ವಿದೇಶಾಂಗ ನೀತಿಯನ್ನು ಕುಗ್ಗಿಸಲಿಲ್ಲವೇ? ಭಾರತದಲ್ಲಿ ಕೊರೊನಾ ಹರಡುತ್ತಿರುವಾಗ, ನೀವು ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ₹ 100 ಕೋಟಿ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂತರನ್‌ಆಫ್‌ ಎಂಬ ಟ್ವಿಟ್ಟರ್‌ ಹ್ಯಾಂಡಲ್‌, ಬಿಜೆಪಿ ನಾಯಕ ವರುಣ್ ಗಾಂಧಿ ಟ್ವೀಟ್‌ಗೆ ಅಧ್ಯಕ್ಷೀಯ ಚುನಾವಣೆಗಿಂತಲೂ ಮುಂಚೆ ಪ್ರಧಾನಿ ಮೋದಿ ಅಲ್ಲಿನ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಟ್ರಂಪ್ ಪರ ಪ್ರಚಾರ ಮಾಡಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...