Homeಅಂತರಾಷ್ಟ್ರೀಯಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಈ ಮಧ್ಯೆ ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

- Advertisement -
- Advertisement -

ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡೆನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮದಲ್ಲಿ, ಅಮೆರಿಕ ಸಂಸತ್ತಿನ ಹೊರಗಡೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದರು. ಈ ದಾಂಧಲೆ ಸಮಯದಲ್ಲಿ ಭಾತರದ ಧ್ವಜ ಕಾಣಿಸಿಕೊಂಡಿದ್ದು ವ್ಯಾಪಕ ಖಂಡನೆಗೊಳಗಾಗಿದೆ.

ಅಮೆರಿಕ ಅಧ್ಯಕ್ಷಿಯ ಚುನಾವಣೆಯಲ್ಲಿ ಟ್ರಂಪ್ ಪರಾಜಯಗೊಂಡಿದ್ದರಾದರು, ತನ್ನ ಸೋಲನ್ನು ಅವರು ನಿರಾಕರಿಸುತ್ತಲೇ ಬಂದಿದ್ದರು. ಅವರ ಎದುರಾಳಿ ಜೋ ಬೈಡೆನ್ ಅವರ ಗೆಲುವನ್ನು ಅಮೆರಿಕ ಸಂಸತ್ತು ಗುರುವಾರ ಪ್ರಾಮಾಣಿಕರಿಸಿದೆ. ಆದರೆ ಸಂಸತ್ತಿನಲ್ಲಿ ಈ ಪ್ರಕ್ರಿಯೆ ನಡೆಯುವುದಕ್ಕಿಂಲೂ ಮುಂಚೆ, ಸಂಸತ್ತಿನ ಹೊರಗಡೆ ಟ್ರಂಪ್ ಬೆಂಬಲಿಗರು ಸಂಸತ್ತಿನ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಿಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ನಾಲ್ಕು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಪ್ರಧಾನಿ ಮೋದಿ ದಾಳಿಯನ್ನು ಖಂಡಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ. ಅಧಿಕಾರದ ಕ್ರಮಬದ್ಧ ಮತ್ತು ಶಾಂತಿಯುತ ವರ್ಗಾವಣೆ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆದರೆ ಇದೀಗ ಈ ದಾಂದಲೆ ನಡೆಸುವ ಸಮಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವೈರಲಾಗಿದೆ. ಘಟನೆಯನ್ನು ಹಲವಾರು ಭಾರತೀಯರು ವಿರೋಧಿಸಿದ್ದಾರೆ. ಬಿಜೆಪಿ ನಾಯಕ ವರುಣ್ ಗಾಂಧಿ, “ಅಲ್ಲಿ ಭಾರತೀಯ ಧ್ವಜ ಯಾಕಿದೆ ? ಖಂಡಿತವಾಗಿಯೂ ಇದು ನಾವು ಭಾಗವಹಿಸಬೇಕಾದ ಹೋರಾಟವಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ವರುಣ್ ಗಾಂಧಿ ಟ್ವೀಟನ್ನು ರೀಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿತರೂರ್‌, “ವರುಣ್‌ ಗಾಂಧಿಯವರೇ, ದುರದೃಷ್ಟವಾತ್‌, ಕೆಲವು ಭಾರತೀಯರು ಕೂಡಾ ಟ್ರಂಪ್‌ ಬೆಂಬಲಿಗರ ಹಾಗೆ ಗುಂಪು ಹಿಂಸಾಚಾರ ಬೆಂಬಲಿಸುವ ಮನಸ್ಥಿತಿಯವರೆ ಆಗಿದ್ದಾರೆ. ಬಾವುಟವನ್ನು ಹೆಮ್ಮೆಯ ಸಂಕೇತವಾಗಿ ಬಳಸದೇ ಅದನ್ನು ಅಸ್ತ್ರವನ್ನಾಗಿ ಬಳಸಲು ಬಯಸುತ್ತಾರೆ. ಯಾರೆಲ್ಲಾ ಅದನ್ನು ಒಪ್ಪುವುದಿಲ್ಲವೋ ಅವರೆಲ್ಲರೂ ರಾಷ್ಟ್ರ ವಿರೋಧಿಗಳು ಮತ್ತು ದೇಶದ್ರೋಹಿಳೆಂದು ಹೇಳುತ್ತಾರೆ. ಆ ಭಾವುಟ ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿಯು ರಾಷ್ಟ್ರದ ಸಂಕೇತಗಳನ್ನು ಬಳಸಿಕೊಂಡು ಅವರ ವಿರೋಧಿಗಳನ್ನು ಹಣಿಯುತ್ತಿರುವುದನ್ನು ಶಶಿ ತರೂರು ಇಲ್ಲಿ ಉಲ್ಲೇಖಿಸಿದ್ದಾರೆ.

ಪ್ರವೀಣ್ ಕುಮಾರ್‌ ರಾಜೇಂದ್ರನ್, “ಆಂತರಿಕ ಗಲಭೆಯ ಸಂದರ್ಭದಲ್ಲಿ ಭಾರತೀಯ ಧ್ವಜದ ಹಾರಾಟ ನಡೆಸಿರುವವರ ವೀಸಾವನ್ನು ಅಮೆರಿಕ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ತಿಲಕ್ ಅವರು, “ದೊಡ್ಡ ಗುಂಪಿನಲ್ಲಿರುವ ಮೂರ್ಖ ಜನರ ಶಕ್ತಿಯನ್ನು ಕಡೆಗಣಿಸಬೇಡಿ. ವಿಶ್ವದ ಹಳೆಯ ಪ್ರಜಾಪ್ರಭುತ್ವದ ಸಂಸತ್ತಿನ ಮೇಲೆ ನಡೆದ ದಾಳಿಗೆ ಶತಮೂರ್ಖ ಅನಿವಾಸಿಯೊಬ್ಬ ಭಾರತೀಯ ಧ್ವಜವನ್ನು ಹಿಡಿದಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಪ್ರಧಾನಿ ಮೋದಿಯ ಖಂಡನೆಗೆ ಕೆಲವರು ಆಕ್ಷೇಪ ವ್ಯಕ್ತಪಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಶೀವತ್ಸ ಅವರು, “‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ಗೆ ಏನಾಯಿತು? ನಿಮ್ಮ ‘ಪ್ರೇಂಡ್‌‌’ ಗಾಗಿ ನೀವು ಪ್ರಚಾರ ಮಾಡಿ ನಮ್ಮ ವಿದೇಶಾಂಗ ನೀತಿಯನ್ನು ಕುಗ್ಗಿಸಲಿಲ್ಲವೇ? ಭಾರತದಲ್ಲಿ ಕೊರೊನಾ ಹರಡುತ್ತಿರುವಾಗ, ನೀವು ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ₹ 100 ಕೋಟಿ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂತರನ್‌ಆಫ್‌ ಎಂಬ ಟ್ವಿಟ್ಟರ್‌ ಹ್ಯಾಂಡಲ್‌, ಬಿಜೆಪಿ ನಾಯಕ ವರುಣ್ ಗಾಂಧಿ ಟ್ವೀಟ್‌ಗೆ ಅಧ್ಯಕ್ಷೀಯ ಚುನಾವಣೆಗಿಂತಲೂ ಮುಂಚೆ ಪ್ರಧಾನಿ ಮೋದಿ ಅಲ್ಲಿನ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಟ್ರಂಪ್ ಪರ ಪ್ರಚಾರ ಮಾಡಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...