Homeಅಂತರಾಷ್ಟ್ರೀಯಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಈ ಮಧ್ಯೆ ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

- Advertisement -
- Advertisement -

ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡೆನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮದಲ್ಲಿ, ಅಮೆರಿಕ ಸಂಸತ್ತಿನ ಹೊರಗಡೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದರು. ಈ ದಾಂಧಲೆ ಸಮಯದಲ್ಲಿ ಭಾತರದ ಧ್ವಜ ಕಾಣಿಸಿಕೊಂಡಿದ್ದು ವ್ಯಾಪಕ ಖಂಡನೆಗೊಳಗಾಗಿದೆ.

ಅಮೆರಿಕ ಅಧ್ಯಕ್ಷಿಯ ಚುನಾವಣೆಯಲ್ಲಿ ಟ್ರಂಪ್ ಪರಾಜಯಗೊಂಡಿದ್ದರಾದರು, ತನ್ನ ಸೋಲನ್ನು ಅವರು ನಿರಾಕರಿಸುತ್ತಲೇ ಬಂದಿದ್ದರು. ಅವರ ಎದುರಾಳಿ ಜೋ ಬೈಡೆನ್ ಅವರ ಗೆಲುವನ್ನು ಅಮೆರಿಕ ಸಂಸತ್ತು ಗುರುವಾರ ಪ್ರಾಮಾಣಿಕರಿಸಿದೆ. ಆದರೆ ಸಂಸತ್ತಿನಲ್ಲಿ ಈ ಪ್ರಕ್ರಿಯೆ ನಡೆಯುವುದಕ್ಕಿಂಲೂ ಮುಂಚೆ, ಸಂಸತ್ತಿನ ಹೊರಗಡೆ ಟ್ರಂಪ್ ಬೆಂಬಲಿಗರು ಸಂಸತ್ತಿನ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಿಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ನಾಲ್ಕು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಪ್ರಧಾನಿ ಮೋದಿ ದಾಳಿಯನ್ನು ಖಂಡಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ. ಅಧಿಕಾರದ ಕ್ರಮಬದ್ಧ ಮತ್ತು ಶಾಂತಿಯುತ ವರ್ಗಾವಣೆ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆದರೆ ಇದೀಗ ಈ ದಾಂದಲೆ ನಡೆಸುವ ಸಮಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವೈರಲಾಗಿದೆ. ಘಟನೆಯನ್ನು ಹಲವಾರು ಭಾರತೀಯರು ವಿರೋಧಿಸಿದ್ದಾರೆ. ಬಿಜೆಪಿ ನಾಯಕ ವರುಣ್ ಗಾಂಧಿ, “ಅಲ್ಲಿ ಭಾರತೀಯ ಧ್ವಜ ಯಾಕಿದೆ ? ಖಂಡಿತವಾಗಿಯೂ ಇದು ನಾವು ಭಾಗವಹಿಸಬೇಕಾದ ಹೋರಾಟವಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ವರುಣ್ ಗಾಂಧಿ ಟ್ವೀಟನ್ನು ರೀಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿತರೂರ್‌, “ವರುಣ್‌ ಗಾಂಧಿಯವರೇ, ದುರದೃಷ್ಟವಾತ್‌, ಕೆಲವು ಭಾರತೀಯರು ಕೂಡಾ ಟ್ರಂಪ್‌ ಬೆಂಬಲಿಗರ ಹಾಗೆ ಗುಂಪು ಹಿಂಸಾಚಾರ ಬೆಂಬಲಿಸುವ ಮನಸ್ಥಿತಿಯವರೆ ಆಗಿದ್ದಾರೆ. ಬಾವುಟವನ್ನು ಹೆಮ್ಮೆಯ ಸಂಕೇತವಾಗಿ ಬಳಸದೇ ಅದನ್ನು ಅಸ್ತ್ರವನ್ನಾಗಿ ಬಳಸಲು ಬಯಸುತ್ತಾರೆ. ಯಾರೆಲ್ಲಾ ಅದನ್ನು ಒಪ್ಪುವುದಿಲ್ಲವೋ ಅವರೆಲ್ಲರೂ ರಾಷ್ಟ್ರ ವಿರೋಧಿಗಳು ಮತ್ತು ದೇಶದ್ರೋಹಿಳೆಂದು ಹೇಳುತ್ತಾರೆ. ಆ ಭಾವುಟ ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿಯು ರಾಷ್ಟ್ರದ ಸಂಕೇತಗಳನ್ನು ಬಳಸಿಕೊಂಡು ಅವರ ವಿರೋಧಿಗಳನ್ನು ಹಣಿಯುತ್ತಿರುವುದನ್ನು ಶಶಿ ತರೂರು ಇಲ್ಲಿ ಉಲ್ಲೇಖಿಸಿದ್ದಾರೆ.

ಪ್ರವೀಣ್ ಕುಮಾರ್‌ ರಾಜೇಂದ್ರನ್, “ಆಂತರಿಕ ಗಲಭೆಯ ಸಂದರ್ಭದಲ್ಲಿ ಭಾರತೀಯ ಧ್ವಜದ ಹಾರಾಟ ನಡೆಸಿರುವವರ ವೀಸಾವನ್ನು ಅಮೆರಿಕ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ತಿಲಕ್ ಅವರು, “ದೊಡ್ಡ ಗುಂಪಿನಲ್ಲಿರುವ ಮೂರ್ಖ ಜನರ ಶಕ್ತಿಯನ್ನು ಕಡೆಗಣಿಸಬೇಡಿ. ವಿಶ್ವದ ಹಳೆಯ ಪ್ರಜಾಪ್ರಭುತ್ವದ ಸಂಸತ್ತಿನ ಮೇಲೆ ನಡೆದ ದಾಳಿಗೆ ಶತಮೂರ್ಖ ಅನಿವಾಸಿಯೊಬ್ಬ ಭಾರತೀಯ ಧ್ವಜವನ್ನು ಹಿಡಿದಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಪ್ರಧಾನಿ ಮೋದಿಯ ಖಂಡನೆಗೆ ಕೆಲವರು ಆಕ್ಷೇಪ ವ್ಯಕ್ತಪಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಶೀವತ್ಸ ಅವರು, “‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ಗೆ ಏನಾಯಿತು? ನಿಮ್ಮ ‘ಪ್ರೇಂಡ್‌‌’ ಗಾಗಿ ನೀವು ಪ್ರಚಾರ ಮಾಡಿ ನಮ್ಮ ವಿದೇಶಾಂಗ ನೀತಿಯನ್ನು ಕುಗ್ಗಿಸಲಿಲ್ಲವೇ? ಭಾರತದಲ್ಲಿ ಕೊರೊನಾ ಹರಡುತ್ತಿರುವಾಗ, ನೀವು ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ₹ 100 ಕೋಟಿ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂತರನ್‌ಆಫ್‌ ಎಂಬ ಟ್ವಿಟ್ಟರ್‌ ಹ್ಯಾಂಡಲ್‌, ಬಿಜೆಪಿ ನಾಯಕ ವರುಣ್ ಗಾಂಧಿ ಟ್ವೀಟ್‌ಗೆ ಅಧ್ಯಕ್ಷೀಯ ಚುನಾವಣೆಗಿಂತಲೂ ಮುಂಚೆ ಪ್ರಧಾನಿ ಮೋದಿ ಅಲ್ಲಿನ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಟ್ರಂಪ್ ಪರ ಪ್ರಚಾರ ಮಾಡಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...