Homeಅಂತರಾಷ್ಟ್ರೀಯಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಈ ಮಧ್ಯೆ ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

- Advertisement -
- Advertisement -

ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡೆನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮದಲ್ಲಿ, ಅಮೆರಿಕ ಸಂಸತ್ತಿನ ಹೊರಗಡೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದರು. ಈ ದಾಂಧಲೆ ಸಮಯದಲ್ಲಿ ಭಾತರದ ಧ್ವಜ ಕಾಣಿಸಿಕೊಂಡಿದ್ದು ವ್ಯಾಪಕ ಖಂಡನೆಗೊಳಗಾಗಿದೆ.

ಅಮೆರಿಕ ಅಧ್ಯಕ್ಷಿಯ ಚುನಾವಣೆಯಲ್ಲಿ ಟ್ರಂಪ್ ಪರಾಜಯಗೊಂಡಿದ್ದರಾದರು, ತನ್ನ ಸೋಲನ್ನು ಅವರು ನಿರಾಕರಿಸುತ್ತಲೇ ಬಂದಿದ್ದರು. ಅವರ ಎದುರಾಳಿ ಜೋ ಬೈಡೆನ್ ಅವರ ಗೆಲುವನ್ನು ಅಮೆರಿಕ ಸಂಸತ್ತು ಗುರುವಾರ ಪ್ರಾಮಾಣಿಕರಿಸಿದೆ. ಆದರೆ ಸಂಸತ್ತಿನಲ್ಲಿ ಈ ಪ್ರಕ್ರಿಯೆ ನಡೆಯುವುದಕ್ಕಿಂಲೂ ಮುಂಚೆ, ಸಂಸತ್ತಿನ ಹೊರಗಡೆ ಟ್ರಂಪ್ ಬೆಂಬಲಿಗರು ಸಂಸತ್ತಿನ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಿಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ನಾಲ್ಕು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಪ್ರಧಾನಿ ಮೋದಿ ದಾಳಿಯನ್ನು ಖಂಡಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ. ಅಧಿಕಾರದ ಕ್ರಮಬದ್ಧ ಮತ್ತು ಶಾಂತಿಯುತ ವರ್ಗಾವಣೆ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆದರೆ ಇದೀಗ ಈ ದಾಂದಲೆ ನಡೆಸುವ ಸಮಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವೈರಲಾಗಿದೆ. ಘಟನೆಯನ್ನು ಹಲವಾರು ಭಾರತೀಯರು ವಿರೋಧಿಸಿದ್ದಾರೆ. ಬಿಜೆಪಿ ನಾಯಕ ವರುಣ್ ಗಾಂಧಿ, “ಅಲ್ಲಿ ಭಾರತೀಯ ಧ್ವಜ ಯಾಕಿದೆ ? ಖಂಡಿತವಾಗಿಯೂ ಇದು ನಾವು ಭಾಗವಹಿಸಬೇಕಾದ ಹೋರಾಟವಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ವರುಣ್ ಗಾಂಧಿ ಟ್ವೀಟನ್ನು ರೀಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿತರೂರ್‌, “ವರುಣ್‌ ಗಾಂಧಿಯವರೇ, ದುರದೃಷ್ಟವಾತ್‌, ಕೆಲವು ಭಾರತೀಯರು ಕೂಡಾ ಟ್ರಂಪ್‌ ಬೆಂಬಲಿಗರ ಹಾಗೆ ಗುಂಪು ಹಿಂಸಾಚಾರ ಬೆಂಬಲಿಸುವ ಮನಸ್ಥಿತಿಯವರೆ ಆಗಿದ್ದಾರೆ. ಬಾವುಟವನ್ನು ಹೆಮ್ಮೆಯ ಸಂಕೇತವಾಗಿ ಬಳಸದೇ ಅದನ್ನು ಅಸ್ತ್ರವನ್ನಾಗಿ ಬಳಸಲು ಬಯಸುತ್ತಾರೆ. ಯಾರೆಲ್ಲಾ ಅದನ್ನು ಒಪ್ಪುವುದಿಲ್ಲವೋ ಅವರೆಲ್ಲರೂ ರಾಷ್ಟ್ರ ವಿರೋಧಿಗಳು ಮತ್ತು ದೇಶದ್ರೋಹಿಳೆಂದು ಹೇಳುತ್ತಾರೆ. ಆ ಭಾವುಟ ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿಯು ರಾಷ್ಟ್ರದ ಸಂಕೇತಗಳನ್ನು ಬಳಸಿಕೊಂಡು ಅವರ ವಿರೋಧಿಗಳನ್ನು ಹಣಿಯುತ್ತಿರುವುದನ್ನು ಶಶಿ ತರೂರು ಇಲ್ಲಿ ಉಲ್ಲೇಖಿಸಿದ್ದಾರೆ.

ಪ್ರವೀಣ್ ಕುಮಾರ್‌ ರಾಜೇಂದ್ರನ್, “ಆಂತರಿಕ ಗಲಭೆಯ ಸಂದರ್ಭದಲ್ಲಿ ಭಾರತೀಯ ಧ್ವಜದ ಹಾರಾಟ ನಡೆಸಿರುವವರ ವೀಸಾವನ್ನು ಅಮೆರಿಕ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ತಿಲಕ್ ಅವರು, “ದೊಡ್ಡ ಗುಂಪಿನಲ್ಲಿರುವ ಮೂರ್ಖ ಜನರ ಶಕ್ತಿಯನ್ನು ಕಡೆಗಣಿಸಬೇಡಿ. ವಿಶ್ವದ ಹಳೆಯ ಪ್ರಜಾಪ್ರಭುತ್ವದ ಸಂಸತ್ತಿನ ಮೇಲೆ ನಡೆದ ದಾಳಿಗೆ ಶತಮೂರ್ಖ ಅನಿವಾಸಿಯೊಬ್ಬ ಭಾರತೀಯ ಧ್ವಜವನ್ನು ಹಿಡಿದಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಪ್ರಧಾನಿ ಮೋದಿಯ ಖಂಡನೆಗೆ ಕೆಲವರು ಆಕ್ಷೇಪ ವ್ಯಕ್ತಪಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಶೀವತ್ಸ ಅವರು, “‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ಗೆ ಏನಾಯಿತು? ನಿಮ್ಮ ‘ಪ್ರೇಂಡ್‌‌’ ಗಾಗಿ ನೀವು ಪ್ರಚಾರ ಮಾಡಿ ನಮ್ಮ ವಿದೇಶಾಂಗ ನೀತಿಯನ್ನು ಕುಗ್ಗಿಸಲಿಲ್ಲವೇ? ಭಾರತದಲ್ಲಿ ಕೊರೊನಾ ಹರಡುತ್ತಿರುವಾಗ, ನೀವು ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ₹ 100 ಕೋಟಿ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂತರನ್‌ಆಫ್‌ ಎಂಬ ಟ್ವಿಟ್ಟರ್‌ ಹ್ಯಾಂಡಲ್‌, ಬಿಜೆಪಿ ನಾಯಕ ವರುಣ್ ಗಾಂಧಿ ಟ್ವೀಟ್‌ಗೆ ಅಧ್ಯಕ್ಷೀಯ ಚುನಾವಣೆಗಿಂತಲೂ ಮುಂಚೆ ಪ್ರಧಾನಿ ಮೋದಿ ಅಲ್ಲಿನ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಟ್ರಂಪ್ ಪರ ಪ್ರಚಾರ ಮಾಡಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...