Homeಮುಖಪುಟಜ್ಯೋತಿಷಿಯ ಸಲಹೆಯ ಮೇರೆಗೆ ತಂಡವನ್ನು ಆಯ್ಕೆ ಮಾಡಿದ್ದ ಭಾರತೀಯ ಫುಟ್ಬಾಲ್ ಕೋಚ್: ವರದಿ

ಜ್ಯೋತಿಷಿಯ ಸಲಹೆಯ ಮೇರೆಗೆ ತಂಡವನ್ನು ಆಯ್ಕೆ ಮಾಡಿದ್ದ ಭಾರತೀಯ ಫುಟ್ಬಾಲ್ ಕೋಚ್: ವರದಿ

- Advertisement -
- Advertisement -

ಜೂನ್ 2022ರಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಏಷ್ಯನ್ ಕಪ್ ಪಂದ್ಯಕ್ಕೆ ದೆಹಲಿ ಜ್ಯೋತಿಷಿ ಭೂಪೇಶ್ ಶರ್ಮಾ ಅವರ ಸಲಹೆಯ ಮೇರೆಗೆ ಭಾರತೀಯ ಫುಟ್‌ಬಾಲ್ ತಂಡದ ಕೋಚ್ ಇಗೊರ್ ಸ್ಟಿಮ್ಯಾಕ್ ತಂಡವನ್ನು ಆಯ್ಕೆ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ಶರ್ಮಾ ಅವರನ್ನು ಸ್ಟಿಮ್ಯಾಕ್‌ಗೆ ಪರಿಚಯಿಸಿದೆ ಎಂದು ವರದಿ ತಿಳಿಸಿದೆ.

ಸ್ಟಿಮ್ಯಾಕ್ ಪಂದ್ಯಕ್ಕಾಗಿ 11 ಸಂಭಾವ್ಯ ಆಟಗಾರರ  ಪಟ್ಟಿಯನ್ನು ಜ್ಯೋತಿಷಿಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಜೂನ್ 11 ರಂದು ಪಂದ್ಯ ನಡೆಯಬೇಕಿತ್ತು ಮತ್ತು ಜೂನ್ 9 ರಂದು ಪಟ್ಟಿಯನ್ನು ಜ್ಯೋತಿಷಿ ಸಲಹೆ ಮೇರೆಗೆ ಆಯ್ಕೆ ಮಾಡಲಾಗಿದೆ.

ಶರ್ಮಾ ಪ್ರತಿ ಆಟಗಾರನ ಹೆಸರಿನ ಎದುರು ಒಳ್ಳೆಯದು, ಉತ್ತಮವಾಗಿ ಆಡಬಹುದು, ಅತಿಯಾದ ಆತ್ಮವಿಶ್ವಾಸವನ್ನು ತಪ್ಪಿಸಬೇಕು, ಅವರಿಗೆ ತುಂಬಾ ಒಳ್ಳೆಯ ದಿನ, ಇವರಿಗೆ ಆ ದಿನ ಚೆನ್ನಾಗಿಲ್ಲ ಎಂದೆಲ್ಲಾ ಬರೆದಿದ್ದಾರೆ.

ಭಾರತ ತಂಡವು ಮೇ ಮತ್ತು ಜೂನ್ 2022ರಲ್ಲಿ ನಾಲ್ಕು ಪಂದ್ಯಗಳನ್ನು ಆಡಿತು. ಇವು ಜೋರ್ಡಾನ್, ಕಾಂಬೋಡಿಯಾ, ಅಫ್ಘಾನಿಸ್ತಾನ್ ಮತ್ತು ಹಾಂಗ್ ಕಾಂಗ್ ವಿರುದ್ಧ. ಪ್ರತಿ ಪಂದ್ಯಕ್ಕೂ ಮುನ್ನ ಸ್ಟಿಮ್ಯಾಕ್ ಆಟಗಾರರ ಪಟ್ಟಿಯನ್ನು ಶರ್ಮಾ ಅವರೊಂದಿಗೆ ಹಂಚಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಎರಡು ತಿಂಗಳವರೆಗೆ ಶರ್ಮಾ ಅವರ ಸೇವೆಗಾಗಿ 12 ರಿಂದ 15 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದು ದಾಸ್ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರತಿ ಆಟದ ಮೊದಲು, ಸ್ಟಿಮ್ಯಾಕ್ ಶರ್ಮಾ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಸಂದೇಶಗಳು ತೋರಿಸುತ್ತವೆ. ಈ ಸಂದೇಶಗಳು ಭಾರತೀಯ ತಂಡದ ಆಯ್ಕೆ ಪ್ರಕ್ರಿಯೆಯ ಸಮಗ್ರತೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆಯನ್ನು ಹಾಕಿದೆ. ಪ್ರಮುಖ ತಂಡದ ಮಾಹಿತಿಯನ್ನು ಹೊರಗಿನವರ ಜೊತೆ ಹಂಚಿಕೊಳ್ಳುವುದರಿಂದ ದುರುಪಯೋಗವಾಗುವ ಅಪಾಯವಿದೆ ಎಂದು ಕೂಡ ವರದಿ ತಿಳಿಸಿದೆ.

ಇದನ್ನು ಓದಿ; ಕೇರಳ: ದೇವಸ್ಥಾನದ ಆವರಣದಲ್ಲಿ ಆರೆಸ್ಸೆಸ್ಸ್‌ಗೆ ಶಸ್ತ್ರಾಸ್ತ್ರ ತರಬೇತಿಗೆ ನಿಷೇಧಿಸಿದ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...