Homeಸಿನಿಮಾಕ್ರೀಡೆ16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

- Advertisement -
- Advertisement -

ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದ ಭಾರತೀಯ ಫುಟ್ಬಾಲ್‌‌ ತಂಡವನ್ನು ‘ಪ್ರೇರಿಸಲು’ ಭಾರತ ಫುಟ್ಬಾಲ್ ಫೆಡರೇಶನ್ (AIFF) 16 ಲಕ್ಷ ರೂ. ಪಾವತಿಸಿ ಜ್ಯೋತಿಷಿಯನ್ನು ನೇಮಿಸಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ. ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತೀಯ ಫುಟ್ಬಾಲ್‌‌ ತಂಡ ಇತ್ತೀಚೆಗೆ ಸ್ಥಾನ ಪಡೆದಿತ್ತು. ಸುನಿಲ್ ಛೇತ್ರಿ ನೇತೃತ್ವದ ತಂಡವು ಕ್ವಾಲಿಫೈಯರ್‌ನ ಗುಂಪಿನಲ್ಲೇ ಅಗ್ರಸ್ಥಾನದಲ್ಲಿದೆ.

“ಏಷ್ಯನ್ ಕಪ್‌ಗೆ ಮುಂಚಿತವಾಗಿ ರಾಷ್ಟ್ರೀಯ ತಂಡಕ್ಕೆ ಪ್ರೇರಕರನ್ನು ನೇಮಿಸಲಾಯಿತು. ಆದರೆ ಪ್ರೇರೇಪಣೆಗೆ ತೊಡಗಿಸಿಕೊಂಡಿದ್ದ ಕಂಪನಿಯು ಜ್ಯೋತಿಷ್ಯ ಸಂಸ್ಥೆ ಎಂಬುದು ನಂತರ ಬೆಳಕಿಗೆ ಬಂದಿದೆ” ಎಂದು ತಂಡದ ಮೂಲಗಳು ತಿಳಿಸಿದೆ ಎಂದು ಪಿಟಿಐ ಸುದ್ದಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾಗಿ ಹೇಳುವುದಾದರೆ, ತಂಡವನ್ನು ಪ್ರೇರೇಪಿಸಲು ಜ್ಯೋತಿಷಿಯನ್ನು ನೇಮಿಸಲಾಗಿದೆ. ಅವರಿಗೆ 16 ಲಕ್ಷದಷ್ಟು ಬೃಹತ್ ಮೊತ್ತವನ್ನು ಪಾವತಿಸಲಾಗಿದೆ” ಎಂದು ಮೂಲಗಳು ಹೇಳಿವೆ. ಜ್ಯೋತಿಷ್ಯ ಸಂಸ್ಥೆಯು ಭಾರತೀಯ ಫುಟ್ಬಾಲ್‌‌ ಆಟಗಾರರ ಜೊತೆಗೆ ಮೂರು ಸಭೆಗಳನ್ನು ನಡೆಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ: ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಈ ಬಗ್ಗೆ ಕೊಲ್ಕತ್ತಾದ ಮೂಲದ ಆಟಗಾರರೊಬ್ಬರು ಪ್ರತಿಕ್ರಿಯಿಸಿ, “ನಾನು ತಡವಾಗಿ ತಂಡವನ್ನು ಸೇರಿಕೊಂಡಿದ್ದರಿಂದ, ಕನಿಷ್ಠ ಈ ಬಗ್ಗೆ ನಾನು ಕೇಳೂ ಇಲ್ಲ” ಎಂದು ತಿಳಿಸಿದ್ದಾರೆ. ಭಾರತ ಫುಟ್ಬಾಲ್ ಫೆಡರೇಶನ್‌ನ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಂದೋ ಧರ್ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಭಾರತದ ಮಾಜಿ ಗೋಲ್‌ಕೀಪರ್ ತನ್ಮಯ್‌ ಬೋಸ್ ಈ ವಿಚಾರವನ್ನು ಲೇವಡಿ ಮಾಡಿದ್ದು, ಭಾರತ ಫುಟ್ಬಾಲ್ ಫೆಡರೇಶನ್‌ ನಗೆಪಾಟಲೀಗೀಡಾಗಿದ್ದಕ್ಕೆ ತರಾಟೆಗೆ ಪಡೆದಿದ್ದಾರೆ.

“ಭಾರತ ಫುಟ್ಬಾಲ್ ಫೆಡರೇಶನ್‌ ಸರಿಯಾದ ಯೂತ್ ಲೀಗ್‌ಗಳನ್ನು ನಡೆಸಲು ಪದೇ ಪದೇ ವಿಫಲವಾಗಿದೆ. ಇದೇ ಸಮಯದಲ್ಲಿ ಅನೇಕ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಮುಚ್ಚುವಂತಾಯಿತು. ಈ ರೀತಿಯ ಘಟನೆಗಳು ಭಾರತೀಯ ಫುಟ್ಬಾಲ್‌‌ನ ಪ್ರತಿಷ್ಠೆಯನ್ನು ಇನ್ನಷ್ಟು ಕೆಡಿಸುತ್ತದೆ” ಎಂದು ಬೋಸ್ ತಿಳಿಸಿದ್ದಾರೆ.

“ಈ ಭಯಾನಕ ಘಟನೆಯ ಆಳಕ್ಕೆ ಹೋಗಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಮತ್ತು ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಇಂತಹ ಅನೇಕ ಹಗರಣಗಳು ಹೊರಗೆ ಬರಲು ಕಾಯುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸುನಿಲ್ ಛೇತ್ರಿ ನೇತೃತ್ವದ ತಂಡವು ತನ್ನ ಅತ್ಯುತ್ತಮ ಏಷ್ಯನ್ ಕಪ್ ಅಭಿಯಾನವನ್ನು ದಾಖಲಿಸಿದೆ. 2023 ರ AFC ಏಷ್ಯನ್ ಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತವೂ ತನ್ನ ಸ್ಥಾನವನ್ನು ಖಚಿತ ಪಡಿಸಿದೆ. ಈ ಸ್ಪರ್ಧೆಯ ಫೈನಲ್‌ಗಳು ಸುಮಾರು ಒಂದು ವರ್ಷದ ನಂತರ ಜೂನ್ 16, 2023 ರಂದು ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...