Homeಸಿನಿಮಾಕ್ರೀಡೆ16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

- Advertisement -
- Advertisement -

ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದ ಭಾರತೀಯ ಫುಟ್ಬಾಲ್‌‌ ತಂಡವನ್ನು ‘ಪ್ರೇರಿಸಲು’ ಭಾರತ ಫುಟ್ಬಾಲ್ ಫೆಡರೇಶನ್ (AIFF) 16 ಲಕ್ಷ ರೂ. ಪಾವತಿಸಿ ಜ್ಯೋತಿಷಿಯನ್ನು ನೇಮಿಸಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ. ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತೀಯ ಫುಟ್ಬಾಲ್‌‌ ತಂಡ ಇತ್ತೀಚೆಗೆ ಸ್ಥಾನ ಪಡೆದಿತ್ತು. ಸುನಿಲ್ ಛೇತ್ರಿ ನೇತೃತ್ವದ ತಂಡವು ಕ್ವಾಲಿಫೈಯರ್‌ನ ಗುಂಪಿನಲ್ಲೇ ಅಗ್ರಸ್ಥಾನದಲ್ಲಿದೆ.

“ಏಷ್ಯನ್ ಕಪ್‌ಗೆ ಮುಂಚಿತವಾಗಿ ರಾಷ್ಟ್ರೀಯ ತಂಡಕ್ಕೆ ಪ್ರೇರಕರನ್ನು ನೇಮಿಸಲಾಯಿತು. ಆದರೆ ಪ್ರೇರೇಪಣೆಗೆ ತೊಡಗಿಸಿಕೊಂಡಿದ್ದ ಕಂಪನಿಯು ಜ್ಯೋತಿಷ್ಯ ಸಂಸ್ಥೆ ಎಂಬುದು ನಂತರ ಬೆಳಕಿಗೆ ಬಂದಿದೆ” ಎಂದು ತಂಡದ ಮೂಲಗಳು ತಿಳಿಸಿದೆ ಎಂದು ಪಿಟಿಐ ಸುದ್ದಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾಗಿ ಹೇಳುವುದಾದರೆ, ತಂಡವನ್ನು ಪ್ರೇರೇಪಿಸಲು ಜ್ಯೋತಿಷಿಯನ್ನು ನೇಮಿಸಲಾಗಿದೆ. ಅವರಿಗೆ 16 ಲಕ್ಷದಷ್ಟು ಬೃಹತ್ ಮೊತ್ತವನ್ನು ಪಾವತಿಸಲಾಗಿದೆ” ಎಂದು ಮೂಲಗಳು ಹೇಳಿವೆ. ಜ್ಯೋತಿಷ್ಯ ಸಂಸ್ಥೆಯು ಭಾರತೀಯ ಫುಟ್ಬಾಲ್‌‌ ಆಟಗಾರರ ಜೊತೆಗೆ ಮೂರು ಸಭೆಗಳನ್ನು ನಡೆಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ: ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಈ ಬಗ್ಗೆ ಕೊಲ್ಕತ್ತಾದ ಮೂಲದ ಆಟಗಾರರೊಬ್ಬರು ಪ್ರತಿಕ್ರಿಯಿಸಿ, “ನಾನು ತಡವಾಗಿ ತಂಡವನ್ನು ಸೇರಿಕೊಂಡಿದ್ದರಿಂದ, ಕನಿಷ್ಠ ಈ ಬಗ್ಗೆ ನಾನು ಕೇಳೂ ಇಲ್ಲ” ಎಂದು ತಿಳಿಸಿದ್ದಾರೆ. ಭಾರತ ಫುಟ್ಬಾಲ್ ಫೆಡರೇಶನ್‌ನ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಂದೋ ಧರ್ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಭಾರತದ ಮಾಜಿ ಗೋಲ್‌ಕೀಪರ್ ತನ್ಮಯ್‌ ಬೋಸ್ ಈ ವಿಚಾರವನ್ನು ಲೇವಡಿ ಮಾಡಿದ್ದು, ಭಾರತ ಫುಟ್ಬಾಲ್ ಫೆಡರೇಶನ್‌ ನಗೆಪಾಟಲೀಗೀಡಾಗಿದ್ದಕ್ಕೆ ತರಾಟೆಗೆ ಪಡೆದಿದ್ದಾರೆ.

“ಭಾರತ ಫುಟ್ಬಾಲ್ ಫೆಡರೇಶನ್‌ ಸರಿಯಾದ ಯೂತ್ ಲೀಗ್‌ಗಳನ್ನು ನಡೆಸಲು ಪದೇ ಪದೇ ವಿಫಲವಾಗಿದೆ. ಇದೇ ಸಮಯದಲ್ಲಿ ಅನೇಕ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಮುಚ್ಚುವಂತಾಯಿತು. ಈ ರೀತಿಯ ಘಟನೆಗಳು ಭಾರತೀಯ ಫುಟ್ಬಾಲ್‌‌ನ ಪ್ರತಿಷ್ಠೆಯನ್ನು ಇನ್ನಷ್ಟು ಕೆಡಿಸುತ್ತದೆ” ಎಂದು ಬೋಸ್ ತಿಳಿಸಿದ್ದಾರೆ.

“ಈ ಭಯಾನಕ ಘಟನೆಯ ಆಳಕ್ಕೆ ಹೋಗಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಮತ್ತು ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಇಂತಹ ಅನೇಕ ಹಗರಣಗಳು ಹೊರಗೆ ಬರಲು ಕಾಯುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸುನಿಲ್ ಛೇತ್ರಿ ನೇತೃತ್ವದ ತಂಡವು ತನ್ನ ಅತ್ಯುತ್ತಮ ಏಷ್ಯನ್ ಕಪ್ ಅಭಿಯಾನವನ್ನು ದಾಖಲಿಸಿದೆ. 2023 ರ AFC ಏಷ್ಯನ್ ಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತವೂ ತನ್ನ ಸ್ಥಾನವನ್ನು ಖಚಿತ ಪಡಿಸಿದೆ. ಈ ಸ್ಪರ್ಧೆಯ ಫೈನಲ್‌ಗಳು ಸುಮಾರು ಒಂದು ವರ್ಷದ ನಂತರ ಜೂನ್ 16, 2023 ರಂದು ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...