Homeಸಿನಿಮಾಕ್ರೀಡೆ16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

- Advertisement -
- Advertisement -

ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದ ಭಾರತೀಯ ಫುಟ್ಬಾಲ್‌‌ ತಂಡವನ್ನು ‘ಪ್ರೇರಿಸಲು’ ಭಾರತ ಫುಟ್ಬಾಲ್ ಫೆಡರೇಶನ್ (AIFF) 16 ಲಕ್ಷ ರೂ. ಪಾವತಿಸಿ ಜ್ಯೋತಿಷಿಯನ್ನು ನೇಮಿಸಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ. ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತೀಯ ಫುಟ್ಬಾಲ್‌‌ ತಂಡ ಇತ್ತೀಚೆಗೆ ಸ್ಥಾನ ಪಡೆದಿತ್ತು. ಸುನಿಲ್ ಛೇತ್ರಿ ನೇತೃತ್ವದ ತಂಡವು ಕ್ವಾಲಿಫೈಯರ್‌ನ ಗುಂಪಿನಲ್ಲೇ ಅಗ್ರಸ್ಥಾನದಲ್ಲಿದೆ.

“ಏಷ್ಯನ್ ಕಪ್‌ಗೆ ಮುಂಚಿತವಾಗಿ ರಾಷ್ಟ್ರೀಯ ತಂಡಕ್ಕೆ ಪ್ರೇರಕರನ್ನು ನೇಮಿಸಲಾಯಿತು. ಆದರೆ ಪ್ರೇರೇಪಣೆಗೆ ತೊಡಗಿಸಿಕೊಂಡಿದ್ದ ಕಂಪನಿಯು ಜ್ಯೋತಿಷ್ಯ ಸಂಸ್ಥೆ ಎಂಬುದು ನಂತರ ಬೆಳಕಿಗೆ ಬಂದಿದೆ” ಎಂದು ತಂಡದ ಮೂಲಗಳು ತಿಳಿಸಿದೆ ಎಂದು ಪಿಟಿಐ ಸುದ್ದಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾಗಿ ಹೇಳುವುದಾದರೆ, ತಂಡವನ್ನು ಪ್ರೇರೇಪಿಸಲು ಜ್ಯೋತಿಷಿಯನ್ನು ನೇಮಿಸಲಾಗಿದೆ. ಅವರಿಗೆ 16 ಲಕ್ಷದಷ್ಟು ಬೃಹತ್ ಮೊತ್ತವನ್ನು ಪಾವತಿಸಲಾಗಿದೆ” ಎಂದು ಮೂಲಗಳು ಹೇಳಿವೆ. ಜ್ಯೋತಿಷ್ಯ ಸಂಸ್ಥೆಯು ಭಾರತೀಯ ಫುಟ್ಬಾಲ್‌‌ ಆಟಗಾರರ ಜೊತೆಗೆ ಮೂರು ಸಭೆಗಳನ್ನು ನಡೆಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ: ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಈ ಬಗ್ಗೆ ಕೊಲ್ಕತ್ತಾದ ಮೂಲದ ಆಟಗಾರರೊಬ್ಬರು ಪ್ರತಿಕ್ರಿಯಿಸಿ, “ನಾನು ತಡವಾಗಿ ತಂಡವನ್ನು ಸೇರಿಕೊಂಡಿದ್ದರಿಂದ, ಕನಿಷ್ಠ ಈ ಬಗ್ಗೆ ನಾನು ಕೇಳೂ ಇಲ್ಲ” ಎಂದು ತಿಳಿಸಿದ್ದಾರೆ. ಭಾರತ ಫುಟ್ಬಾಲ್ ಫೆಡರೇಶನ್‌ನ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಂದೋ ಧರ್ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಭಾರತದ ಮಾಜಿ ಗೋಲ್‌ಕೀಪರ್ ತನ್ಮಯ್‌ ಬೋಸ್ ಈ ವಿಚಾರವನ್ನು ಲೇವಡಿ ಮಾಡಿದ್ದು, ಭಾರತ ಫುಟ್ಬಾಲ್ ಫೆಡರೇಶನ್‌ ನಗೆಪಾಟಲೀಗೀಡಾಗಿದ್ದಕ್ಕೆ ತರಾಟೆಗೆ ಪಡೆದಿದ್ದಾರೆ.

“ಭಾರತ ಫುಟ್ಬಾಲ್ ಫೆಡರೇಶನ್‌ ಸರಿಯಾದ ಯೂತ್ ಲೀಗ್‌ಗಳನ್ನು ನಡೆಸಲು ಪದೇ ಪದೇ ವಿಫಲವಾಗಿದೆ. ಇದೇ ಸಮಯದಲ್ಲಿ ಅನೇಕ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಮುಚ್ಚುವಂತಾಯಿತು. ಈ ರೀತಿಯ ಘಟನೆಗಳು ಭಾರತೀಯ ಫುಟ್ಬಾಲ್‌‌ನ ಪ್ರತಿಷ್ಠೆಯನ್ನು ಇನ್ನಷ್ಟು ಕೆಡಿಸುತ್ತದೆ” ಎಂದು ಬೋಸ್ ತಿಳಿಸಿದ್ದಾರೆ.

“ಈ ಭಯಾನಕ ಘಟನೆಯ ಆಳಕ್ಕೆ ಹೋಗಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಮತ್ತು ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಇಂತಹ ಅನೇಕ ಹಗರಣಗಳು ಹೊರಗೆ ಬರಲು ಕಾಯುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸುನಿಲ್ ಛೇತ್ರಿ ನೇತೃತ್ವದ ತಂಡವು ತನ್ನ ಅತ್ಯುತ್ತಮ ಏಷ್ಯನ್ ಕಪ್ ಅಭಿಯಾನವನ್ನು ದಾಖಲಿಸಿದೆ. 2023 ರ AFC ಏಷ್ಯನ್ ಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತವೂ ತನ್ನ ಸ್ಥಾನವನ್ನು ಖಚಿತ ಪಡಿಸಿದೆ. ಈ ಸ್ಪರ್ಧೆಯ ಫೈನಲ್‌ಗಳು ಸುಮಾರು ಒಂದು ವರ್ಷದ ನಂತರ ಜೂನ್ 16, 2023 ರಂದು ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...