Homeಸಿನಿಮಾಕ್ರೀಡೆ16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

- Advertisement -
- Advertisement -

ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದ ಭಾರತೀಯ ಫುಟ್ಬಾಲ್‌‌ ತಂಡವನ್ನು ‘ಪ್ರೇರಿಸಲು’ ಭಾರತ ಫುಟ್ಬಾಲ್ ಫೆಡರೇಶನ್ (AIFF) 16 ಲಕ್ಷ ರೂ. ಪಾವತಿಸಿ ಜ್ಯೋತಿಷಿಯನ್ನು ನೇಮಿಸಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ. ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತೀಯ ಫುಟ್ಬಾಲ್‌‌ ತಂಡ ಇತ್ತೀಚೆಗೆ ಸ್ಥಾನ ಪಡೆದಿತ್ತು. ಸುನಿಲ್ ಛೇತ್ರಿ ನೇತೃತ್ವದ ತಂಡವು ಕ್ವಾಲಿಫೈಯರ್‌ನ ಗುಂಪಿನಲ್ಲೇ ಅಗ್ರಸ್ಥಾನದಲ್ಲಿದೆ.

“ಏಷ್ಯನ್ ಕಪ್‌ಗೆ ಮುಂಚಿತವಾಗಿ ರಾಷ್ಟ್ರೀಯ ತಂಡಕ್ಕೆ ಪ್ರೇರಕರನ್ನು ನೇಮಿಸಲಾಯಿತು. ಆದರೆ ಪ್ರೇರೇಪಣೆಗೆ ತೊಡಗಿಸಿಕೊಂಡಿದ್ದ ಕಂಪನಿಯು ಜ್ಯೋತಿಷ್ಯ ಸಂಸ್ಥೆ ಎಂಬುದು ನಂತರ ಬೆಳಕಿಗೆ ಬಂದಿದೆ” ಎಂದು ತಂಡದ ಮೂಲಗಳು ತಿಳಿಸಿದೆ ಎಂದು ಪಿಟಿಐ ಸುದ್ದಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾಗಿ ಹೇಳುವುದಾದರೆ, ತಂಡವನ್ನು ಪ್ರೇರೇಪಿಸಲು ಜ್ಯೋತಿಷಿಯನ್ನು ನೇಮಿಸಲಾಗಿದೆ. ಅವರಿಗೆ 16 ಲಕ್ಷದಷ್ಟು ಬೃಹತ್ ಮೊತ್ತವನ್ನು ಪಾವತಿಸಲಾಗಿದೆ” ಎಂದು ಮೂಲಗಳು ಹೇಳಿವೆ. ಜ್ಯೋತಿಷ್ಯ ಸಂಸ್ಥೆಯು ಭಾರತೀಯ ಫುಟ್ಬಾಲ್‌‌ ಆಟಗಾರರ ಜೊತೆಗೆ ಮೂರು ಸಭೆಗಳನ್ನು ನಡೆಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ: ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಈ ಬಗ್ಗೆ ಕೊಲ್ಕತ್ತಾದ ಮೂಲದ ಆಟಗಾರರೊಬ್ಬರು ಪ್ರತಿಕ್ರಿಯಿಸಿ, “ನಾನು ತಡವಾಗಿ ತಂಡವನ್ನು ಸೇರಿಕೊಂಡಿದ್ದರಿಂದ, ಕನಿಷ್ಠ ಈ ಬಗ್ಗೆ ನಾನು ಕೇಳೂ ಇಲ್ಲ” ಎಂದು ತಿಳಿಸಿದ್ದಾರೆ. ಭಾರತ ಫುಟ್ಬಾಲ್ ಫೆಡರೇಶನ್‌ನ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಂದೋ ಧರ್ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಭಾರತದ ಮಾಜಿ ಗೋಲ್‌ಕೀಪರ್ ತನ್ಮಯ್‌ ಬೋಸ್ ಈ ವಿಚಾರವನ್ನು ಲೇವಡಿ ಮಾಡಿದ್ದು, ಭಾರತ ಫುಟ್ಬಾಲ್ ಫೆಡರೇಶನ್‌ ನಗೆಪಾಟಲೀಗೀಡಾಗಿದ್ದಕ್ಕೆ ತರಾಟೆಗೆ ಪಡೆದಿದ್ದಾರೆ.

“ಭಾರತ ಫುಟ್ಬಾಲ್ ಫೆಡರೇಶನ್‌ ಸರಿಯಾದ ಯೂತ್ ಲೀಗ್‌ಗಳನ್ನು ನಡೆಸಲು ಪದೇ ಪದೇ ವಿಫಲವಾಗಿದೆ. ಇದೇ ಸಮಯದಲ್ಲಿ ಅನೇಕ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಮುಚ್ಚುವಂತಾಯಿತು. ಈ ರೀತಿಯ ಘಟನೆಗಳು ಭಾರತೀಯ ಫುಟ್ಬಾಲ್‌‌ನ ಪ್ರತಿಷ್ಠೆಯನ್ನು ಇನ್ನಷ್ಟು ಕೆಡಿಸುತ್ತದೆ” ಎಂದು ಬೋಸ್ ತಿಳಿಸಿದ್ದಾರೆ.

“ಈ ಭಯಾನಕ ಘಟನೆಯ ಆಳಕ್ಕೆ ಹೋಗಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಮತ್ತು ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಇಂತಹ ಅನೇಕ ಹಗರಣಗಳು ಹೊರಗೆ ಬರಲು ಕಾಯುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸುನಿಲ್ ಛೇತ್ರಿ ನೇತೃತ್ವದ ತಂಡವು ತನ್ನ ಅತ್ಯುತ್ತಮ ಏಷ್ಯನ್ ಕಪ್ ಅಭಿಯಾನವನ್ನು ದಾಖಲಿಸಿದೆ. 2023 ರ AFC ಏಷ್ಯನ್ ಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತವೂ ತನ್ನ ಸ್ಥಾನವನ್ನು ಖಚಿತ ಪಡಿಸಿದೆ. ಈ ಸ್ಪರ್ಧೆಯ ಫೈನಲ್‌ಗಳು ಸುಮಾರು ಒಂದು ವರ್ಷದ ನಂತರ ಜೂನ್ 16, 2023 ರಂದು ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...