Homeಸಿನಿಮಾಕ್ರೀಡೆ16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

- Advertisement -
- Advertisement -

ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದ ಭಾರತೀಯ ಫುಟ್ಬಾಲ್‌‌ ತಂಡವನ್ನು ‘ಪ್ರೇರಿಸಲು’ ಭಾರತ ಫುಟ್ಬಾಲ್ ಫೆಡರೇಶನ್ (AIFF) 16 ಲಕ್ಷ ರೂ. ಪಾವತಿಸಿ ಜ್ಯೋತಿಷಿಯನ್ನು ನೇಮಿಸಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ. ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತೀಯ ಫುಟ್ಬಾಲ್‌‌ ತಂಡ ಇತ್ತೀಚೆಗೆ ಸ್ಥಾನ ಪಡೆದಿತ್ತು. ಸುನಿಲ್ ಛೇತ್ರಿ ನೇತೃತ್ವದ ತಂಡವು ಕ್ವಾಲಿಫೈಯರ್‌ನ ಗುಂಪಿನಲ್ಲೇ ಅಗ್ರಸ್ಥಾನದಲ್ಲಿದೆ.

“ಏಷ್ಯನ್ ಕಪ್‌ಗೆ ಮುಂಚಿತವಾಗಿ ರಾಷ್ಟ್ರೀಯ ತಂಡಕ್ಕೆ ಪ್ರೇರಕರನ್ನು ನೇಮಿಸಲಾಯಿತು. ಆದರೆ ಪ್ರೇರೇಪಣೆಗೆ ತೊಡಗಿಸಿಕೊಂಡಿದ್ದ ಕಂಪನಿಯು ಜ್ಯೋತಿಷ್ಯ ಸಂಸ್ಥೆ ಎಂಬುದು ನಂತರ ಬೆಳಕಿಗೆ ಬಂದಿದೆ” ಎಂದು ತಂಡದ ಮೂಲಗಳು ತಿಳಿಸಿದೆ ಎಂದು ಪಿಟಿಐ ಸುದ್ದಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾಗಿ ಹೇಳುವುದಾದರೆ, ತಂಡವನ್ನು ಪ್ರೇರೇಪಿಸಲು ಜ್ಯೋತಿಷಿಯನ್ನು ನೇಮಿಸಲಾಗಿದೆ. ಅವರಿಗೆ 16 ಲಕ್ಷದಷ್ಟು ಬೃಹತ್ ಮೊತ್ತವನ್ನು ಪಾವತಿಸಲಾಗಿದೆ” ಎಂದು ಮೂಲಗಳು ಹೇಳಿವೆ. ಜ್ಯೋತಿಷ್ಯ ಸಂಸ್ಥೆಯು ಭಾರತೀಯ ಫುಟ್ಬಾಲ್‌‌ ಆಟಗಾರರ ಜೊತೆಗೆ ಮೂರು ಸಭೆಗಳನ್ನು ನಡೆಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ: ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಈ ಬಗ್ಗೆ ಕೊಲ್ಕತ್ತಾದ ಮೂಲದ ಆಟಗಾರರೊಬ್ಬರು ಪ್ರತಿಕ್ರಿಯಿಸಿ, “ನಾನು ತಡವಾಗಿ ತಂಡವನ್ನು ಸೇರಿಕೊಂಡಿದ್ದರಿಂದ, ಕನಿಷ್ಠ ಈ ಬಗ್ಗೆ ನಾನು ಕೇಳೂ ಇಲ್ಲ” ಎಂದು ತಿಳಿಸಿದ್ದಾರೆ. ಭಾರತ ಫುಟ್ಬಾಲ್ ಫೆಡರೇಶನ್‌ನ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಂದೋ ಧರ್ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಭಾರತದ ಮಾಜಿ ಗೋಲ್‌ಕೀಪರ್ ತನ್ಮಯ್‌ ಬೋಸ್ ಈ ವಿಚಾರವನ್ನು ಲೇವಡಿ ಮಾಡಿದ್ದು, ಭಾರತ ಫುಟ್ಬಾಲ್ ಫೆಡರೇಶನ್‌ ನಗೆಪಾಟಲೀಗೀಡಾಗಿದ್ದಕ್ಕೆ ತರಾಟೆಗೆ ಪಡೆದಿದ್ದಾರೆ.

“ಭಾರತ ಫುಟ್ಬಾಲ್ ಫೆಡರೇಶನ್‌ ಸರಿಯಾದ ಯೂತ್ ಲೀಗ್‌ಗಳನ್ನು ನಡೆಸಲು ಪದೇ ಪದೇ ವಿಫಲವಾಗಿದೆ. ಇದೇ ಸಮಯದಲ್ಲಿ ಅನೇಕ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಮುಚ್ಚುವಂತಾಯಿತು. ಈ ರೀತಿಯ ಘಟನೆಗಳು ಭಾರತೀಯ ಫುಟ್ಬಾಲ್‌‌ನ ಪ್ರತಿಷ್ಠೆಯನ್ನು ಇನ್ನಷ್ಟು ಕೆಡಿಸುತ್ತದೆ” ಎಂದು ಬೋಸ್ ತಿಳಿಸಿದ್ದಾರೆ.

“ಈ ಭಯಾನಕ ಘಟನೆಯ ಆಳಕ್ಕೆ ಹೋಗಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಮತ್ತು ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಇಂತಹ ಅನೇಕ ಹಗರಣಗಳು ಹೊರಗೆ ಬರಲು ಕಾಯುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸುನಿಲ್ ಛೇತ್ರಿ ನೇತೃತ್ವದ ತಂಡವು ತನ್ನ ಅತ್ಯುತ್ತಮ ಏಷ್ಯನ್ ಕಪ್ ಅಭಿಯಾನವನ್ನು ದಾಖಲಿಸಿದೆ. 2023 ರ AFC ಏಷ್ಯನ್ ಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತವೂ ತನ್ನ ಸ್ಥಾನವನ್ನು ಖಚಿತ ಪಡಿಸಿದೆ. ಈ ಸ್ಪರ್ಧೆಯ ಫೈನಲ್‌ಗಳು ಸುಮಾರು ಒಂದು ವರ್ಷದ ನಂತರ ಜೂನ್ 16, 2023 ರಂದು ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...