Homeಸಿನಿಮಾಕ್ರೀಡೆ16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

16 ಲಕ್ಷ ರೂ ಪಾವತಿಸಿ ತಂಡಕ್ಕೆ ಜ್ಯೋತಿಷಿಯನ್ನು ನೇಮಿಸಿದ ಭಾರತೀಯ ಫುಟ್ಬಾಲ್‌‌ ಫೆಡೆರೇಷನ್‌!

- Advertisement -
- Advertisement -

ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿದ ಭಾರತೀಯ ಫುಟ್ಬಾಲ್‌‌ ತಂಡವನ್ನು ‘ಪ್ರೇರಿಸಲು’ ಭಾರತ ಫುಟ್ಬಾಲ್ ಫೆಡರೇಶನ್ (AIFF) 16 ಲಕ್ಷ ರೂ. ಪಾವತಿಸಿ ಜ್ಯೋತಿಷಿಯನ್ನು ನೇಮಿಸಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ. ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತೀಯ ಫುಟ್ಬಾಲ್‌‌ ತಂಡ ಇತ್ತೀಚೆಗೆ ಸ್ಥಾನ ಪಡೆದಿತ್ತು. ಸುನಿಲ್ ಛೇತ್ರಿ ನೇತೃತ್ವದ ತಂಡವು ಕ್ವಾಲಿಫೈಯರ್‌ನ ಗುಂಪಿನಲ್ಲೇ ಅಗ್ರಸ್ಥಾನದಲ್ಲಿದೆ.

“ಏಷ್ಯನ್ ಕಪ್‌ಗೆ ಮುಂಚಿತವಾಗಿ ರಾಷ್ಟ್ರೀಯ ತಂಡಕ್ಕೆ ಪ್ರೇರಕರನ್ನು ನೇಮಿಸಲಾಯಿತು. ಆದರೆ ಪ್ರೇರೇಪಣೆಗೆ ತೊಡಗಿಸಿಕೊಂಡಿದ್ದ ಕಂಪನಿಯು ಜ್ಯೋತಿಷ್ಯ ಸಂಸ್ಥೆ ಎಂಬುದು ನಂತರ ಬೆಳಕಿಗೆ ಬಂದಿದೆ” ಎಂದು ತಂಡದ ಮೂಲಗಳು ತಿಳಿಸಿದೆ ಎಂದು ಪಿಟಿಐ ಸುದ್ದಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾಗಿ ಹೇಳುವುದಾದರೆ, ತಂಡವನ್ನು ಪ್ರೇರೇಪಿಸಲು ಜ್ಯೋತಿಷಿಯನ್ನು ನೇಮಿಸಲಾಗಿದೆ. ಅವರಿಗೆ 16 ಲಕ್ಷದಷ್ಟು ಬೃಹತ್ ಮೊತ್ತವನ್ನು ಪಾವತಿಸಲಾಗಿದೆ” ಎಂದು ಮೂಲಗಳು ಹೇಳಿವೆ. ಜ್ಯೋತಿಷ್ಯ ಸಂಸ್ಥೆಯು ಭಾರತೀಯ ಫುಟ್ಬಾಲ್‌‌ ಆಟಗಾರರ ಜೊತೆಗೆ ಮೂರು ಸಭೆಗಳನ್ನು ನಡೆಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಇದನ್ನೂ ಓದಿ: ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಈ ಬಗ್ಗೆ ಕೊಲ್ಕತ್ತಾದ ಮೂಲದ ಆಟಗಾರರೊಬ್ಬರು ಪ್ರತಿಕ್ರಿಯಿಸಿ, “ನಾನು ತಡವಾಗಿ ತಂಡವನ್ನು ಸೇರಿಕೊಂಡಿದ್ದರಿಂದ, ಕನಿಷ್ಠ ಈ ಬಗ್ಗೆ ನಾನು ಕೇಳೂ ಇಲ್ಲ” ಎಂದು ತಿಳಿಸಿದ್ದಾರೆ. ಭಾರತ ಫುಟ್ಬಾಲ್ ಫೆಡರೇಶನ್‌ನ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುನಂದೋ ಧರ್ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಭಾರತದ ಮಾಜಿ ಗೋಲ್‌ಕೀಪರ್ ತನ್ಮಯ್‌ ಬೋಸ್ ಈ ವಿಚಾರವನ್ನು ಲೇವಡಿ ಮಾಡಿದ್ದು, ಭಾರತ ಫುಟ್ಬಾಲ್ ಫೆಡರೇಶನ್‌ ನಗೆಪಾಟಲೀಗೀಡಾಗಿದ್ದಕ್ಕೆ ತರಾಟೆಗೆ ಪಡೆದಿದ್ದಾರೆ.

“ಭಾರತ ಫುಟ್ಬಾಲ್ ಫೆಡರೇಶನ್‌ ಸರಿಯಾದ ಯೂತ್ ಲೀಗ್‌ಗಳನ್ನು ನಡೆಸಲು ಪದೇ ಪದೇ ವಿಫಲವಾಗಿದೆ. ಇದೇ ಸಮಯದಲ್ಲಿ ಅನೇಕ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಮುಚ್ಚುವಂತಾಯಿತು. ಈ ರೀತಿಯ ಘಟನೆಗಳು ಭಾರತೀಯ ಫುಟ್ಬಾಲ್‌‌ನ ಪ್ರತಿಷ್ಠೆಯನ್ನು ಇನ್ನಷ್ಟು ಕೆಡಿಸುತ್ತದೆ” ಎಂದು ಬೋಸ್ ತಿಳಿಸಿದ್ದಾರೆ.

“ಈ ಭಯಾನಕ ಘಟನೆಯ ಆಳಕ್ಕೆ ಹೋಗಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಮತ್ತು ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಇಂತಹ ಅನೇಕ ಹಗರಣಗಳು ಹೊರಗೆ ಬರಲು ಕಾಯುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸುನಿಲ್ ಛೇತ್ರಿ ನೇತೃತ್ವದ ತಂಡವು ತನ್ನ ಅತ್ಯುತ್ತಮ ಏಷ್ಯನ್ ಕಪ್ ಅಭಿಯಾನವನ್ನು ದಾಖಲಿಸಿದೆ. 2023 ರ AFC ಏಷ್ಯನ್ ಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತವೂ ತನ್ನ ಸ್ಥಾನವನ್ನು ಖಚಿತ ಪಡಿಸಿದೆ. ಈ ಸ್ಪರ್ಧೆಯ ಫೈನಲ್‌ಗಳು ಸುಮಾರು ಒಂದು ವರ್ಷದ ನಂತರ ಜೂನ್ 16, 2023 ರಂದು ಪ್ರಾರಂಭವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....