Homeಮುಖಪುಟ'ಹಿಂದುತ್ವ ವಾಚ್' ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

- Advertisement -
- Advertisement -

ಮುಸ್ಲಿಮರ, ಅಲ್ಪಸಂಖ್ಯಾತರ, ಹಿಂದುಳಿದ ಸಮುದಾಯಗಳ ಮೇಲೆ ನಡೆಯುತ್ತಿದ್ದ ದಾಳಿ, ದೌರ್ಜನ್ಯದ ಕುರಿತು ಪೋಸ್ಟ್‌ ಮಾಡುತ್ತಿದ್ದ ‘ಹಿಂದುತ್ವ ವಾಚ್ ಇನ್‌’ ಎಂಬ ಎಕ್ಸ್‌ ಖಾತೆಯನ್ನು ಕೇಂದ್ರ ಸರಕಾರದ ಬೇಡಿಕೆಯ ಮೇರೆಗೆ ಜನವರಿ 16ರಿಂದ ಭಾರತದಲ್ಲಿ ನಿರ್ಬಂಧಿಸಲಾಗಿದೆ.

ಖಾತೆಯ ಸಂಸ್ಥಾಪಕ ರಖೀಬ್ ಹಮೀದ್ ನಾಯಕ್ ಅವರು ಮಂಗಳವಾರ ಬೆಳವಣಿಗೆಯ ಬಗ್ಗೆ ಇಮೇಲ್ ಸ್ವೀಕರಿಸಿದ್ದಾರೆ ಎಂದು ಮಾದ್ಯಮಗಳಿಗೆ ತಿಳಿಸಿದ್ದಾರೆ. ಈ ಖಾತೆಯು ಐಟಿ ಕಾಯ್ದೆಯ ಸೆಕ್ಷನ್‌ಗಳನ್ನು ಉಲ್ಲಂಘಿಸಿದೆ ಎಂದು ಭಾರತ ಸರ್ಕಾರ ಹೇಳಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾದ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್’ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ  ‘ಹಿಂದುತ್ವ ವಾಚ್‌ ಇನ್‌’ನ ಖಾತೆಯನ್ನು ತಡೆಹಿಡಿದಿದೆ. ಮಂಗಳವಾರ ಜನವರಿ 16ರ ಸಂಜೆ ‘ಹಿಂದುತ್ವ ವಾಚ್‌ ಇನ್‌’ ಪೇಜ್‌ಗೆ ನಿರ್ಬಂಧ ವಿಧಿಸಲಾಗಿದೆ. ಖಾತೆಯನ್ನು ಎಕ್ಸ್‌ ನಿರ್ಬಂಧಿಸಿದ ಮೂರು ಗಂಟೆಗಳ ನಂತರ ಅವರು ಈ ಕುರಿತ ಇ-ಮೇಲ್‌ ಸಂದೇಶವನ್ನು ಸ್ವೀಕರಿಸಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ರಖೀಬ್ ಹಮೀದ್ ನಾಯಕ್ ಹೇಳಿದ್ದಾರೆ.

ಖಾತೆಯನ್ನು ನಿರ್ಬಂಧಿಸಿರುವ ಬಗ್ಗೆ ಎಕ್ಸ್‌ ಇ-ಮೇಲ್‌ ಕಳುಹಿಸಿದ್ದು, ಭಾರತ ಸರ್ಕಾರ @HindutvaWatchIn ಖಾತೆಯನ್ನು ತೆಗೆದುಹಾಕಲು ಬೇಡಿಕೆಯನ್ನು ಇಟ್ಟಿದೆ. ಭಾರತದ ಮಾಹಿತಿ ತಂತ್ರಜ್ಞಾನ ಕಾಯಿದೆ-2000ದ ಅಧಿನಿಯಮವನ್ನು ಉಲ್ಲಂಘಿಸಿದ ಅರೋಪವನ್ನು ಮಾಡಿದೆ.

ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ರಖೀಬ್ ಹಮೀದ್, ಪ್ರಧಾನಿ ಮೋದಿ ಆಡಳಿತದ ಇತಿಹಾಸ ಮತ್ತು ಮುಕ್ತ ಪತ್ರಿಕಾ ಮತ್ತು ವಿಮರ್ಶಾತ್ಮಕ ಧ್ವನಿಗಳನ್ನು ನಿಗ್ರಹಿಸುವುದನ್ನು ಗಮನಿಸಿದಾಗ ಇದೇನು ಅಚ್ಚರಿಯಲ್ಲ. ಈ ಕ್ರಮದಿಂದ  ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಭಾರತದಲ್ಲಿ ನಮ್ಮ ಖಾತೆಯ ಮೇಲಿನ ನಿರ್ಬಂಧವು ನಮ್ಮ ಕೆಲಸವನ್ನು ಅಡೆತಡೆಯಿಲ್ಲದೆ ಮುಂದುವರಿಸುವ ನಮ್ಮ ಸಂಕಲ್ಪವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.

ಹಿಂದುತ್ವ ವಾಚ್ ಎಂಬ ಎಕ್ಸ್‌ ಖಾತೆ ಭಾರತದಲ್ಲಿನ ಮೂಲಭೂತವಾದಿ ಹಿಂದೂಗಳು ಮತ್ತು ಹಿಂದುತ್ವ  ಗುಂಪುಗಳಿಂದ ಅಲ್ಪಸಂಖ್ಯಾತ ಮತ್ತು ಅಂಚಿನಲ್ಲಿರುವ ಸಮುದಾಯಗಳ ಸದಸ್ಯರ ಮೇಲೆ ಮತ್ತು ಅವರ ನಂಬಿಕೆಯ ಮೇಲೆ ನಡೆಯುತ್ತಿರುವ ದಾಳಿಯ ವರದಿಗಳನ್ನು ಮಾಡುತ್ತದೆ. ಇದು ಸಂಸ್ಥೆಗಳು ಮತ್ತು ಹಿಂಸಾಚಾರ ಮತ್ತು ಕುಕೃತ್ಯಗಳಿಗೆ ಕಾರಣವಾದ ಜನರನ್ನು ಬಹಿರಂಗಪಡಿಸುವ ಕೆಲಸವನ್ನು ಕೂಡ ಮಾಡುತ್ತಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹಿಂದುತ್ವ ವಾಚ್ ಇನ್‌ ವರದಿಯನ್ನು ಬಿಡುಗಡೆ ಮಾಡಿದ್ದು, 2023ರ ಮೊದಲ ಆರು ತಿಂಗಳುಗಳಲ್ಲಿ ಮುಸ್ಲಿಂ ವಿರೋಧಿ ದ್ವೇಷ ಭಾಷಣವನ್ನು ಒಳಗೊಂಡ 250ಕ್ಕೂ ಹೆಚ್ಚು ದಾಖಲೆಗಳನ್ನು ಬಹಿರಂಗಪಡಿಸಿದೆ. ಅವುಗಳಲ್ಲಿ ಹೆಚ್ಚಿನವು ಭಾರತೀಯ ಜನತಾ ಪಕ್ಷದ ಆಡಳಿತ ಇರುವ ರಾಜ್ಯಗಳದ್ದಾಗಿದೆ. ಮತ್ತು ಅದರಲ್ಲಿ ಸುಮಾರು 70% 2023 ಅಥವಾ 2024ರಲ್ಲಿ ಚುನಾವಣೆಗಳಿದ್ದ ರಾಜ್ಯದಲ್ಲಿ ದ್ವೇಷ ಭಾಷಣವನ್ನು ಮಾಡಲಾಗಿದೆ ಎಂದು ಬಹಿರಂಗಪಡಿಸಿತ್ತು.

ಇದನ್ನು ಓದಿ: ಉತ್ತರಪ್ರದೇಶ: ಬೀದಿ ವ್ಯಾಪಾರಿಯನ್ನು ಥಳಿಸಿ ಹತ್ಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...