Homeಮುಖಪುಟ'ಹಿಂದುತ್ವ ವಾಚ್' ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

- Advertisement -
- Advertisement -

ಮುಸ್ಲಿಮರ, ಅಲ್ಪಸಂಖ್ಯಾತರ, ಹಿಂದುಳಿದ ಸಮುದಾಯಗಳ ಮೇಲೆ ನಡೆಯುತ್ತಿದ್ದ ದಾಳಿ, ದೌರ್ಜನ್ಯದ ಕುರಿತು ಪೋಸ್ಟ್‌ ಮಾಡುತ್ತಿದ್ದ ‘ಹಿಂದುತ್ವ ವಾಚ್ ಇನ್‌’ ಎಂಬ ಎಕ್ಸ್‌ ಖಾತೆಯನ್ನು ಕೇಂದ್ರ ಸರಕಾರದ ಬೇಡಿಕೆಯ ಮೇರೆಗೆ ಜನವರಿ 16ರಿಂದ ಭಾರತದಲ್ಲಿ ನಿರ್ಬಂಧಿಸಲಾಗಿದೆ.

ಖಾತೆಯ ಸಂಸ್ಥಾಪಕ ರಖೀಬ್ ಹಮೀದ್ ನಾಯಕ್ ಅವರು ಮಂಗಳವಾರ ಬೆಳವಣಿಗೆಯ ಬಗ್ಗೆ ಇಮೇಲ್ ಸ್ವೀಕರಿಸಿದ್ದಾರೆ ಎಂದು ಮಾದ್ಯಮಗಳಿಗೆ ತಿಳಿಸಿದ್ದಾರೆ. ಈ ಖಾತೆಯು ಐಟಿ ಕಾಯ್ದೆಯ ಸೆಕ್ಷನ್‌ಗಳನ್ನು ಉಲ್ಲಂಘಿಸಿದೆ ಎಂದು ಭಾರತ ಸರ್ಕಾರ ಹೇಳಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾದ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್’ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ  ‘ಹಿಂದುತ್ವ ವಾಚ್‌ ಇನ್‌’ನ ಖಾತೆಯನ್ನು ತಡೆಹಿಡಿದಿದೆ. ಮಂಗಳವಾರ ಜನವರಿ 16ರ ಸಂಜೆ ‘ಹಿಂದುತ್ವ ವಾಚ್‌ ಇನ್‌’ ಪೇಜ್‌ಗೆ ನಿರ್ಬಂಧ ವಿಧಿಸಲಾಗಿದೆ. ಖಾತೆಯನ್ನು ಎಕ್ಸ್‌ ನಿರ್ಬಂಧಿಸಿದ ಮೂರು ಗಂಟೆಗಳ ನಂತರ ಅವರು ಈ ಕುರಿತ ಇ-ಮೇಲ್‌ ಸಂದೇಶವನ್ನು ಸ್ವೀಕರಿಸಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ರಖೀಬ್ ಹಮೀದ್ ನಾಯಕ್ ಹೇಳಿದ್ದಾರೆ.

ಖಾತೆಯನ್ನು ನಿರ್ಬಂಧಿಸಿರುವ ಬಗ್ಗೆ ಎಕ್ಸ್‌ ಇ-ಮೇಲ್‌ ಕಳುಹಿಸಿದ್ದು, ಭಾರತ ಸರ್ಕಾರ @HindutvaWatchIn ಖಾತೆಯನ್ನು ತೆಗೆದುಹಾಕಲು ಬೇಡಿಕೆಯನ್ನು ಇಟ್ಟಿದೆ. ಭಾರತದ ಮಾಹಿತಿ ತಂತ್ರಜ್ಞಾನ ಕಾಯಿದೆ-2000ದ ಅಧಿನಿಯಮವನ್ನು ಉಲ್ಲಂಘಿಸಿದ ಅರೋಪವನ್ನು ಮಾಡಿದೆ.

ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ರಖೀಬ್ ಹಮೀದ್, ಪ್ರಧಾನಿ ಮೋದಿ ಆಡಳಿತದ ಇತಿಹಾಸ ಮತ್ತು ಮುಕ್ತ ಪತ್ರಿಕಾ ಮತ್ತು ವಿಮರ್ಶಾತ್ಮಕ ಧ್ವನಿಗಳನ್ನು ನಿಗ್ರಹಿಸುವುದನ್ನು ಗಮನಿಸಿದಾಗ ಇದೇನು ಅಚ್ಚರಿಯಲ್ಲ. ಈ ಕ್ರಮದಿಂದ  ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಭಾರತದಲ್ಲಿ ನಮ್ಮ ಖಾತೆಯ ಮೇಲಿನ ನಿರ್ಬಂಧವು ನಮ್ಮ ಕೆಲಸವನ್ನು ಅಡೆತಡೆಯಿಲ್ಲದೆ ಮುಂದುವರಿಸುವ ನಮ್ಮ ಸಂಕಲ್ಪವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.

ಹಿಂದುತ್ವ ವಾಚ್ ಎಂಬ ಎಕ್ಸ್‌ ಖಾತೆ ಭಾರತದಲ್ಲಿನ ಮೂಲಭೂತವಾದಿ ಹಿಂದೂಗಳು ಮತ್ತು ಹಿಂದುತ್ವ  ಗುಂಪುಗಳಿಂದ ಅಲ್ಪಸಂಖ್ಯಾತ ಮತ್ತು ಅಂಚಿನಲ್ಲಿರುವ ಸಮುದಾಯಗಳ ಸದಸ್ಯರ ಮೇಲೆ ಮತ್ತು ಅವರ ನಂಬಿಕೆಯ ಮೇಲೆ ನಡೆಯುತ್ತಿರುವ ದಾಳಿಯ ವರದಿಗಳನ್ನು ಮಾಡುತ್ತದೆ. ಇದು ಸಂಸ್ಥೆಗಳು ಮತ್ತು ಹಿಂಸಾಚಾರ ಮತ್ತು ಕುಕೃತ್ಯಗಳಿಗೆ ಕಾರಣವಾದ ಜನರನ್ನು ಬಹಿರಂಗಪಡಿಸುವ ಕೆಲಸವನ್ನು ಕೂಡ ಮಾಡುತ್ತಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹಿಂದುತ್ವ ವಾಚ್ ಇನ್‌ ವರದಿಯನ್ನು ಬಿಡುಗಡೆ ಮಾಡಿದ್ದು, 2023ರ ಮೊದಲ ಆರು ತಿಂಗಳುಗಳಲ್ಲಿ ಮುಸ್ಲಿಂ ವಿರೋಧಿ ದ್ವೇಷ ಭಾಷಣವನ್ನು ಒಳಗೊಂಡ 250ಕ್ಕೂ ಹೆಚ್ಚು ದಾಖಲೆಗಳನ್ನು ಬಹಿರಂಗಪಡಿಸಿದೆ. ಅವುಗಳಲ್ಲಿ ಹೆಚ್ಚಿನವು ಭಾರತೀಯ ಜನತಾ ಪಕ್ಷದ ಆಡಳಿತ ಇರುವ ರಾಜ್ಯಗಳದ್ದಾಗಿದೆ. ಮತ್ತು ಅದರಲ್ಲಿ ಸುಮಾರು 70% 2023 ಅಥವಾ 2024ರಲ್ಲಿ ಚುನಾವಣೆಗಳಿದ್ದ ರಾಜ್ಯದಲ್ಲಿ ದ್ವೇಷ ಭಾಷಣವನ್ನು ಮಾಡಲಾಗಿದೆ ಎಂದು ಬಹಿರಂಗಪಡಿಸಿತ್ತು.

ಇದನ್ನು ಓದಿ: ಉತ್ತರಪ್ರದೇಶ: ಬೀದಿ ವ್ಯಾಪಾರಿಯನ್ನು ಥಳಿಸಿ ಹತ್ಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...