Homeಕರ್ನಾಟಕಭಾರತದ ಪ್ರಜೆಗಳನ್ನು ಅನುಮಾನದಿಂದ ನೋಡುತ್ತಿದೆಯೇ ಸರ್ಕಾರ?

ಭಾರತದ ಪ್ರಜೆಗಳನ್ನು ಅನುಮಾನದಿಂದ ನೋಡುತ್ತಿದೆಯೇ ಸರ್ಕಾರ?

ನಾನು ಪೌರತ್ವವನ್ನು ಸಾಬೀತುಪಡಿಸಲು ಅಧಿಕಾರಿ ಮುಂದೆ ಹಾಜರಾಗಿ ದಾಖಲೆಗಳನ್ನು ನೀಡಿ ಅದು ಸಾಬೀತಾಗುವವರೆಗೂ ನಾನು ಭಾರತದ ಪ್ರಜೆ ಅಲ್ಲ.

- Advertisement -
- Advertisement -

ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬ ಮಗು ಕೂಡ ನೈಸರ್ಗದತ್ತವಾಗಿ ಭಾರತದ ಪೌರತ್ವ ಪಡೆಯುತ್ತದೆ ಎಂದು ರಾಜ್ಯಶಾಸ್ತ್ರದಲ್ಲಿ ಓದಿದ ನೆನಪು. ಪದವಿ ವ್ಯಾಸಂಗ ಮಾಡುತ್ತಿದ್ದಾಗ ರಾಜ್ಯಶಾಸ್ತ್ರದ ಪ್ರಾಧ್ಯಾಪಕರು ಪೌರತ್ವ ಹೇಗೆ ಬರುತ್ತದೆ ಎಂಬ ಬಗ್ಗೆ ತರಗತಿಯಲ್ಲಿ ಪಾಠ ಮಾಡುವಾಗ ಹೇಳಿದ್ದರು. ಅದರ ಆಧಾರದ ಮೇಲೆ ನಾನು ಇದುವರೆಗೂ ಭಾರತೀಯ ಪೌರನೆಂದು ಹೆಮ್ಮೆಯಿಂದ ಅಂದುಕೊಂಡಿದ್ದೆ. ನಾನು ಈ ದೇಶದ ಪೌರತ್ವವನ್ನು ಹುಟ್ಟಿನ ಕಾರಣದಿಂದ ಪಡೆದಿದ್ದೇನೆ ಎಂದು ಅರ್ಥಮಾಡಿಕೊಂಡಿದ್ದೆ. ಆದರೆ ಈಗ ಅನುಮಾನ ಕಾಡಲು ಶುರುವಾಗಿದೆ. ಹಾಗೆಯೇ ನನ್ನಂಥ ಹಲವರನ್ನೂ ಕೂಡ ಕಾಡತೊಡಗಿದೆ. ಇಲ್ಲಿ ನಾನು ಆಡಳಿತ ಪಕ್ಷ, ವಿರೋಧ ಪಕ್ಷ, ಪ್ರಾದೇಶಿಕ ಪಕ್ಷ, ಅಧಿಕಾರಿ, ನೌಕರ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಲ್ಲರೂ ಪೌರತ್ವ ಸಾಬೀತುಪಡಿಸಲೇಬೇಕು. ಇಲ್ಲಿ ಯಾರನ್ನೂ ಮಾಫ್ ಮಾಡಲು ಬರುವುದಿಲ್ಲ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಮಾಡುವ ಸಂದರ್ಭದಲ್ಲಿ ಅನುಮಾನ ಬಲವಾಗಿ ಕಾಡತೊಡಗಿದೆ. ನಾನು ಪೌರತ್ವವನ್ನು ಸಾಬೀತುಪಡಿಸಲು ಅಧಿಕಾರಿ ಮುಂದೆ ಹಾಜರಾಗಿ ದಾಖಲೆಗಳನ್ನು ನೀಡಿ ಅದು ಸಾಬೀತಾಗುವವರೆಗೂ ನಾನು ಭಾರತದ ಪ್ರಜೆ ಅಲ್ಲ. ನನ್ನಂಥೆ ಈ ದೇಶದ ಎಲ್ಲರೂ ಎರಡು ಅಥವಾ ಅದಕ್ಕಿಂತ ಹೆಚ್ಚು ದಾಖಲೆಗಳನ್ನು ಹಾಜರುಪಡಿಸಿದ ಮೇಲೆಯೇ ಪೌರರಾಗಲು ಸಾಧ್ಯ. ಸರ್ಕಾರಕ್ಕೆ ಈ ದೇಶದ ಪ್ರಜೆಗಳಾದ ಪೌರರ ಮೇಲೆ ಅನುಮಾನ ಬಂದಿದೆಯೇ ಎಂಬುದು ನನ್ನ ಮುಂದಿರುವ ಯಕ್ಷಪ್ರಶ್ನೆ.

ರಾಷ್ಟ್ರೀಯ ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಗೆ ನಾನು ಸೇರಿದಂತೆ ಪ್ರತಿಯೊಬ್ಬರು ಸರ್ಕಾರ ನಿಗದಿಪಡಿಸಬಹುದಾದ ದಾಖಲೆಗಳನ್ನು ತೋರಿಸುವುದು ಕಡ್ಡಾಯ. ಅಂದರೆ ನನ್ನ ಪೌರತ್ವವನ್ನು ನಾನು ಸಾಬೀತುಪಡಿಸಬೇಕು. ನನ್ನ ಬಳಿ ಎಲ್ಲಾ ದಾಖಲೆಗಳು ಇರಬಹುದು. ಹಾಗಂತೆ ನಾನು ಪೌರತ್ವ ಪಡೆದಿದ್ದೇನೆ. ನಾನೇಕೆ ತೋರಿಸಬೇಕು ಎಂದು ಸುಮ್ಮನೆ ಕೂರುವುದಿಲ್ಲ. ಅಂದರೆ ಪ್ರತಿಯೊಬ್ಬ ಪೌರನೂ ಸರ್ಕಾರದ ಅಧಿಕಾರಿಗಳಿಂದ ಸಹಿ ಮುದ್ರೆ ಹಾಕಲ್ಪಟ್ಟ ದಾಖಲೆಗಳನ್ನು ತೋರಿಸಲೇಬೇಕು. ಅಲ್ಲಿಯವರೆಗೂ ನಾನು ಭಾರತೀಯ ಪೌರ ಎಂದು ಎದೆತಟ್ಟಿ ಹೇಳಿಕೊಳ್ಳಲು ಸಾಧ್ಯವೇ ಇಲ್ಲ. ಅಂದಮೇಲೆ ಭಾರತೀಯರಾದ ನಾವು ಮತ್ತೊಮ್ಮೆ ದೊಡ್ಡ ಕ್ಯೂನಲ್ಲಿ ನಿಲ್ಲಲೇಬೇಕಾದಂತಹ ಅನಿವಾರ್ಯತೆ/ ಅಗತ್ಯತೆ ನಮ್ಮ ಮುಂದೆ ಬರಲಿದೆ.

ಅಸ್ಸಾಂ ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಗೆ 14 ದಾಖಲೆಗಳನ್ನು ಹಾಜರುಪಡಿಸುವಂತೆ ಹೇಳಿದೆ. ಆ ದಾಖಲೆ ಹೊಂದಿದವರೂ ಅಧಿಕಾರಿಗಳ ಮುಂದೆ ಎಲ್ಲಾ ಕೆಲಸಗಳನ್ನು ಬಿಟ್ಟು ಹಾಜರುಪಡಿಸಿದ್ದಾರೆ. ಆದರೆ ಅವೆಲ್ಲವೂ ಅಧಿಕಾರಿಗಳಿಗೆ ಸೂಕ್ತವೆನಿಸದೇ ಇರುವುದರಿಂದ 19 ಲಕ್ಷ ಮಂದಿ ನೋಂದಣಿ ಪಟ್ಟಿಯಿಂದ ಹೊರಗೆ ಉಳಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ (ಎನ್.ಆರ್.ಸಿ ತುರ್ತು ಜಾರಿ ಇಲ್ಲ ಎಂದು ಸರ್ಕಾರ ಹೇಳಿದೆ.)  ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿತು ಅನ್ನಿ. ಆ ಕೂಡಲೇ ಎಲ್ಲರೂ ದಾಖಲೆಗಳನ್ನು ಹೊಂದಿಸಿಕೊಳ್ಳಬೇಕು. ಇಲ್ಲದವರು ಅಧಿಕಾರಿಗಳ ಬಳಿಗೆ ಅಲೆಯಬೇಕು. ಬೇಗ ದಾಖಲೆ ಬೇಕೆಂದರೆ ಲಂಚ ಕೊಡಬೇಕು. ಇದು ಕೇವಲ ಒಬ್ಬರ ಪ್ರಶ್ನೆಯಲ್ಲ. ಇಡೀ ಕುಟುಂಬದ ದಾಖಲೆಯೇ ಇರಬೇಕಾಗುತ್ತದೆ. ಪತ್ನಿ ಬೇರೆ ರಾಜ್ಯದವರಾಗಿದ್ದರೆ ಅದಕ್ಕೂ ದಾಖಲೆ ಬೇಕು. ಅಪ್ಪ-ಅಮ್ಮಂದಿರ ದಾಖಲೆ ಇರಬೇಕು.

ಸರ್ಕಾರದಿಂದ ನೇಮಕಗೊಂಡ ಅಧಿಕಾರಿಗಳು ನಮ್ಮೆಲ್ಲಾ ದಾಖಲೆಗಳನ್ನು ಪರಿಶೀಲಿಸಿ ಅದು ಪಕ್ಕಾ ದಾಖಲೆ ಎಂದು ಪರಿಗಣಿಸಿದ ಮೇಲೆಯೇ ನನ್ನ ಪೌರತ್ವ ಅಧಿಕೃತಗೊಳ್ಳುವುದು. ಇಲ್ಲದಿದ್ದರೆ ಪೌರತ್ವ ಇಲ್ಲವಾಗುತ್ತದೆ. ಪೌರತ್ವ ಸಾಬೀತುಪಡಿಸಲು ತಿಂಗಳುಗಟ್ಟಲೆ ಅಲೆಯುವಂತಾಗುತ್ತದೆ. ಆ ಕಾರಣಕ್ಕಾಗಿಯೇ ದೇಶಾದ್ಯಂತ ಈ ಎರಡೂ ಕಾಯ್ದೆಗಳ ವಿರುದ್ಧ ಜನರು ಗಟ್ಟಿ ದನಿಯಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವುದು. ಬಹುತೇಕರು ಮುಸ್ಲಿಮರಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ನಂಬಿದ್ದಾರೆ ಮತ್ತು ತಿಳಿದುಕೊಂಡಿದ್ದಾರೆ. ಇದು ತಪ್ಪು ಗ್ರಹಿಕೆ. ನನ್ನ ಪೌರತ್ವವನ್ನು ಸಾಬೀತುಪಡಿಸಲು ಎಲ್ಲರಂತೆ ಸರದಿ ಸಾಲಿನಲ್ಲಿ ನಿಲ್ಲಲೇಬೇಕು.

ಅದೇ ಕಾರಣಕ್ಕೆ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಯ ಪರ ಮತ ಚಲಾಯಿಸಿದ ಬಿಜೆಪಿ ಮಿತ್ರಪಕ್ಷಗಳೆಲ್ಲವೂ ಒಂದೊಂದೇ ಕಾಯ್ದೆಯಾದ ಮೇಲೆ ವಿರೋಧ ವ್ಯಕ್ತಪಡಿಸುತ್ತಿವೆ. ಈಗ ಬಂದಿರುವ ತಿಳುವಳಿಕೆ ಮತ್ತು ಎಚ್ಚರ ಮತ ಚಲಾಯಿಸುವ ಸಂದರ್ಭದಲ್ಲಿ ಇದ್ದಿದ್ದರೆ ಮಸೂದೆ ಅಂಗೀಕಾರವಾಗುತ್ತಲೇ ಇರಲಿಲ್ಲ. ಮಿತ್ರಪಕ್ಷಗಳ ಮುಖಂಡರು ತಮ್ಮ ಮೇಲಿನ ಹಗರಣಗಳು-ಆರೋಪಗಳಿಂದ ಸದ್ಯಕ್ಕೆ ಬಚಾವಾಗುವ ಸಲುವಾಗಿ ಆತುರಾತುರವಾಗಿ ಪೌರತ್ವ ತಿದ್ದುಪಡಿ ಮಸೂದೆಯ ಪರ ಮತ ಚಲಾಯಿಸುವಂತೆ ಸದಸ್ಯರ ಮೇಲೆ ಒತ್ತಡ ಹೇರಿದವು. ಊರು ಹಾಳಾದ ಮೇಲೆ ದಡ್ಡಿ ಬಾಗಿಲು ಹಾಕಿದರು ಎಂಬಂತೆ ಕಾಯ್ದೆಯಾದ ಕೂಗಿಕೊಂಡರೆ ಬಂದ ಫಲವೇನು ಅಲ್ಲವೇ?

ದೇಶದಲ್ಲಿ ಜಿಡಿಪಿ ಕುಸಿದಿದೆ. ಆರ್ಥಿಕ ಹಿಂಜರಿತವಿದೆ. ಉದ್ದಿಮೆಗಳು ಮುಚ್ಚಿಹೋಗಿವೆ. ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಉದ್ಯೋಗಗಳು ಕಡಿತವಾಗಿವೆ. ಜನರ ಕೊಳ್ಳುವ ಶಕ್ತಿ ಕುಗ್ಗಿದೆ. ಉತ್ಪಾದನೆ ಕುಂಟಿತವಾಗಿದೆ. ನಿರುದ್ಯೋಗ ಸಮಸ್ಯೆ ದೇಶವನ್ನು ಬಾಧಿಸುತ್ತಿದೆ. ಗುಂಪುಹಲ್ಲೆ- ಹತ್ಯೆಗಳು, ಅತ್ಯಾಚಾರ-ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಸನ್ನಿವೇಶದಲ್ಲಿ ದೇಶವನ್ನು ಕಿತ್ತುತಿನ್ನುತ್ತಿರುವ ಸಮಸ್ಯೆಗಳ ನಿವಾರಣೆಗೆ ಶ್ರಮಿಸಬೇಕಾದ ಸರ್ಕಾರ ಅನಗತ್ಯ ಕಾಯ್ದೆಗಳನ್ನು ಜಾರಿಗೆ ತಂದು ಜನರ ನೆಮ್ಮದಿಗೆ ಭಂಗ ತರುವಂತಹ ಕಾರ್ಯ ಮಾಡುವುದು ಸರಿಯಾದ ಕ್ರಮವಲ್ಲ.

ಸಣ್ಣರಾಜ್ಯ ಅಸ್ಸಾಂನಲ್ಲೇ ರಾಷ್ಟ್ರೀಯ ಪೌರತ್ವ ನೋಂದಣಿ ಮಾಡಲು 10 ಸಾವಿರ ಕೋಟಿ ರೂಪಾಯಿ ವೆಚ್ಚ  ವೆಚ್ಚವಾಗಿದೆ ಎಂದು ವರದಿಗಳು ಹೇಳುತ್ತವೆ. ಇದು ನಿಜವೇ ಆದರೆ ದೊಡ್ಡ ರಾಜ್ಯಗಳಲ್ಲಿ ಇದಕ್ಕೆ ಎಷ್ಟು ಕೋಟಿಗಳು ಬೇಕಾಗಬಹುದು. ಒತ್ತೆ ಕೇಂದ್ರಗಳ ನಿರ್ಮಾಣಕ್ಕೆ ಹಣ ಎಷ್ಟು ಬೇಕು. ಅವರಿಗೆ ನಿತ್ಯವೂ ಊಟ ಹಾಕಲು ಬೇಕಾಗುವ ವೆಚ್ಚ ಎಷ್ಟು ಎಂದು ಅಂದಾಜಿಸಲು ಕೂಡ ಸಾಧ್ಯವಿಲ್ಲ. ಜನ ಹೇಗೋ ಕಷ್ಟವೋ ಸುಖವೋ ಅಂತು ಅವರೇ ಸ್ವಂತ ಬಲದಿಂದ ದುಡಿದು ತಿನ್ನುತ್ತಿದ್ದಾರೆ. ಅದಕ್ಕೂ ಕಲ್ಲು ಬೀಳುವುದಿಲ್ಲವೇ? ಸರ್ಕಾರ ಯೋಚಿಸಿ ಕಾಯ್ದೆಯನ್ನು ಹಿಂಪಡೆಯುವುದು ಒಳ್ಳೆಯದು.

(ಲೇಖಕರು ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು. ಲೇಖನದಲ್ಲಿರುವ ಅಭಿಪ್ರಾಯಗಳು ವ್ಯಕ್ತಿಗತವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...