Homeಕರ್ನಾಟಕಭಾರತದ ಪ್ರಜೆಗಳನ್ನು ಅನುಮಾನದಿಂದ ನೋಡುತ್ತಿದೆಯೇ ಸರ್ಕಾರ?

ಭಾರತದ ಪ್ರಜೆಗಳನ್ನು ಅನುಮಾನದಿಂದ ನೋಡುತ್ತಿದೆಯೇ ಸರ್ಕಾರ?

ನಾನು ಪೌರತ್ವವನ್ನು ಸಾಬೀತುಪಡಿಸಲು ಅಧಿಕಾರಿ ಮುಂದೆ ಹಾಜರಾಗಿ ದಾಖಲೆಗಳನ್ನು ನೀಡಿ ಅದು ಸಾಬೀತಾಗುವವರೆಗೂ ನಾನು ಭಾರತದ ಪ್ರಜೆ ಅಲ್ಲ.

- Advertisement -
- Advertisement -

ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬ ಮಗು ಕೂಡ ನೈಸರ್ಗದತ್ತವಾಗಿ ಭಾರತದ ಪೌರತ್ವ ಪಡೆಯುತ್ತದೆ ಎಂದು ರಾಜ್ಯಶಾಸ್ತ್ರದಲ್ಲಿ ಓದಿದ ನೆನಪು. ಪದವಿ ವ್ಯಾಸಂಗ ಮಾಡುತ್ತಿದ್ದಾಗ ರಾಜ್ಯಶಾಸ್ತ್ರದ ಪ್ರಾಧ್ಯಾಪಕರು ಪೌರತ್ವ ಹೇಗೆ ಬರುತ್ತದೆ ಎಂಬ ಬಗ್ಗೆ ತರಗತಿಯಲ್ಲಿ ಪಾಠ ಮಾಡುವಾಗ ಹೇಳಿದ್ದರು. ಅದರ ಆಧಾರದ ಮೇಲೆ ನಾನು ಇದುವರೆಗೂ ಭಾರತೀಯ ಪೌರನೆಂದು ಹೆಮ್ಮೆಯಿಂದ ಅಂದುಕೊಂಡಿದ್ದೆ. ನಾನು ಈ ದೇಶದ ಪೌರತ್ವವನ್ನು ಹುಟ್ಟಿನ ಕಾರಣದಿಂದ ಪಡೆದಿದ್ದೇನೆ ಎಂದು ಅರ್ಥಮಾಡಿಕೊಂಡಿದ್ದೆ. ಆದರೆ ಈಗ ಅನುಮಾನ ಕಾಡಲು ಶುರುವಾಗಿದೆ. ಹಾಗೆಯೇ ನನ್ನಂಥ ಹಲವರನ್ನೂ ಕೂಡ ಕಾಡತೊಡಗಿದೆ. ಇಲ್ಲಿ ನಾನು ಆಡಳಿತ ಪಕ್ಷ, ವಿರೋಧ ಪಕ್ಷ, ಪ್ರಾದೇಶಿಕ ಪಕ್ಷ, ಅಧಿಕಾರಿ, ನೌಕರ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಲ್ಲರೂ ಪೌರತ್ವ ಸಾಬೀತುಪಡಿಸಲೇಬೇಕು. ಇಲ್ಲಿ ಯಾರನ್ನೂ ಮಾಫ್ ಮಾಡಲು ಬರುವುದಿಲ್ಲ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಮಾಡುವ ಸಂದರ್ಭದಲ್ಲಿ ಅನುಮಾನ ಬಲವಾಗಿ ಕಾಡತೊಡಗಿದೆ. ನಾನು ಪೌರತ್ವವನ್ನು ಸಾಬೀತುಪಡಿಸಲು ಅಧಿಕಾರಿ ಮುಂದೆ ಹಾಜರಾಗಿ ದಾಖಲೆಗಳನ್ನು ನೀಡಿ ಅದು ಸಾಬೀತಾಗುವವರೆಗೂ ನಾನು ಭಾರತದ ಪ್ರಜೆ ಅಲ್ಲ. ನನ್ನಂಥೆ ಈ ದೇಶದ ಎಲ್ಲರೂ ಎರಡು ಅಥವಾ ಅದಕ್ಕಿಂತ ಹೆಚ್ಚು ದಾಖಲೆಗಳನ್ನು ಹಾಜರುಪಡಿಸಿದ ಮೇಲೆಯೇ ಪೌರರಾಗಲು ಸಾಧ್ಯ. ಸರ್ಕಾರಕ್ಕೆ ಈ ದೇಶದ ಪ್ರಜೆಗಳಾದ ಪೌರರ ಮೇಲೆ ಅನುಮಾನ ಬಂದಿದೆಯೇ ಎಂಬುದು ನನ್ನ ಮುಂದಿರುವ ಯಕ್ಷಪ್ರಶ್ನೆ.

ರಾಷ್ಟ್ರೀಯ ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಗೆ ನಾನು ಸೇರಿದಂತೆ ಪ್ರತಿಯೊಬ್ಬರು ಸರ್ಕಾರ ನಿಗದಿಪಡಿಸಬಹುದಾದ ದಾಖಲೆಗಳನ್ನು ತೋರಿಸುವುದು ಕಡ್ಡಾಯ. ಅಂದರೆ ನನ್ನ ಪೌರತ್ವವನ್ನು ನಾನು ಸಾಬೀತುಪಡಿಸಬೇಕು. ನನ್ನ ಬಳಿ ಎಲ್ಲಾ ದಾಖಲೆಗಳು ಇರಬಹುದು. ಹಾಗಂತೆ ನಾನು ಪೌರತ್ವ ಪಡೆದಿದ್ದೇನೆ. ನಾನೇಕೆ ತೋರಿಸಬೇಕು ಎಂದು ಸುಮ್ಮನೆ ಕೂರುವುದಿಲ್ಲ. ಅಂದರೆ ಪ್ರತಿಯೊಬ್ಬ ಪೌರನೂ ಸರ್ಕಾರದ ಅಧಿಕಾರಿಗಳಿಂದ ಸಹಿ ಮುದ್ರೆ ಹಾಕಲ್ಪಟ್ಟ ದಾಖಲೆಗಳನ್ನು ತೋರಿಸಲೇಬೇಕು. ಅಲ್ಲಿಯವರೆಗೂ ನಾನು ಭಾರತೀಯ ಪೌರ ಎಂದು ಎದೆತಟ್ಟಿ ಹೇಳಿಕೊಳ್ಳಲು ಸಾಧ್ಯವೇ ಇಲ್ಲ. ಅಂದಮೇಲೆ ಭಾರತೀಯರಾದ ನಾವು ಮತ್ತೊಮ್ಮೆ ದೊಡ್ಡ ಕ್ಯೂನಲ್ಲಿ ನಿಲ್ಲಲೇಬೇಕಾದಂತಹ ಅನಿವಾರ್ಯತೆ/ ಅಗತ್ಯತೆ ನಮ್ಮ ಮುಂದೆ ಬರಲಿದೆ.

ಅಸ್ಸಾಂ ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಗೆ 14 ದಾಖಲೆಗಳನ್ನು ಹಾಜರುಪಡಿಸುವಂತೆ ಹೇಳಿದೆ. ಆ ದಾಖಲೆ ಹೊಂದಿದವರೂ ಅಧಿಕಾರಿಗಳ ಮುಂದೆ ಎಲ್ಲಾ ಕೆಲಸಗಳನ್ನು ಬಿಟ್ಟು ಹಾಜರುಪಡಿಸಿದ್ದಾರೆ. ಆದರೆ ಅವೆಲ್ಲವೂ ಅಧಿಕಾರಿಗಳಿಗೆ ಸೂಕ್ತವೆನಿಸದೇ ಇರುವುದರಿಂದ 19 ಲಕ್ಷ ಮಂದಿ ನೋಂದಣಿ ಪಟ್ಟಿಯಿಂದ ಹೊರಗೆ ಉಳಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ (ಎನ್.ಆರ್.ಸಿ ತುರ್ತು ಜಾರಿ ಇಲ್ಲ ಎಂದು ಸರ್ಕಾರ ಹೇಳಿದೆ.)  ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿತು ಅನ್ನಿ. ಆ ಕೂಡಲೇ ಎಲ್ಲರೂ ದಾಖಲೆಗಳನ್ನು ಹೊಂದಿಸಿಕೊಳ್ಳಬೇಕು. ಇಲ್ಲದವರು ಅಧಿಕಾರಿಗಳ ಬಳಿಗೆ ಅಲೆಯಬೇಕು. ಬೇಗ ದಾಖಲೆ ಬೇಕೆಂದರೆ ಲಂಚ ಕೊಡಬೇಕು. ಇದು ಕೇವಲ ಒಬ್ಬರ ಪ್ರಶ್ನೆಯಲ್ಲ. ಇಡೀ ಕುಟುಂಬದ ದಾಖಲೆಯೇ ಇರಬೇಕಾಗುತ್ತದೆ. ಪತ್ನಿ ಬೇರೆ ರಾಜ್ಯದವರಾಗಿದ್ದರೆ ಅದಕ್ಕೂ ದಾಖಲೆ ಬೇಕು. ಅಪ್ಪ-ಅಮ್ಮಂದಿರ ದಾಖಲೆ ಇರಬೇಕು.

ಸರ್ಕಾರದಿಂದ ನೇಮಕಗೊಂಡ ಅಧಿಕಾರಿಗಳು ನಮ್ಮೆಲ್ಲಾ ದಾಖಲೆಗಳನ್ನು ಪರಿಶೀಲಿಸಿ ಅದು ಪಕ್ಕಾ ದಾಖಲೆ ಎಂದು ಪರಿಗಣಿಸಿದ ಮೇಲೆಯೇ ನನ್ನ ಪೌರತ್ವ ಅಧಿಕೃತಗೊಳ್ಳುವುದು. ಇಲ್ಲದಿದ್ದರೆ ಪೌರತ್ವ ಇಲ್ಲವಾಗುತ್ತದೆ. ಪೌರತ್ವ ಸಾಬೀತುಪಡಿಸಲು ತಿಂಗಳುಗಟ್ಟಲೆ ಅಲೆಯುವಂತಾಗುತ್ತದೆ. ಆ ಕಾರಣಕ್ಕಾಗಿಯೇ ದೇಶಾದ್ಯಂತ ಈ ಎರಡೂ ಕಾಯ್ದೆಗಳ ವಿರುದ್ಧ ಜನರು ಗಟ್ಟಿ ದನಿಯಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವುದು. ಬಹುತೇಕರು ಮುಸ್ಲಿಮರಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ನಂಬಿದ್ದಾರೆ ಮತ್ತು ತಿಳಿದುಕೊಂಡಿದ್ದಾರೆ. ಇದು ತಪ್ಪು ಗ್ರಹಿಕೆ. ನನ್ನ ಪೌರತ್ವವನ್ನು ಸಾಬೀತುಪಡಿಸಲು ಎಲ್ಲರಂತೆ ಸರದಿ ಸಾಲಿನಲ್ಲಿ ನಿಲ್ಲಲೇಬೇಕು.

ಅದೇ ಕಾರಣಕ್ಕೆ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಯ ಪರ ಮತ ಚಲಾಯಿಸಿದ ಬಿಜೆಪಿ ಮಿತ್ರಪಕ್ಷಗಳೆಲ್ಲವೂ ಒಂದೊಂದೇ ಕಾಯ್ದೆಯಾದ ಮೇಲೆ ವಿರೋಧ ವ್ಯಕ್ತಪಡಿಸುತ್ತಿವೆ. ಈಗ ಬಂದಿರುವ ತಿಳುವಳಿಕೆ ಮತ್ತು ಎಚ್ಚರ ಮತ ಚಲಾಯಿಸುವ ಸಂದರ್ಭದಲ್ಲಿ ಇದ್ದಿದ್ದರೆ ಮಸೂದೆ ಅಂಗೀಕಾರವಾಗುತ್ತಲೇ ಇರಲಿಲ್ಲ. ಮಿತ್ರಪಕ್ಷಗಳ ಮುಖಂಡರು ತಮ್ಮ ಮೇಲಿನ ಹಗರಣಗಳು-ಆರೋಪಗಳಿಂದ ಸದ್ಯಕ್ಕೆ ಬಚಾವಾಗುವ ಸಲುವಾಗಿ ಆತುರಾತುರವಾಗಿ ಪೌರತ್ವ ತಿದ್ದುಪಡಿ ಮಸೂದೆಯ ಪರ ಮತ ಚಲಾಯಿಸುವಂತೆ ಸದಸ್ಯರ ಮೇಲೆ ಒತ್ತಡ ಹೇರಿದವು. ಊರು ಹಾಳಾದ ಮೇಲೆ ದಡ್ಡಿ ಬಾಗಿಲು ಹಾಕಿದರು ಎಂಬಂತೆ ಕಾಯ್ದೆಯಾದ ಕೂಗಿಕೊಂಡರೆ ಬಂದ ಫಲವೇನು ಅಲ್ಲವೇ?

ದೇಶದಲ್ಲಿ ಜಿಡಿಪಿ ಕುಸಿದಿದೆ. ಆರ್ಥಿಕ ಹಿಂಜರಿತವಿದೆ. ಉದ್ದಿಮೆಗಳು ಮುಚ್ಚಿಹೋಗಿವೆ. ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಉದ್ಯೋಗಗಳು ಕಡಿತವಾಗಿವೆ. ಜನರ ಕೊಳ್ಳುವ ಶಕ್ತಿ ಕುಗ್ಗಿದೆ. ಉತ್ಪಾದನೆ ಕುಂಟಿತವಾಗಿದೆ. ನಿರುದ್ಯೋಗ ಸಮಸ್ಯೆ ದೇಶವನ್ನು ಬಾಧಿಸುತ್ತಿದೆ. ಗುಂಪುಹಲ್ಲೆ- ಹತ್ಯೆಗಳು, ಅತ್ಯಾಚಾರ-ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಸನ್ನಿವೇಶದಲ್ಲಿ ದೇಶವನ್ನು ಕಿತ್ತುತಿನ್ನುತ್ತಿರುವ ಸಮಸ್ಯೆಗಳ ನಿವಾರಣೆಗೆ ಶ್ರಮಿಸಬೇಕಾದ ಸರ್ಕಾರ ಅನಗತ್ಯ ಕಾಯ್ದೆಗಳನ್ನು ಜಾರಿಗೆ ತಂದು ಜನರ ನೆಮ್ಮದಿಗೆ ಭಂಗ ತರುವಂತಹ ಕಾರ್ಯ ಮಾಡುವುದು ಸರಿಯಾದ ಕ್ರಮವಲ್ಲ.

ಸಣ್ಣರಾಜ್ಯ ಅಸ್ಸಾಂನಲ್ಲೇ ರಾಷ್ಟ್ರೀಯ ಪೌರತ್ವ ನೋಂದಣಿ ಮಾಡಲು 10 ಸಾವಿರ ಕೋಟಿ ರೂಪಾಯಿ ವೆಚ್ಚ  ವೆಚ್ಚವಾಗಿದೆ ಎಂದು ವರದಿಗಳು ಹೇಳುತ್ತವೆ. ಇದು ನಿಜವೇ ಆದರೆ ದೊಡ್ಡ ರಾಜ್ಯಗಳಲ್ಲಿ ಇದಕ್ಕೆ ಎಷ್ಟು ಕೋಟಿಗಳು ಬೇಕಾಗಬಹುದು. ಒತ್ತೆ ಕೇಂದ್ರಗಳ ನಿರ್ಮಾಣಕ್ಕೆ ಹಣ ಎಷ್ಟು ಬೇಕು. ಅವರಿಗೆ ನಿತ್ಯವೂ ಊಟ ಹಾಕಲು ಬೇಕಾಗುವ ವೆಚ್ಚ ಎಷ್ಟು ಎಂದು ಅಂದಾಜಿಸಲು ಕೂಡ ಸಾಧ್ಯವಿಲ್ಲ. ಜನ ಹೇಗೋ ಕಷ್ಟವೋ ಸುಖವೋ ಅಂತು ಅವರೇ ಸ್ವಂತ ಬಲದಿಂದ ದುಡಿದು ತಿನ್ನುತ್ತಿದ್ದಾರೆ. ಅದಕ್ಕೂ ಕಲ್ಲು ಬೀಳುವುದಿಲ್ಲವೇ? ಸರ್ಕಾರ ಯೋಚಿಸಿ ಕಾಯ್ದೆಯನ್ನು ಹಿಂಪಡೆಯುವುದು ಒಳ್ಳೆಯದು.

(ಲೇಖಕರು ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು. ಲೇಖನದಲ್ಲಿರುವ ಅಭಿಪ್ರಾಯಗಳು ವ್ಯಕ್ತಿಗತವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...