Homeಎಕಾನಮಿಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

ಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಎರಡು ಕಂಪನಿಗಳಾದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಗಳನ್ನು ಮುಂದಿನ ಮಾರ್ಚ್ ವೇಳೆಗೆ ಸರ್ಕಾರವು ಮಾರಾಟವಾಗುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಟೈಮ್ಸ್ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ತೀವ್ರ ಹಣಕಾಸು ಕುಸಿತದಿಂದಾಗಿರುವ ಸುಮಾರು ರೂ. 58,000 ಕೋಟಿ ಸಾಲದ ಹೊರೆಯಿಂದಾಗಿ ಈ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದಿದ್ದಾರೆ.

“ನಾವು ಈ ವರ್ಷ ಅವುಗಳನ್ನು ಪೂರ್ಣಗೊಳಿಸಬಹುದೆಂಬ ನಿರೀಕ್ಷೆ ಇಟ್ಟುಕೊಂಡಿದ್ದೇವು. ಆದರೆ ವಾಸ್ತವ ಸ್ಥಿತಿಗತಿಗಳು ಬೇರೆ ಇವೆ” ಎಂದು ಅವರು ಹೇಳಿದ್ದಾರೆ.

ಏರ್ ಇಂಡಿಯಾ ಅಧ್ಯಕ್ಷ ಅಶ್ವನಿ ಲೋಹಾನಿ, ಏರ್ ಇಂಡಿಯಾ ಉದ್ಯೋಗಿಗಳಿಗೆ ಬಹಿರಂಗ ಪತ್ರದಲ್ಲಿ, ಈ ವಿತರಣೆಯು ವಿಮಾನಯಾನ ಸಂಸ್ಥೆಯ ಸುಸ್ಥಿರತೆಗೆ ಅನುವು ಮಾಡಿಕೊಡುತ್ತದೆ ಎಂದು ಈ ಮೊದಲೇ ತಿಳಿಸಿದ್ದಾರೆ.

ಏರ್ ಇಂಡಿಯಾಕ್ಕೆ ಸಂಬಂಧಿಸಿದಂತೆ, ಹೂಡಿಕೆದಾರರಲ್ಲಿ “ಹೆಚ್ಚಿನ ಆಸಕ್ತಿ” ಇದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಕಳೆದ ವರ್ಷ, ಏರ್ ಇಂಡಿಯಾದ ಏರ್‌ಲೈನ್ಸ್‌ನಲ್ಲಿ ಶೇ 76 ರಷ್ಟು ಪಾಲನ್ನು ಮತ್ತು ನಿರ್ವಹಣಾ ನಿಯಂತ್ರಣವನ್ನು ಮಾರಲು ಹೊರಟಿತ್ತು. ಆದರೆ ಒಬ್ಬರೂ ಸಹ ಬಿಡ್‌ ಮಾಡಲಿಲ್ಲ. ಏಕೆಂದರೆ ಉಳಿದ 24 ಶೇಕಡಾ ಪಾಲನ್ನು ಹೊಂದಿರುವ ಸರ್ಕಾರವು ಹೂಡಿಕೆದಾರರ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಹುದೆಂಬ ಭಯದಿಂದಾಗಿ ಕಳೆದ ವರ್ಷ ಏರ್ ಇಂಡಿಯಾ ಷೇರು ಮಾರಾಟಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸೆಂಟರ್ ಫಾರ್ ಏಷ್ಯಾ ಪೆಸಿಫಿಕ್ ಏವಿಯೇಷನ್ ​​ವರದಿಯಲ್ಲಿ ತಿಳಿಸಿದೆ. ಈಗ ಆ ಅಡಚಣೆಯನ್ನು ತೆಗೆದುಹಾಕಲಾಗಿದ್ದು ಸರ್ಕಾರವು ಪ್ರಸ್ತುತ ಏರ್ ಇಂಡಿಯಾದ ಶೇ 100 ರಷ್ಟು ಷೇರುಗಳನ್ನು ಮಾರಲು ಹೊರಟಿದೆ.

ಏರ್ ಇಂಡಿಯಾ ಕಳೆದ ಹಣಕಾಸು ವರ್ಷದಲ್ಲಿ ಸುಮಾರು 4,600 ಕೋಟಿ ರೂನಷ್ಟು ನಷ್ಟ ಹೊಂದಿತ್ತು. ಮುಖ್ಯವಾಗಿ ಹೆಚ್ಚಿದ ತೈಲ ಬೆಲೆಗಳು ಮತ್ತು ವಿದೇಶೀ ವಿನಿಮಯ ನಷ್ಟ ಇದಕ್ಕೆ ಕಾರಣವಾಗಿತ್ತು. ಆದರೆ 2019-20ರಲ್ಲಿ ಕಾರ್ಯಾಚರಣೆಯಲ್ಲಿ ಏರ್‌ ಇಂಡಿಯಾಗೆ ಲಾಭದಾಯಕವಾಗಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ವಿಷಯದಲ್ಲಿ, ಅಕ್ಟೋಬರ್‌ನಲ್ಲಿ ಕಂಪನಿಯ ಒಟ್ಟು 53.29 ಶೇಕಡಾ ಪಾಲನ್ನು ಮಾರಾಟ ಮಾಡಲು ಕಾರ್ಯದರ್ಶಿಗಳ ಗುಂಪು ಒಪ್ಪಿಕೊಂಡಿತ್ತು.

ಭಾರತ್ ಪೆಟ್ರೋಲಿಯಂ ಮಾರುಕಟ್ಟೆ ಮೌಲ್ಯವು ಸುಮಾರು ರೂ. 1.02 ಲಕ್ಷ ಕೋಟಿ ರೂಗಳಷ್ಟಿದೆ. ಅದರ 53 ಪ್ರತಿಶತದಷ್ಟು ಪಾಲನ್ನು ಮಾರಾಟ ಮಾಡುವುದೆಂದರೆ, ಎಲ್ಲಾ ಪ್ರವೇಶ ಪ್ರೀಮಿಯಂ ಸೇರಿದಂತೆ 65,000 ಕೋಟಿ ರೂ ಸರ್ಕಾರದ ಬೊಕ್ಕಸಕ್ಕೆ ಸೇರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...