Homeಎಕಾನಮಿಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

ಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಎರಡು ಕಂಪನಿಗಳಾದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಗಳನ್ನು ಮುಂದಿನ ಮಾರ್ಚ್ ವೇಳೆಗೆ ಸರ್ಕಾರವು ಮಾರಾಟವಾಗುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಟೈಮ್ಸ್ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ತೀವ್ರ ಹಣಕಾಸು ಕುಸಿತದಿಂದಾಗಿರುವ ಸುಮಾರು ರೂ. 58,000 ಕೋಟಿ ಸಾಲದ ಹೊರೆಯಿಂದಾಗಿ ಈ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದಿದ್ದಾರೆ.

“ನಾವು ಈ ವರ್ಷ ಅವುಗಳನ್ನು ಪೂರ್ಣಗೊಳಿಸಬಹುದೆಂಬ ನಿರೀಕ್ಷೆ ಇಟ್ಟುಕೊಂಡಿದ್ದೇವು. ಆದರೆ ವಾಸ್ತವ ಸ್ಥಿತಿಗತಿಗಳು ಬೇರೆ ಇವೆ” ಎಂದು ಅವರು ಹೇಳಿದ್ದಾರೆ.

ಏರ್ ಇಂಡಿಯಾ ಅಧ್ಯಕ್ಷ ಅಶ್ವನಿ ಲೋಹಾನಿ, ಏರ್ ಇಂಡಿಯಾ ಉದ್ಯೋಗಿಗಳಿಗೆ ಬಹಿರಂಗ ಪತ್ರದಲ್ಲಿ, ಈ ವಿತರಣೆಯು ವಿಮಾನಯಾನ ಸಂಸ್ಥೆಯ ಸುಸ್ಥಿರತೆಗೆ ಅನುವು ಮಾಡಿಕೊಡುತ್ತದೆ ಎಂದು ಈ ಮೊದಲೇ ತಿಳಿಸಿದ್ದಾರೆ.

ಏರ್ ಇಂಡಿಯಾಕ್ಕೆ ಸಂಬಂಧಿಸಿದಂತೆ, ಹೂಡಿಕೆದಾರರಲ್ಲಿ “ಹೆಚ್ಚಿನ ಆಸಕ್ತಿ” ಇದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಕಳೆದ ವರ್ಷ, ಏರ್ ಇಂಡಿಯಾದ ಏರ್‌ಲೈನ್ಸ್‌ನಲ್ಲಿ ಶೇ 76 ರಷ್ಟು ಪಾಲನ್ನು ಮತ್ತು ನಿರ್ವಹಣಾ ನಿಯಂತ್ರಣವನ್ನು ಮಾರಲು ಹೊರಟಿತ್ತು. ಆದರೆ ಒಬ್ಬರೂ ಸಹ ಬಿಡ್‌ ಮಾಡಲಿಲ್ಲ. ಏಕೆಂದರೆ ಉಳಿದ 24 ಶೇಕಡಾ ಪಾಲನ್ನು ಹೊಂದಿರುವ ಸರ್ಕಾರವು ಹೂಡಿಕೆದಾರರ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಹುದೆಂಬ ಭಯದಿಂದಾಗಿ ಕಳೆದ ವರ್ಷ ಏರ್ ಇಂಡಿಯಾ ಷೇರು ಮಾರಾಟಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸೆಂಟರ್ ಫಾರ್ ಏಷ್ಯಾ ಪೆಸಿಫಿಕ್ ಏವಿಯೇಷನ್ ​​ವರದಿಯಲ್ಲಿ ತಿಳಿಸಿದೆ. ಈಗ ಆ ಅಡಚಣೆಯನ್ನು ತೆಗೆದುಹಾಕಲಾಗಿದ್ದು ಸರ್ಕಾರವು ಪ್ರಸ್ತುತ ಏರ್ ಇಂಡಿಯಾದ ಶೇ 100 ರಷ್ಟು ಷೇರುಗಳನ್ನು ಮಾರಲು ಹೊರಟಿದೆ.

ಏರ್ ಇಂಡಿಯಾ ಕಳೆದ ಹಣಕಾಸು ವರ್ಷದಲ್ಲಿ ಸುಮಾರು 4,600 ಕೋಟಿ ರೂನಷ್ಟು ನಷ್ಟ ಹೊಂದಿತ್ತು. ಮುಖ್ಯವಾಗಿ ಹೆಚ್ಚಿದ ತೈಲ ಬೆಲೆಗಳು ಮತ್ತು ವಿದೇಶೀ ವಿನಿಮಯ ನಷ್ಟ ಇದಕ್ಕೆ ಕಾರಣವಾಗಿತ್ತು. ಆದರೆ 2019-20ರಲ್ಲಿ ಕಾರ್ಯಾಚರಣೆಯಲ್ಲಿ ಏರ್‌ ಇಂಡಿಯಾಗೆ ಲಾಭದಾಯಕವಾಗಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ವಿಷಯದಲ್ಲಿ, ಅಕ್ಟೋಬರ್‌ನಲ್ಲಿ ಕಂಪನಿಯ ಒಟ್ಟು 53.29 ಶೇಕಡಾ ಪಾಲನ್ನು ಮಾರಾಟ ಮಾಡಲು ಕಾರ್ಯದರ್ಶಿಗಳ ಗುಂಪು ಒಪ್ಪಿಕೊಂಡಿತ್ತು.

ಭಾರತ್ ಪೆಟ್ರೋಲಿಯಂ ಮಾರುಕಟ್ಟೆ ಮೌಲ್ಯವು ಸುಮಾರು ರೂ. 1.02 ಲಕ್ಷ ಕೋಟಿ ರೂಗಳಷ್ಟಿದೆ. ಅದರ 53 ಪ್ರತಿಶತದಷ್ಟು ಪಾಲನ್ನು ಮಾರಾಟ ಮಾಡುವುದೆಂದರೆ, ಎಲ್ಲಾ ಪ್ರವೇಶ ಪ್ರೀಮಿಯಂ ಸೇರಿದಂತೆ 65,000 ಕೋಟಿ ರೂ ಸರ್ಕಾರದ ಬೊಕ್ಕಸಕ್ಕೆ ಸೇರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...