Homeಎಕಾನಮಿಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

ಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಎರಡು ಕಂಪನಿಗಳಾದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಗಳನ್ನು ಮುಂದಿನ ಮಾರ್ಚ್ ವೇಳೆಗೆ ಸರ್ಕಾರವು ಮಾರಾಟವಾಗುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಟೈಮ್ಸ್ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ತೀವ್ರ ಹಣಕಾಸು ಕುಸಿತದಿಂದಾಗಿರುವ ಸುಮಾರು ರೂ. 58,000 ಕೋಟಿ ಸಾಲದ ಹೊರೆಯಿಂದಾಗಿ ಈ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದಿದ್ದಾರೆ.

“ನಾವು ಈ ವರ್ಷ ಅವುಗಳನ್ನು ಪೂರ್ಣಗೊಳಿಸಬಹುದೆಂಬ ನಿರೀಕ್ಷೆ ಇಟ್ಟುಕೊಂಡಿದ್ದೇವು. ಆದರೆ ವಾಸ್ತವ ಸ್ಥಿತಿಗತಿಗಳು ಬೇರೆ ಇವೆ” ಎಂದು ಅವರು ಹೇಳಿದ್ದಾರೆ.

ಏರ್ ಇಂಡಿಯಾ ಅಧ್ಯಕ್ಷ ಅಶ್ವನಿ ಲೋಹಾನಿ, ಏರ್ ಇಂಡಿಯಾ ಉದ್ಯೋಗಿಗಳಿಗೆ ಬಹಿರಂಗ ಪತ್ರದಲ್ಲಿ, ಈ ವಿತರಣೆಯು ವಿಮಾನಯಾನ ಸಂಸ್ಥೆಯ ಸುಸ್ಥಿರತೆಗೆ ಅನುವು ಮಾಡಿಕೊಡುತ್ತದೆ ಎಂದು ಈ ಮೊದಲೇ ತಿಳಿಸಿದ್ದಾರೆ.

ಏರ್ ಇಂಡಿಯಾಕ್ಕೆ ಸಂಬಂಧಿಸಿದಂತೆ, ಹೂಡಿಕೆದಾರರಲ್ಲಿ “ಹೆಚ್ಚಿನ ಆಸಕ್ತಿ” ಇದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಕಳೆದ ವರ್ಷ, ಏರ್ ಇಂಡಿಯಾದ ಏರ್‌ಲೈನ್ಸ್‌ನಲ್ಲಿ ಶೇ 76 ರಷ್ಟು ಪಾಲನ್ನು ಮತ್ತು ನಿರ್ವಹಣಾ ನಿಯಂತ್ರಣವನ್ನು ಮಾರಲು ಹೊರಟಿತ್ತು. ಆದರೆ ಒಬ್ಬರೂ ಸಹ ಬಿಡ್‌ ಮಾಡಲಿಲ್ಲ. ಏಕೆಂದರೆ ಉಳಿದ 24 ಶೇಕಡಾ ಪಾಲನ್ನು ಹೊಂದಿರುವ ಸರ್ಕಾರವು ಹೂಡಿಕೆದಾರರ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಹುದೆಂಬ ಭಯದಿಂದಾಗಿ ಕಳೆದ ವರ್ಷ ಏರ್ ಇಂಡಿಯಾ ಷೇರು ಮಾರಾಟಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸೆಂಟರ್ ಫಾರ್ ಏಷ್ಯಾ ಪೆಸಿಫಿಕ್ ಏವಿಯೇಷನ್ ​​ವರದಿಯಲ್ಲಿ ತಿಳಿಸಿದೆ. ಈಗ ಆ ಅಡಚಣೆಯನ್ನು ತೆಗೆದುಹಾಕಲಾಗಿದ್ದು ಸರ್ಕಾರವು ಪ್ರಸ್ತುತ ಏರ್ ಇಂಡಿಯಾದ ಶೇ 100 ರಷ್ಟು ಷೇರುಗಳನ್ನು ಮಾರಲು ಹೊರಟಿದೆ.

ಏರ್ ಇಂಡಿಯಾ ಕಳೆದ ಹಣಕಾಸು ವರ್ಷದಲ್ಲಿ ಸುಮಾರು 4,600 ಕೋಟಿ ರೂನಷ್ಟು ನಷ್ಟ ಹೊಂದಿತ್ತು. ಮುಖ್ಯವಾಗಿ ಹೆಚ್ಚಿದ ತೈಲ ಬೆಲೆಗಳು ಮತ್ತು ವಿದೇಶೀ ವಿನಿಮಯ ನಷ್ಟ ಇದಕ್ಕೆ ಕಾರಣವಾಗಿತ್ತು. ಆದರೆ 2019-20ರಲ್ಲಿ ಕಾರ್ಯಾಚರಣೆಯಲ್ಲಿ ಏರ್‌ ಇಂಡಿಯಾಗೆ ಲಾಭದಾಯಕವಾಗಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ವಿಷಯದಲ್ಲಿ, ಅಕ್ಟೋಬರ್‌ನಲ್ಲಿ ಕಂಪನಿಯ ಒಟ್ಟು 53.29 ಶೇಕಡಾ ಪಾಲನ್ನು ಮಾರಾಟ ಮಾಡಲು ಕಾರ್ಯದರ್ಶಿಗಳ ಗುಂಪು ಒಪ್ಪಿಕೊಂಡಿತ್ತು.

ಭಾರತ್ ಪೆಟ್ರೋಲಿಯಂ ಮಾರುಕಟ್ಟೆ ಮೌಲ್ಯವು ಸುಮಾರು ರೂ. 1.02 ಲಕ್ಷ ಕೋಟಿ ರೂಗಳಷ್ಟಿದೆ. ಅದರ 53 ಪ್ರತಿಶತದಷ್ಟು ಪಾಲನ್ನು ಮಾರಾಟ ಮಾಡುವುದೆಂದರೆ, ಎಲ್ಲಾ ಪ್ರವೇಶ ಪ್ರೀಮಿಯಂ ಸೇರಿದಂತೆ 65,000 ಕೋಟಿ ರೂ ಸರ್ಕಾರದ ಬೊಕ್ಕಸಕ್ಕೆ ಸೇರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...