Homeಮುಖಪುಟಭಾರತದ ಹಾಕಿ ತಾರೆ ಶ್ರೀಜೇಶ್‌ಗೆ 2 ಕೋಟಿ ರೂ. ಘೋಷಿಸಿದ ಕೇರಳ!

ಭಾರತದ ಹಾಕಿ ತಾರೆ ಶ್ರೀಜೇಶ್‌ಗೆ 2 ಕೋಟಿ ರೂ. ಘೋಷಿಸಿದ ಕೇರಳ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಂಡದ ಗೋಲ್ ಕೀಪರ್‌ ಪಿಆರ್‌‌ ಶ್ರೀಜೇಶ್‌ ಅವರಿಗೆ 2 ಕೋಟಿ ರೂ. ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬುಧವಾರ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಅವರಿಗೆ ಶಿಕ್ಷಣ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಬಡ್ತಿ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.

ಪಿಆರ್‌‌ ಶ್ರೀಜೇಶ್‌ ಪ್ರಸ್ತುತ ಕೇರಳ ಸರ್ಕಾರದ ಸಾಮಾನ್ಯ ಮತ್ತು ಉನ್ನತ ಶಿಕ್ಷಣ ಇಲಾಖೆಯ ಮುಖ್ಯ ಕ್ರೀಡಾ ಸಂಘಟಕರಾಗಿ ಕೆಲಸ ಮಾಡುತ್ತಿದ್ದಾರೆ. ಭಾರತ ಹಾಕಿ ತಂಡದ ಕ್ಯಾಪ್ಟನ್‌ ಆಗಿಯು ಅವರು ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ‘ಪದಕದ ರುಚಿ ಉಪ್ಪುಪ್ಪಿದೆ’ – ಹಾಕಿ ಗೋಲ್‌‌ ಕೀಪರ್‌‌‌ ಶ್ರೀಜೇಶ್‌‌ ಹೀಗೇಕೆ ಹೇಳಿದರು?

ಕಂಚಿನ ಪದಕಕ್ಕಾಗಿ ಆಡಿದ ಪಂದ್ಯದಲ್ಲಿ, ಪಂದ್ಯವು ಮುಗಿಯಲು ಆರು ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿ ತಂಡವು ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದ್ದರು. ಕೇರಳ ಮೂಲದವರಾದ ಶ್ರೀಜೇಶ್‌ ಈ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಭಾರತದ ಗೆಲುವಿಗೆ ನೆರವಾಗಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿನ್ನೆ, “ಟೋಕಿಯೊ ಒಲಿಂಪಿಕ್ಸ್‌ನ ಹಾಕಿ ಪಂದ್ಯದಲ್ಲಿ ಕಂಚಿನ ಪದಕ ಗೆದ್ದು, ನಾಡಿನ ಖ್ಯಾತಿಯನ್ನು ಹೆಚ್ಚಿಸಿದ ಪಿ.ಆರ್. ಶ್ರೀಜೇಶ್ ಅವರಿಗೆ ರಾಜ್ಯ ಸರ್ಕಾರ 2 ಕೋಟಿ ರೂ.ಗಳ ಪ್ರೀತಿಯ ಉಡುಗೊರೆಯನ್ನು ನೀಡಲಿದೆ. ಇದರ ಜೊತೆಯಲ್ಲಿ, ಅವರು ಶಿಕ್ಷಣ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಬಡ್ತಿ ಪಡೆಯಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

ಇದರ ಜೊತೆಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಉಳಿದ ಮಲಯಾಳಿ ಕ್ರೀಡಾ ತಾರೆಗಳಿಗೂ, ಈ ಮೊದಲೆ ಪ್ರಕಟಿಸಿದ್ದ ತಲಾ ಐದು ಲಕ್ಷ ರೂ ಪ್ರೋತ್ಸಾಹ ಧನದ ಜೊತೆಗೆ ಮತ್ತೆ ತಲಾ ಐದು ಲಕ್ಷ ರೂ. ನೀಡುವುದಾಗಿ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಪಿಣರಾಯಿ ವಿಜಯನ್ ಪ್ರಕಟಿಸಿದ್ದಾರೆ.

ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತ್ತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿದೆ. ಭಾರತವು 1980 ರ ಮಾಸ್ಕೋ ಕ್ರೀಡಾಕೂಟದಲ್ಲಿ ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಈ ಬಾರಿಯ ಒಲಿಂಪಿಕ್‌ನ ಹಾಕಿ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಉತ್ತಮ ಪ್ರದರ್ಶನ ನೀಡಿದೆ. ಒಲಿಂಪಿಕ್ ಇತಿಹಾಸದಲ್ಲೇ ಭಾರತದ ಮಹಿಳಾ ತಂಡ ಇದೇ ಮೊದಲ ಬಾರಿಗೆ ಸೆಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿದೆ. ಆದರೆ ಪದಕ ಗೆಲ್ಲಲು ವಿಫಲವಾಗಿ ತಂಡವು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಕೊಂಡಿದೆ.

ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...