Homeಮುಖಪುಟಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

- Advertisement -
- Advertisement -

“ಪೆಗಾಸಸ್‌ ಸ್ಪೈವೇರ್‌ ಬಳಸಿ ನನ್ನನ್ನು ಸೇರಿದಂತೆ ಅನೇಕ ರಾಜಕಾರಣಿಗಳ ಮೇಲೆ ಕಣ್ಗಾವಲು ಇಡಲಾಗಿದೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಅವರು ಇಂಗ್ಲೆಡ್‌‌ನ ಕೇಂಬ್ರಿಡ್ಜ್‌ ವಿಶ್ವವಿದ್ಯಾನಿಲಯದ ಉಪನ್ಯಾಸದ ವೇಳೆ ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಮಾತನಾಡಿರುವ ವಿಡಿಯೊವನ್ನು ಕಾಂಗ್ರೆಸ್‌ ನಾಯಕ ಸ್ಯಾಮ್ ಪಿತ್ರೋಡಾ ಅವರು ಶುಕ್ರವಾರ ಹಂಚಿಕೊಂಡಿದ್ದಾರೆ.

ಪೋನಿನಲ್ಲಿ ಮಾತನಾಡುವಾಗ ಜಾಗೂರೂಕವಾಗಿರಿ, ನಿಮ್ಮ ಕಾಲ್‌ ರೆಕಾರ್ಡ್ ಆಗುತ್ತಿದೆ ಎಂದು ಗುಪ್ತಚರ ಅಧಿಕಾರಿಗಳು ಹೇಳಿರುವುದಾಗಿ ರಾಹುಲ್‌ ತಿಳಿಸಿದ್ದಾರೆ.

2021ರಲ್ಲಿ 17 ಮಾಧ್ಯಮ ಸಂಸ್ಥೆಗಳು ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಒಂದು ಗುಂಪು ನಡೆಸಿದ ತನಿಖೆಗೆ ಸಂಬಂಧಿಸಿದಂತೆ ರಾಹುಲ್ ಪ್ರಸ್ತಾಪಿಸಿದ್ದಾರೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಪತ್ರಕರ್ತರು, ಹೋರಾಟಗಾರರು, ರಾಜಕಾರಣಿಗಳ ಮೇಲೆ ಕಣ್ಣಿಡಲು ಪೆಗಾಸಸ್ ಸ್ಪೈವೇರ್ ಅನ್ನು ಬಳಸಲಾಗುತ್ತಿದೆ ಎಂದು ತನಿಖಾ ವರದಿಗಳು ಹೇಳುತ್ತಿವೆ.

ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಭಾರತದ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರನ್ನು ಟಾರ್ಗೆಟ್‌ ಮಾಡಲು ಉದ್ದೇಶಿಸಿರುವುದನ್ನು ‘ದಿ ವೈರ್’ ವರದಿ ಬಿಚ್ಚಿಟ್ಟಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ 10 ಫೋನ್‌ಗಳನ್ನು ಭಾರತದಲ್ಲಿ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವೆಲ್ಲವೂ ಹ್ಯಾಕ್ ಆಗಿವೆ ಅಥವಾ ಇನ್ನೊಬ್ಬರಿಗೆ ಡಿವೈಸ್‌ಗಳು ಸುಲಭವಾಗಿ ಸಹಕರಿಸಿವೆ ಎಂದು ಪರೀಕ್ಷಾ ವರದಿ ತಿಳಿಸಿದೆ.

ಪ್ರಕರಣ ಬಯಲಿಗೆ ಬಂದ ನಂತರ ಆರೋಪಗಳ ತನಿಖೆ ಮತ್ತು ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಯಿತು. ಪೆಗಾಸಸ್ ಪ್ರಕರಣದಲ್ಲಿನ ಸಮಸ್ಯೆಗಳನ್ನು ತನಿಖೆ ಮಾಡಲು ನ್ಯಾಯಾಲಯವು ತಾಂತ್ರಿಕ ಸಮಿತಿಯನ್ನು ಅಕ್ಟೋಬರ್‌ನಲ್ಲಿ ರಚಿಸಿತ್ತು. ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ಅಫಿಡವಿಟ್‌ಗಳನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ ಎನ್ನುತ್ತಿರುವ ಕೇಂದ್ರ ಸರ್ಕಾರವನ್ನು ಕೋರ್ಟ್ ಕಟುವಾಗಿ ಟೀಕಿಸಿತ್ತು.

ಅಕ್ರಮ ಕಣ್ಗಾವಲು ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಆಗಸ್ಟ್‌ನಲ್ಲಿ ಸಲ್ಲಿಸಿದ 29 ಸಾಧನಗಳ ಪೈಕಿ ಐದರಲ್ಲಿ ಮಾಲ್‌ವೇರ್ ಕುರುಹುಗಳು ಕಂಡುಬಂದಿವೆ. ಆದಾಗ್ಯೂ, ಮಾಲ್ವೇರ್ ಪೆಗಾಸಸ್ ಆಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ: ಕಾಂಗ್ರೆಸ್ ಆರೋಪ

ಇಸ್ರೇಲಿ ಸೈಬರ್ ಗುಪ್ತಚರ ಕಂಪನಿಯಾದ ಎನ್‌ಎಸ್‌ಒ ಗ್ರೂಪ್‌ನ ಮೂಲಕ ಪೆಗಾಸಸ್ ಸ್ಪೈವೇರ್‌ನ ಖರೀದಿಗಳು ನಡೆದಿವೆ. ಪ್ರಪಂಚದಾದ್ಯಂತದ ಸರ್ಕಾರಗಳಿಗೆ ಪರವಾನಗಿಯನ್ನು ಕಂಪನಿಯು ನೀಡಿದೆ. ಉತ್ತಮ ಮಾನವ ಹಕ್ಕುಗಳ ದಾಖಲೆ ‘ಪರಿಶೀಲಿಸಿದ ಸರ್ಕಾರಗಳಿಗೆ’ ಮಾತ್ರ ಸ್ಪೈವೇರ್‌ ಮಾರಾಟ ಮಾಡಲಾಗಿದೆ, ಅಪರಾಧಿಗಳನ್ನು ಗುರಿಯಾಗಿಸುವ ಉದ್ದೇಶ ಇದಕ್ಕಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಅನುರಾಗ್ ಠಾಕೂರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದ್ದು, “ಇತ್ತೀಚಿನ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದೆ. ಹೀಗಾಗಿ ರಾಹುಲ್‌ ಗಾಂಧಿಯವರು ವಿದೇಶಿ ನೆಲದಲ್ಲಿ ನಿಂತು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪ್ರಧಾನಿಯವರ ಮೇಲಿನ ಅವರ ದ್ವೇಷವನ್ನು ನಾವು ಅರ್ಥಮಾಡಿಕೊಳ್ಳಬಹುದು, ಆದರೆ ವಿದೇಶಿ ಸ್ನೇಹಿತರ ಸಹಾಯದಿಂದ ವಿದೇಶಿ ನೆಲದಲ್ಲಿ ನಿಂತು ದೇಶವನ್ನು ಕೆಡಿಸುವ ಪಿತೂರಿ ಇದಾಗಿದೆ. ಕಾಂಗ್ರೆಸ್‌ನ ಕಾರ್ಯಸೂಚಿಗಳು ಪ್ರಶ್ನಾರ್ಹವಾಗಿವೆ” ಎಂದಿದ್ದಾರೆ ಠಾಕೂರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...